ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ಇನ್ನಿಲ್ಲ

ಬೆಂಗಳೂರು,ಡಿ.19 : ಕನ್ನಡ ಚಲನಚಿತ್ರ ಹಿರಿಯ ನಿರ್ದೇಶಕ ಹಾಗೂ ನಟ ಬೂದಾಳ್ ಕೃಷ್ಣಮೂರ್ತಿ(71) ಇಂದು ಬೆಳಗ್ಗೆ 7 ಗಂಟೆಯ ವೇಳೆಯಲ್ಲಿ ಕೆಂಗೇರಿಯ ಶಿರ್ಕಿ ಅಪಾರ್ಟಮೆಂಟಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿಯವರು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಚಿತ್ರದುರ್ಗದಲ್ಲಿ 1949ರಲ್ಲಿ ಜನಿಸಿದ ಇವರು, 1973ರಲ್ಲಿ ಸಿದ್ಧಲಿಂಗಯ್ಯನವರ ಬೂತಯ್ಯನ ಮಗ ಅಯ್ಯು ಚಲನಚಿತ್ರದ ಸಹಾಯಕ ನಿರ್ದೇಶಕರಾಗುವ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು. ಎರಡು ದಂಡೆಯ ಮೇಲೆ, ಒಲವಿನ ಕಾಣಿಕೆ, ಸೀತಾಂಜನೇಯ, ಶುಭಲಗ್ನ, ಲಂಚ ಸಾಮ್ರಾಜ್ಯ ಮುಂತಾದ ಚಿತ್ರಗಳನ್ನು ಬೂದಾಳ್ ಅವರು ನಿರ್ದೇಶಿಸಿದ್ದರು.

ಪ್ರೊಫೆಸರ್, ಶ್ರೀಗಂಧ, ಅರಿಶಿನ ಕುಂಕುಮ, ಬಲ್ ನನ್ಮಗ, ಪ್ರಜಾಶಕ್ತಿ, ನಿರ್ಣಯ, ಆರ್ಯಭಟ ಮುಂತಾದ ಚಿತ್ರಗಳಲ್ಲಿ ಬೂದಾಳ್ ಕೃಷ್ಣಮೂರ್ತಿ ಅಭಿನಯಿಸಿದ್ದರು.

Exit mobile version