ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನಿಶ್ಚಿತ: ಕಾಂಗ್ರೆಸ್​​ನಲ್ಲಿ ಕಂಪನ ಸೃಷ್ಟಿಸಿದ ಶಾಸಕನ ಹೇಳಿಕೆ

Belagavi : ಕರ್ನಾಟಕ ಕಾಂಗ್ರೆಸ್​ನಲ್ಲಿ ಸಿ.ಎಂ ಕುರ್ಚಿಯ ಕದನ ತಣ್ಣಗಾಗುವ ಮೊದಲೇ ಸಿಎಂ ಅಧಿಕಾರಿ ಹಂಚಿಕೆ ಬಗ್ಗೆ ಸಿದ್ದರಾಮಯ್ಯ (SatishJarkiholi became cm) ಮತ್ತು ಡಿಸಿಎಂ ಡಿಕೆ ಶಿವಕುಮಾರ್

ಬೆಂಬಲಿಗರ ನಡುವೆ ಪೈಪೋಟಿ ಆರಂಭಗೊಂಡಿದ್ದು, ಎರಡೂ ಬಣಗಳ ಮಾತಿನ ಸಮರಕ್ಕೆ ಹೈಕಮಾಂಡ್ ಬ್ರೇಕ್​ ಹಾಕಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ (Congress) ಶಾಸಕರೊಬ್ಬರು ಸತೀಶ್

ಜಾರಿಕೊಹೊಳಿ (Satish Jarikoholi) ಮುಖ್ಯಮಂತ್ರಿಯಾಗುವುದು ನಿಶ್ಚಿತ (SatishJarkiholi became cm) ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಸಿಎಂ (CM) ಆಗುವುದು ನೂರಕ್ಕೆ ನೂರರಷ್ಟು ಸತ್ಯ. ಸತೀಶ್ ಜಾರಕಿಹೊಳಿ​​ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಸತೀಶ್​ ಜಾರಕಿಹೊಳಿಯನ್ನು ಸಿಎಂ ಆಗಿ

ನೋಡಬೇಕೆಂದು ಹೇಳುತ್ತಿದ್ದಾರೆ. ಮುಂದಿನ ದಿನದಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬ ಸಿಎಂ ಆಗುತ್ತಾರೆ.

ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ ಎಂದು ಬೆಳಗಾವಿ (Belagavi) ಜಿಲ್ಲೆಯ ಯರಗಟ್ಟಿಯಲ್ಲಿ ಮಾತನಾಡಿದ

ವಿಶ್ವಾಸ್ ವೈದ್ಯ ಹೇಳಿದ್ದಾರೆ. ಜಾರಕಿಹೊಳಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿಶ್ವಾಸ್ ವೈದ್ಯ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಈ ಮೊದಲೇ ಕೆಲ

ಕಾರಣಾಂತರಗಳಿಂದ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದು, ತಮ್ಮ ರಾಜಕೀಯ ವರಸೆ ತೋರಿಸಲು ಮುಂದಾಗಿದ್ದರು. ಇದಕ್ಕೆ ಹೈಕಮಾಂಡ್ (High Command) ಬ್ರೇಕ್ ಹಾಕಿ

ಅಸಮಾಧಾನವನ್ನು ಶಮನ ಮಾಡಲು ಮುಂದಾಗಿದ್ದಾರೆ.

ಆದರೂ ಜಾರಕಿಹೊಳಿ ಸಮಾಧಾನಗೊಂಡವರಂತೆ ಕಂಡುಬಂದಿಲ್ಲ. ಹೀಗಾಗಿ ಮೊನ್ನೇ ಅಷ್ಟೇ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K. Shivakumar) ಹಾಗೂ ಅವರ ಸಹೋದರ ಡಿಕೆ

ಸುರೇಶ್ ಪತ್ರೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಇದನ್ನು ಓದಿ: ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಹೆಚ್.​ಡಿ ದೇವೇಗೌಡರೇ ಉಳಿಯುವುದು ಅನುಮಾನ: ಸಿಎಂ ಇಬ್ರಾಹಿಂ ವಾಗ್ದಾಳಿ

Exit mobile version