• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸ್ಮಾರ್ಟ್ ಮೀಟರ್ ಟೆಂಡರ್ ಅಕ್ರಮ : ಕೆಜೆ ಜಾರ್ಜ್​ ವಿರುದ್ಧ ಪಿಸಿಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸ್ಮಾರ್ಟ್ ಮೀಟರ್ ಟೆಂಡರ್ ಅಕ್ರಮ : ಕೆಜೆ ಜಾರ್ಜ್​ ವಿರುದ್ಧ ಪಿಸಿಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ
0
SHARES
37
VIEWS
Share on FacebookShare on Twitter
  • ಇಂಧನ ಸಚಿವ ಕೆಜೆ ಜಾರ್ಜ್ ಗೆ ತಪ್ಪದ ಸ್ಮಾರ್ಟ್ ಮೀಟರ್ ಸಂಕಷ್ಟ
  • ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಇಂಧನ ಸಚಿವರ ಅವ್ಯವಹಾರ
  • ಪ್ರತ್ಯೇಕ ಟೆಂಡರ್ ಕರೆಯದೆ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಿದ ಆರೋಪ

Bengaluru: ಕೆಲ ದಿನಗಳ ಹಿಂದಷ್ಟೇ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವಂತಿಲ್ಲ. ಆದರೆ ಸರ್ಕಾರ ಕಡ್ಡಾಯ ಮಾಡಿದೆ.

ಮೀಟರ್ ದರ‌ ನಿಗದಿಯಲ್ಲೂ ವ್ಯತ್ಯಾಸವಿದೆ. ಹಣ ಮಾಡಲು ಸರ್ಕಾರ ಈ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು

ಆದರೆ ಇದೀಗ ಮತ್ತೆ ಸದ್ದು ಮಾಡ್ತಿದೆ ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಅಕ್ರಮ ಹಗರಣ (Smart Meter Scam) ಇದೀಗ ಹೊಸ ರೂಪ ಪಡೆದುಕೊಂಡಿದೆ.

ಸ್ಮಾರ್ಟ್ ಮೀಟರ್ ಅಳವಡಿಕೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದ ಅಧಿಕಾರಿಗಳಿಗೆ ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆ ಮಾಡದೇ ಟೆಂಡರ್ ನೀಡಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಈ ಕುರಿತಾಗಿ ಈ ಹಿಂದೆ ಲೋಕಾಯುಕ್ತಕ್ಕೆ ದೂರು ನೀಡಿದ್ದರೂ ಯಾವುದೇ ರೀತಿಯ ತನಿಖಾ ಪ್ರಗತಿ ಕಾಣದೇ ಇರುವುದರಿಂದ ಇದೀಗ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗಾಗಿ ನಡೆಸಿದ ಟೆಂಡರ್ ಪೂರ್ತಿಯಾಗಿ ಅಕ್ರಮವಾಗಿದೆ.

scam in smart meter tender akrama KJ George
Smart Meter Scam
ಟೆಂಡರ್ ಪ್ರಕ್ರಿಯೆ ಕೂಡ ಸರಿಯಾಗಿ ನಡೆದಿಲ್ಲ ಎಂಬ ಆರೋಪ ಇರುವುದರಿಂದಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರು

ಮತ್ತು ಇಂಧನ ಸಚಿವರೂ ಆಗಿರುವ ಕೆ.ಜೆ.ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಿಕೊಳ್ಳಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಇನ್ನು ಈಗಾಗಲೇ ಹಲವು ದಿನಗಳಿಂದ ಸ್ಮಾರ್ಟ್ ಮೀಟರ್ ಟೆಂಡರ್ ಸುದ್ದಿ ಎಲ್ಲೆಡೆ ಸದ್ದು ಮಾಡಿದ್ದು ಈ ಆರೋಪಕ್ಕೆ ಸಂಬಂಧಿಸಿದ ಹಾಗೆ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ

ಶಾಸಕರು ಮತ್ತು ಸಂಸದರ ವಿರುದ್ಧ ಕೂಡ ಕ್ರಿಮಿನಲ್ ಪ್ರಕರಣಗಳ ದಾಖಲಿಸಿ ವಿಚಾರಣೆಗೆ ಒಳಪಡಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿರುವ ಸಂತೋಷ ಗಜಾನನ ಭಟ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಇನ್ನು ಸ್ಮಾರ್ಟ್ ಮೀಟರ್ ಟೆಂಡರ್ ಅಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ನೀಡಿರುವ ದೂರಿನ ಕುರಿತಾದ ವಸ್ತುಸ್ಥಿತಿ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿ

ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ನ್ಯಾಯಾಧೀಶರು ವಿಚಾರಣೆಯನ್ನು ಮತ್ತಷ್ಟು ದಿನಗಳ ಕಾಲ ಮುಂದೂಡಿದ್ದಾರೆ.

ಇನ್ನು ಈಗಾಗಲೇ ಸಲ್ಲಿಸಿರುವ ದೂರಿನಲ್ಲಿ ಸಚಿವ ಕೆ.ಜೆ.ಜಾರ್ಜ್, ಹಾಗೂ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌರವ ಗುಪ್ತ,

ಹಾಗೂ ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕರಗಿರುವ ಮಹಾಂತೇಶ ಬೀಳಗಿ ಮತ್ತು ಬೆಸ್ಕಾಂನ ತಾಂತ್ರಿಕ ನಿರ್ದೇಶರಾಗಿರುವ ಎಚ್.ಜೆ.ರಮೇಶ್ ಅವರನ್ನು ಆರೋಪಿಗಳನ್ನಾಗಿ ಪರಿಗಣಿಸಿ ದೂರು ನೀಡಲಾಗಿದ್ದು

ಸ್ಮಾರ್ಟ್ ಮೀಟರ್ ಟೆಂಡರ್ ಅವ್ಯವಹಾರದ ಕುರಿತಾಗಿ ಬಿಜೆಪಿಯ ಶಾಸರಾಗಿರುವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಈ ಖಾಸಗಿಯ ದೂರನ್ನು ಸಲ್ಲಿಸಿದ್ದಾರೆ.

ಇನ್ನು ದೂರುದಾರರ ಪರವಾಗಿ ಕೋರ್ಟ್ ನಲ್ಲಿ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದ್ದಾರೆ.

ಸ್ಮಾರ್ಟ್ ಮೀಟರ್ ಅಳವಡಿಸಲು 2024ರ ಸೆಪ್ಟೆಂಬರ್ 26ರಂದು ಟೆಂಡರ್ ಕರೆಯಲಾಗಿತ್ತು.

ಪ್ರಕ್ರಿಯೆ ಕುರಿತಾಗಿ ಎಲ್ಲಿಯೂ ಜಾಹೀರಾತು ನೀಡದೆ ಟೆಂಡರ್ ಪ್ರಕ್ರಿಯೆ ಆರಂಭಿಸದೆ ನೇರವಾಗಿ ಬಿಡ್ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಎಂಬ ಶೆಲ್ ಕಂಪನಿಗೆ ಟೆಂಡರ್ ನೀಡಲಾಗಿದೆ.

ಇದು ಕಾನೂನು ಬಾಹಿರವಾದ ಪ್ರಕ್ರಿಯೆಯಾಗಿದ್ದು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (KTPP) ಅಧಿನಿಯಮ-2000 ಮತ್ತು

ಇದನ್ನು ಓದಿ :  ಇಂದಿನಿಂದ ಮೂರು ದಿನ ಹಾಲು ಹಾಗೂ ಹಾಲಿನ ಉತ್ಪನ್ನ ಮಾರಾಟ ಭಾಗಶಃ ಬಂದ್: ಜುಲೈ 25 ರಂದು ವರ್ತಕರ ಮುಷ್ಕರ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿಯಮಗಳಿಗೆ ವಿರುದ್ಧವಾಗಿರುವುದಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

Tags: bescomCriminal CaseDavanagere Rajashree Electricalsenergy ministerKarnataka corruptionKERC rulesKTPP ActLokayuktatender scamvijaya timesಕೆಜೆ ಜಾರ್ಜ್ಸ್ಮಾರ್ಟ್ ಮೀಟರ್

Related News

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ
ಪ್ರಮುಖ ಸುದ್ದಿ

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ

January 19, 2026
ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ
ಪ್ರಮುಖ ಸುದ್ದಿ

ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ

January 19, 2026
ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು
ದೇಶ-ವಿದೇಶ

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು

January 19, 2026
ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ
ದೇಶ-ವಿದೇಶ

ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ

January 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.