Delhi: ಯೋಗ ಗುರು ರಾಮ್ದೇವ್ (Ramdev) ಸಹ – ಸ್ಥಾಪಿತವಾದ ಪತಂಜಲಿ ಆಯುರ್ವೇದ್ ಕಂಪನಿಯು ಹಲವಾರು ರೋಗಗಳಿಗೆ ಚಿಕಿತ್ಸೆ ನೀಡುವ ಕುರಿತು ಜಾಹೀರಾತುಗಳಲ್ಲಿ “ಸುಳ್ಳು” ಮತ್ತು ‘ದಾರಿತಪ್ಪಿಸುವ’ ಕೆಲಸ ಮಾಡದಂತೆ ಸುಪ್ರೀಂಕೋರ್ಟ್ (Supreme court) ಮಂಗಳವಾರ ಎಚ್ಚರಿಸಿದೆ.
ಪತಂಜಲಿ ಆಯುರ್ವೇದದ (Patanjali Ayurveda) ಇಂತಹ ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಕೂಡಲೇ ನಿಲ್ಲಿಸಬೇಕು. ಅಂತಹ ಯಾವುದೇ ಉಲ್ಲಂಘನೆಯನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ (Prashanth Kumar Mishra) ಅವರನ್ನೊಳಗೊಂಡ ಪೀಠವು ಮೌಖಿಕವಾಗಿ ಹೇಳಿದೆ.
ವ್ಯಾಕ್ಸಿನೇಷನ್ ಡ್ರೈವ್ (Vaccination Drive) ಮತ್ತು ಆಧುನಿಕ ಔಷಧಿಗಳ ವಿರುದ್ಧ ರಾಮ್ದೇವ್ ಅವರ ಅಭಿಯಾನವನ್ನು ಆರೋಪಿಸಿ ಐಎಂಎ (IMA) ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್, ಆಗಸ್ಟ್ 23, 2022 ರಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಆಯುಷ್ (Ayush) ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್ಗೆ ನೋಟಿಸ್ ಜಾರಿ ಮಾಡಿತ್ತು.
ವಿಚಾರಣೆಯ ಸಂದರ್ಭದಲ್ಲಿ, ಒಂದು ನಿರ್ದಿಷ್ಟ ಕಾಯಿಲೆಯನ್ನು ಗುಣಪಡಿಸಬಹುದು ಎಂದು ಸುಳ್ಳು ಹೇಳಿಕೆ ನೀಡಿದರೆ ಪ್ರತಿ ಉತ್ಪನ್ನಕ್ಕೆ ₹ 1 ಕೋಟಿ ದಂಡ ವಿಧಿಸಲು ಪೀಠವು ಪರಿಗಣಿಸಬಹುದು ಎಂದು ಅದು ಹೇಳಿದ್ದು, ಪೀಠವು ಪತಂಜಲಿ ಆಯುರ್ವೇದ್ಗೆ (Ayurved) ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ಹಕ್ಕುಗಳು ಮತ್ತು ಜಾಹೀರಾತುಗಳನ್ನು ಪ್ರಕಟಿಸದಂತೆ ಕೇಳಿಕೊಂಡಿತು.
ಕೆಲವು ಖಾಯಿಲೆಗಳಿಗೆ ಪರಿಪೂರ್ಣ ಚಿಕಿತ್ಸೆ ನೀಡುವ ಔಷಧಗಳ ಬಗ್ಗೆ ಹೇಳಿಕೊಳ್ಳಲಾಗುತ್ತಿರುವ ತಪ್ಪು ವೈದ್ಯಕೀಯ ಜಾಹೀರಾತುಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರದ ಪರ ಹಾಜರಾದ ವಕೀಲರನ್ನು ಸುಪ್ರೀಂಕೋರ್ಟ್ ಕೇಳಿದೆ. ಇನ್ನು ಪೀಠವು ಮುಂದಿನ ವರ್ಷ ಫೆಬ್ರವರಿ (February) 5 ರಂದು ಐಎಂಎಯ ಮನವಿಯನ್ನು ವಿಚಾರಣೆ ನಡೆಸಲಿದೆ.
ಮೇಲ್ಮನವಿಯ ಮೇಲೆ ನೋಟಿಸ್ (Notice) ಜಾರಿ ಮಾಡುವಾಗ, ಅಲೋಪತಿ ಮತ್ತು ಅಲೋಪತಿ ವೈದ್ಯರನ್ನು ಟೀಕಿಸಿದ್ದಕ್ಕಾಗಿ ರಾಮ್ದೇವ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್, ವೈದ್ಯರು ಮತ್ತು ಇತರ ಚಿಕಿತ್ಸಾ ವ್ಯವಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಬೇಕು ಎಂದು ಹೇಳಿದೆ.
“ಈ ಗುರು ಸ್ವಾಮಿ ರಾಮದೇವ್ ಬಾಬಾಗೆ ಏನಾಗಿದೆ?.ಯೋಗವನ್ನು ಜನಪ್ರಿಯಗೊಳಿಸಿದ್ದರಿಂದ ನಾವು ಅವರನ್ನು ಗೌರವಿಸುತ್ತೇವೆ. ನಾವೆಲ್ಲರೂ ಇದನ್ನು ಒಪ್ಪುತ್ತೇವೆ.ಆದರೆ, ಅವರು ಇತರ ವ್ಯವಸ್ಥೆಯನ್ನು ಟೀಕಿಸಬಾರದು. ಆಯುರ್ವೇದದಲ್ಲೇ ಗುಣಮುಖರಾಗುತ್ತಾರೆ ಎಂಬುದಕ್ಕೆ ಏನು ಗ್ಯಾರಂಟಿ (Guarantee). ಎಲ್ಲ ವೈದ್ಯರನ್ನೂ ಕೊಲೆಗಾರರು ಅಥವಾ ಇನ್ನೇನೋ ಎಂದು ಆರೋಪಿಸುತ್ತಿರುವ ಜಾಹೀರಾತುಗಳನ್ನು ನೀವು ನೋಡುತ್ತೀರಿ. ಬೃಹತ್ ಜಾಹೀರಾತುಗಳನ್ನು (ನೀಡಲಾಗಿದೆ)” ಎಂದು ನಿವೃತ್ತರಾದ ನಂತರ ಆಗಿನ ಸಿಜೆಐ ಎನ್ವಿ ರಮಣ (CJI NV Ramana) ನೇತೃತ್ವದ ಪೀಠ ಹೇಳಿತು.
ಭವ್ಯಶ್ರೀ ಆರ್ ಜೆ