ದೇಶದೆಲ್ಲೆಡೆ ಪಟಾಕಿ ನಿಷೇಧ: ಹಸಿರು ಪಟಾಕಿಗೆ ಮಾತ್ರ ಅವಕಾಶ, ಸುಪ್ರೀಂಕೋರ್ಟ್ ತೀರ್ಪು

New Delhi: ಇನ್ನೇನು ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಈ ಹಬ್ಬವನ್ನು (sc ban firecrackers) ದೇಶದೆಲ್ಲೆಡೆ ಆಚರಿಸಲು ಜನತೆ ಸಿದ್ಧರಿರುವಾಗಲೇ ಸುಪ್ರೀಂಕೋರ್ಟ್

(Supreme Court) ಮಹತ್ವದ ತೀಪು ಹೊರಡಿಸಿದೆ. 2018ರ ಪಟಾಕಿ ನಿಷೇಧದ ಆದೇಶ ಕೇವಲ ದೆಹಲಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯವಾಗುತ್ತೆ ಎಂದು ಪಟಾಕಿ (Firecrackers)

ನಿಷೇಧದ ಬಗ್ಗೆ ಮತ್ತೆ ಸುಪ್ರೀಂಕೋರ್ಟ್​ (sc ban firecrackers) ಸ್ಪಷ್ಟನೆ ನೀಡಿದೆ.

ಬೇರಿಯಂ ಸೇರಿ ನಿಷೇಧಿತ ರಾಸಾಯನಿಕ ಬಳಸಿರುವ ಪಟಾಕಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅನುಮತಿ ಇದೆ ಎಂದಿದೆ.

ದೀಪಾವಳಿ ಹಬ್ಬ, ಇತರೆ ಹಬ್ಬ, ಕಾರ್ಯಕ್ರಮಗಳಿಗೂ ಈ ನಿಯಮ ಅನ್ವಯವಾಗುತ್ತೆ ಎಂದಿದೆ.

2018ರ ಆದೇಶವನ್ನು ರಾಜಸ್ಥಾನದಲ್ಲೂ (Rajasthan) ಜಾರಿ ಮಾಡಬೇಕು ಎಂದು ರಾಜಸ್ಥಾನದ ವ್ಯಕ್ತಿ ಸೇರಿ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸದ್ಯ ಅರ್ಜಿ ವಿಚಾರಣೆ ನಡೆಸಿ ಪಟಾಕಿ

ಬಳಕೆ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದ್ದು, ದೇಶದಲ್ಲಿ ನಿಷೇಧಿತ ರಾಸಾಯನಿಕಗಳು ಮತ್ತು ಬೇರಿಯಂ ಲವಣಗಳಿರುವ ಪಟಾಕಿ ಮಾರಾಟ ಮಾಡುವುದನ್ನು, ಖರೀದಿಸುವುದನ್ನು ಮತ್ತು ಬಳಕೆ

ಮಾಡುವುದನ್ನು ನಿಷೇಧಿಸಬೇಕು. 2018ರ ಪಟಾಕಿ ನಿಷೇಧದ ಆದೇಶ ಇಡೀ ದೇಶಕ್ಕೆ ಅನ್ವಯ ಎಂದು ಸ್ಪಷ್ಟನೆ ನೀಡಿದೆ.

ಹಿಂದಿನ ಆದೇಶದಲ್ಲಿ, ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಸ್ಥಳೀಯ ಸರ್ಕಾರಕ್ಕೆ ನಿರ್ಧಾರ ತೆಗೆದುಕೊಳ್ಳಲು . ಆಸ್ಪತ್ರೆಗಳಂತಹ ಆರೋಗ್ಯ ಸೂಕ್ಷ್ಮ ಸ್ಥಳಗಳಲ್ಲಿ ಪಟಾಕಿ ಸಿಡಿಸದಂತೆ

ಹಾಗೂ ಪಟಾಕಿ ಸಿಡಿಸಲು ಸಮಯ ಮಿತಿಯನ್ನು ನಿಗದಿಪಡಿಸುವಂತೆ ತಿಳಿಸಿದ್ದೆವು. ಎನ್‌ಸಿಆರ್‌ಗೆ (NCR) ಒಳಪಡುವ ರಾಜಸ್ಥಾನದ ಪ್ರದೇಶಗಳಿಗೂ ದೆಹಲಿ-ಎನ್‌ಸಿಆರ್ ನಿಯಮಗಳು ಅನ್ವಯಿಸುತ್ತವೆ.

ಅಂದರೆ ಅಲ್ಲಿಯೂ ಪಟಾಕಿ ಸಿಡಿಸುವುದಕ್ಕೆ ನಿಷೇಧವಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸದ್ಯ ಬೇರಿಯಂ, ಕೆಲ ನಿಷೇಧಿತ ಕೆಮಿಕಲ್ (Chemical) ಪಟಾಕಿ ಬಳಕೆ, ಮಾರಾಟ ನಿಷೇಧಿಸಿದ್ದು ಹಸಿರು ಪಟಾಕಿ ಮಾರಾಟ, ಬಳಕೆಗೆ ಮಾತ್ರ ಅನುಮತಿ ನೀಡಿದೆ. ಇದೇ ವೇಳೆ ಪಂಜಾಬ್ (Punjab),

ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ತ್ಯಾಜ್ಯವನ್ನು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ವಾಯುಮಾಲಿನ್ಯ, ಶಬ್ದ ಮಾಲಿನ್ಯ ಉಂಟುಮಾಡುವ ಪಟಾಕಿಗಳನ್ನು

ನಿಷೇಧಿಸಿದ್ದು ಘನತ್ಯಾಜ್ಯ ಉತ್ಪತ್ತಿ ಮಾಡುವ ಪಟಾಕಿ ಬಳಕೆ, ಮಾರಾಟ ನಿಷೇಧಿಸಲಾಗಿದೆ.

ಇನ್ನು ದೀಪಾವಳಿಗೂ ಮುನ್ನ ನಿಷೇಧಿತ ರಾಸಾಯನಿಕಗಳನ್ನು ಬಳಸಿರುವ ಪಟಾಕಿ ಸಿಡಿಸದಂತೆ 2021ರಲ್ಲಿ ಸುಪ್ರೀಂ ಕೋರ್ಟ್‌ ಹಲವು ನಿರ್ದೇಶನಗಳನ್ನು ನೀಡಿತ್ತು. ಪಟಾಕಿಗಳ ಮೇಲೆ ಸಂಪೂರ್ಣ

ನಿಷೇಧವಿಲ್ಲ ಮತ್ತು ಬೇರಿಯಂ ಲವಣಗಳನ್ನು ಹೊಂದಿರುವ ಪಟಾಕಿಗಳನ್ನು ಮಾತ್ರ ನಿಷೇಧಿಸಲಾಗಿದೆ ಎಂದು ಪೀಠ ಸ್ಪಷ್ಟಪಡಿಸಿದೆ. 2018 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಅನುಸರಿಸಿ

ಹಸಿರು ಪಟಾಕಿಗಳನ್ನು ಅನುಮತಿಸಲಾಗಿದೆ.

2018ರಲ್ಲಿ ನ್ಯಾಯಾಲಯವು ಪಟಾಕಿ ಸಿಡಿಸಲು ಸಮಯವನ್ನು ನಿಗದಿಪಡಿಸಿತ್ತು. ದೀಪಾವಳಿ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮತ್ತು ಹೊಸ ವರ್ಷ ಹಾಗೂ ಕ್ರಿಸ್ಮಸ್ (Christmas)

ಹಬ್ಬದ ಸಂದರ್ಭದಲ್ಲಿ ರಾತ್ರಿ 11.55ರಿಂದ, 12.30ರವರೆಗಿನ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿತ್ತು.

ಇದನ್ನು ಓದಿ: ಗೋಮಾಂಸ ರಫ್ತಿನ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು : ನಟ ಚೇತನ್

Exit mobile version