• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಚಿವ ರಾಜಣ್ಣ ರಾಜೀನಾಮೆ ರಹಸ್ಯ ಬಯಲು: ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಸಂಪುಟದಿಂದ ಗೇಟ್ ಪಾಸ್

Shameena Mulla by Shameena Mulla
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸಚಿವ ರಾಜಣ್ಣ ರಾಜೀನಾಮೆ ರಹಸ್ಯ ಬಯಲು: ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಸಂಪುಟದಿಂದ ಗೇಟ್ ಪಾಸ್
0
SHARES
14
VIEWS
Share on FacebookShare on Twitter
  • ಹೈಕಮಾಂಡ್ ನಿರ್ಧಾರದಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
  • ಸಿಎಂ ಸಿದ್ಧರಾಮಯ್ಯ ಅವರ ಪ್ರಯತ್ನ ವಿಫಲ (Secret behind Rajanna Resignation)
  • ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದ್ದ ರಾಜಣ್ಣ

Bengaluru: ರಾಜ್ಯದ ರಾಜಕೀಯ ವಲಯದಲ್ಲಿ ನಿನ್ನೆ ದೊಡ್ಡ ಸಂಚಲನ ಉಂಟಾಗುವಂತಹ ಬೆಳವಣಿಗೆ ನಡೆದಿದೆ.(Secret behind Rajanna Resignation)

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಸಂಪುಟದಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎನ್ ರಾಜಣ್ಣ (K.N.Rajanna) ಅವರನ್ನು ಅಕಸ್ಮಾತ್ ಸಂಪುಟದಿಂದ ವಜಾಗೊಳಿಸಲಾಗಿದೆ.

Secret behind Rajanna Resignation
ರಾಜಣ್ಣ ಅವರ ನಿರ್ಗಮನ ಕಾಂಗ್ರೆಸ್ (Congress) ಶಿಬಿರದಲ್ಲೂ, ವಿರೋಧ ಪಕ್ಷಗಳಲ್ಲೂ ಚರ್ಚೆಗೆ ಕಾರಣವಾಗಿತ್ತು.ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ರಾಜಕೀಯ ಸಮೀಕರಣಗಳ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ.

ಇನ್ನು ಕಾಂಗ್ರೆಸ್ ಹೈಕಮಾಂಡ್ ನಿನ್ನೆ ಸಂಜೆ 6 ಗಂಟೆಯೊಳಗೆ ರಾಜಣ್ಣ ಅವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಸೂಚನೆ ನೀಡಿತ್ತು.

ಅವರು ರಾಜೀನಾಮೆ ನೀಡದಿದ್ದರೆ, ಪಕ್ಷದಿಂದಲೇ ಉಚ್ಛಾಟನೆ ಮಾಡುವ ನಿರ್ಧಾರ ಹೈಕಮಾಂಡ್ (High Command) ಮಟ್ಟದಲ್ಲಿ ಕೈಗೊಳ್ಳಲಾಗಿತ್ತು.

ಇದರಿಂದಾಗಿ ಸಿಎಂ ಸಿದ್ದರಾಮಯ್ಯ ತಕ್ಷಣ ರಾಜಣ್ಣ ಅವರೊಂದಿಗೆ ಮಾತುಕತೆ ನಡೆಸಿ, ಉಚ್ಛಾಟನೆಯ ಅಪಮಾನ ತಪ್ಪಿಸಲು ಸ್ವಯಂ ರಾಜೀನಾಮೆ ನೀಡುವಂತೆ ಮನವರಿಕೆ ಮಾಡಿದ್ದರು.

ಅಂತಿಮವಾಗಿ, ರಾಜಣ್ಣ ತಮ್ಮ ರಾಜೀನಾಮೆ ಪತ್ರವನ್ನು ಸಿಎಂನ ಆಪ್ತ ಕಾರ್ಯದರ್ಶಿಗೆ ಹಸ್ತಾಂತರಿಸಿ ವಿಧಾನಸೌಧದಿಂದ ಹೊರಟಿದ್ದರು.

ನಂತರದಲ್ಲಿ ಆ ರಾಜೀನಾಮೆಯನ್ನು ಸಿಎಂ ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದರು.(Secret behind Rajanna Resignation)

ರಾಜಭವನದಿಂದ ಬಂದ ಅನುಮೋದನೆ ಪ್ರತಿಯನ್ನು ತಕ್ಷಣವೇ ರಾಹುಲ್ ಗಾಂಧಿಯ ಕಚೇರಿಗೂ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜಣ್ಣ ಅವರು ಸಿಎಂನ ಆಪ್ತ ಸಹೋದ್ಯೋಗಿಗಳಲ್ಲಿ ಒಬ್ಬರಾಗಿದ್ದು, ಅವರನ್ನು ಸಂಪುಟದಲ್ಲಿ ಉಳಿಸಿಕೊಳ್ಳಲು ಸಿಎಂ ಹಲವು ಪ್ರಯತ್ನಗಳನ್ನು ನಡೆಸಿದ್ದರು ಎನ್ನಲಾಗಿದೆ. ಆದರೆ, ಹೈಕಮಾಂಡ್ ನಿರ್ಧಾರದ ಮುಂದೆ ಸಿಎಂ ಸಹ ನಿಲ್ಲಲು ಸಾಧ್ಯವಾಗಲಿಲ್ಲ.

ಇತ್ತೀಚಿನ ದಿನಗಳಲ್ಲಿ ರಾಜಣ್ಣ ನೀಡಿದ್ದ ಕೆಲವು ಹೇಳಿಕೆಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಅಸಮಾಧಾನ ಉಂಟುಮಾಡಿದ್ದವು. ವಿಶೇಷವಾಗಿ, ಮತದಾರರ ಪಟ್ಟಿಯ ವಿಚಾರದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಅವರು ಮಾಡಿದ್ದ ಟೀಕೆ ದೊಡ್ಡ ವಿವಾದಕ್ಕೆ ಕಾರಣವಾಯಿತು.

ಆಗಸ್ಟ್ 8ರಂದು ಬೆಂಗಳೂರಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ (Rahul Gandhi) , ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, “ನಾವೇ ಮೊದಲೇ ಮತಪಟ್ಟಿಯನ್ನು ಪರಿಶೀಲಿಸಬೇಕಿತ್ತು. ಈಗ ಆ ವಿಷಯ ಎತ್ತುವುದು ಸರಿಯಲ್ಲ. ನಮ್ಮ ಸರ್ಕಾರವೇ ಅಧಿಕಾರದಲ್ಲಿದ್ದಾಗ ಪಟ್ಟಿಯನ್ನು ಸಿದ್ಧಪಡಿಸಿದ್ದೇವೆ, ಆಗ ನಮ್ಮ ನಾಯಕರು ಏಕೆ ಕ್ರಮ ಕೈಗೊಂಡಿಲ್ಲ?” ಎಂದು ಹೇಳಿಕೆ ನೀಡಿದ್ದರು.

ಈ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಬಿಜೆಪಿಗೆ (BJP) ಕಾಂಗ್ರೆಸ್ ವಿರುದ್ಧ ಟೀಕೆಗೆ ಆಯುಧವಾಯಿತು.ಬಿಜೆಪಿ ನಾಯಕರು, “ನಿಮ್ಮದೇ ಸಚಿವರು ನಿಮ್ಮ ಸರ್ಕಾರದ ದುರ್ಬಲತೆ ಬಯಲಿಗೆಳೆಯುತ್ತಿದ್ದಾರೆ” ಎಂದು ಲೇವಡಿ ಮಾಡಿದರು.

ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿ, ರಾಜಣ್ಣ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಅಂತಿಮವಾಗಿ, ರಾಜೀನಾಮೆ ಅಥವಾ ಉಚ್ಛಾಟನೆ ಎಂಬ ಎರಡು ಆಯ್ಕೆಗಳು ರಾಜಣ್ಣ ಮುಂದಿಟ್ಟುಕೊಳ್ಳಲಾಯಿತು.

ಪಕ್ಷದ ಗೌರವ ಕಾಪಾಡಿಕೊಳ್ಳುವ ಉದ್ದೇಶದಿಂದ ಅವರು ರಾಜೀನಾಮೆಯನ್ನು ಆಯ್ಕೆ ಮಾಡಿಕೊಂಡರು ಎನ್ನಲಾಗುತ್ತಿದೆ.

ಇದನ್ನು ಓದಿ : ರಾಜ್ಯ ಶಿಕ್ಷಣ ನೀತಿ ವರದಿ: ಹಿಂದಿಗೆ ‘ಕೊಕ್’, ದ್ವಿಭಾಷಾ ಸೂತ್ರಕ್ಕೆ ಶಿಫಾರಸು

ಇನ್ನು ರಾಜಣ್ಣ ಮುಂದಿನ ದಿನಗಳಲ್ಲಿ ಪಕ್ಷದಲ್ಲೇ ಮುಂದುವರಿಯುತ್ತಾರಾ ಅಥವಾ ಹೊಸ ರಾಜಕೀಯ ಅಧ್ಯಾಯ ಆರಂಭಿಸುತ್ತಾರಾ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. (Secret behind Rajanna Resignation)

Tags: CongresshighcommandKarnatakapoliticalpoliticsSiddaramaiah

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.