• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ಹಿಂದೂ’ ವಿವಾದ : ಸತೀಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ!

Mohan Shetty by Mohan Shetty
in ರಾಜಕೀಯ, ರಾಜ್ಯ
‘ಹಿಂದೂ’ ವಿವಾದ : ಸತೀಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ!
0
SHARES
0
VIEWS
Share on FacebookShare on Twitter

Belagavi : ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ(Send back Sathish Jarkiholi) ʼಹಿಂದೂʼ ಪದದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು(Controversial Statement) ಖಂಡಿಸಿ, ರಾಜ್ಯ ಬಿಜೆಪಿ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತೆ ಅನೇಕ ಕಡೆ ಪ್ರತಿಭಟನೆಗಳನ್ನು ನಡೆಸಿದೆ.

ಕೂಡಲೇ ಸತೀಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದೆ.

ramesh

ಇನ್ನೊಂದೆಡೆ ಈ ಕುರಿತು ಟ್ವೀಟ್(Tweet) ಮಾಡಿರುವ ಬಿಜೆಪಿ(BJP), ಇದು ದಾರ್ಷ್ಟ್ಯದ ಪರಮಾವಧಿಯಿದು.

ಈ ದೇಶ, ಈ ಮಣ್ಣಿನ ಅಸ್ಮಿತೆಯಾಗಿರುವ ಹಿಂದೂ ಎಂಬ ಪದವನ್ನೇ ಅಶ್ಲೀಲ ಎಂದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರು ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ.

ಹಿಂದೂ ಧರ್ಮದ ವಿರುದ್ಧ ಕಾಂಗ್ರೆಸ್(Congress) ಸಮರ ಸಾರುತ್ತಿದೆಯೇ? ಕೆಪಿಸಿಸಿ ಕಾರ್ಯಾಧ್ಯಕ್ಷನ ಹೇಳಿಕೆಯನ್ನು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮರ್ಥಿಸಿದ್ದಾರೆ.

ಹಿಂದೂ ಧರ್ಮವನ್ನು ತೆಗಳುವುದು ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯಸೂಚಿಯೇ? ಅದೇ ಆಗಿದ್ದಲ್ಲಿ, ಬಹಿರಂಗವಾಗಿ “ಹಿಂದೂಗಳ ಮತ ನಮಗೆ ಬೇಡ” ಎನ್ನಲು ಕಾಂಗ್ರೆಸ್ ಪಕ್ಷಕ್ಕೆ ತಾಕತ್ತು ಇದೆಯೇ? ಎಂದು ಪ್ರಶ್ನಿಸಿದೆ.

hindu controversy

ಹಿಂದೂಗಳಿಗೆ ಹಾಗೂ ಶಿವಾಜಿ ಮಹಾರಾಜರಿಗೆ ಸತೀಶ್ ಜಾರಕಿಹೊಳಿ ಅವರು ಅವಮಾನ ಮಾಡಿದ್ದಾರೆ. ಮಾತ್ರವಲ್ಲ ಕ್ಷಮೆ ಕೂಡ ಕೇಳುವುದಿಲ್ಲ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಮತ್ತು ಖರ್ಗೆ ಅವರೇ ಇದು ಜಾರಕಿಹೊಳಿ ನಿಲುವು ಮಾತ್ರವಾ ಅಥವಾ ಕಾಂಗ್ರೆಸ್ ಪಕ್ಷದ ನಿಲುವು ಕೂಡ ಇದೇನಾ? ಎಂದು ಪ್ರಶ್ನಿಸಿದೆ.

https://fb.watch/gHbPNLdQV-/

ಕಾಂಗ್ರೆಸ್ ಪಕ್ಷ(Congress Party) ಹಿಂದೂ ವಿರೋಧಿಗಳ ಆಗರವಾಗಿದೆ. ಹಿಂದೂಗಳ ಭಾವನೆಗೆ ಘಾಸಿಯುಂಟು ಮಾಡುವುದಲ್ಲದೇ ಕ್ಷಮೆಯೇ ಕೇಳುವುದಿಲ್ಲ ಎಂಬ ಧಿಮಾಕು ತೋರ್ಪಡಿಸುತ್ತಾರೆ.

ಕಾಂಗ್ರೆಸ್ ಯಾವತ್ತೂ ಹಿಂದೂಗಳ ಪರ ಇರಲಿಲ್ಲ, ಮುಂದೆಯೂ ಇರುವುದಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.

congress

ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲಾ ಎನ್ನುವಂತೆ ರಾಹುಲ್ ಗಾಂಧಿ(Rahul Gandhi) ಚಾಳಿ ಪಕ್ಷದಲ್ಲೆಲ್ಲಾ ಹರಡಿದೆ. ನಾನು ಹಿಂದೂ, ಬ್ರಾಹ್ಮಣ ಎನ್ನುತ್ತಾ ರಾಹುಲ್ ನಾಟಕವಾಡುತ್ತಾರೆ.

ಆದರೆ ದೇವಾಲಯಕ್ಕೆ ಹೋದರೆ ಹೇಗೆ ತೀರ್ಥ ತೆಗೆದುಕೊಳ್ಳಬೇಕು ಎನ್ನುವ ಪರಿಜ್ಞಾನವೇ ಇಲ್ಲ. ಹಿಂದೂ ಧರ್ಮದ ಆಚರಣೆಗಳನ್ನು ಅಪಹಾಸ್ಯ ಮಾಡುವುದೇಕೆ?

ಕಾಂಗ್ರೆಸ್ಸಿನ ಕೋಮುವಾದಕ್ಕೆ ದೊಡ್ಡ ಇತಿಹಾಸವೇ ಇದೆ. 1917ರ ಖಿಲಾಫತ್ ಚಳವಳಿಗೆ ಬೆಂಬಲ ನೀಡುವ ಮೂಲಕ ದೇಶವನ್ನು ಇಬ್ಭಾಗ ಮಾಡಲು ಕಾರಣವಾಗಿದ್ದು, ಇದೇ ಕಾಂಗ್ರೆಸ್.

ಕೋಮುದಳ್ಳುರಿಯಿಂದಲೇ ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ದೇಶವನ್ನು ಆಳಿತ್ತು.

ಇದನ್ನೂ ಓದಿ : https://vijayatimes.com/postpone-kantara-ott-release/

ಕೋಮು ರಾಜಕೀಯದಿಂದಲೇ ಕಾಂಗ್ರೆಸ್ ಉಸಿರಾಡುತ್ತಿರುವುದೇ? ಹಿಂದುತ್ವ ಅಂದರೆ ಜೀವನಶೈಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹೀಗಿರುವಾಗ, ಸತೀಶ್ ಜಾರಕಿಹೊಳಿ ಹಿಂದೂ ಪದ ಅಶ್ಲೀಲ ಎನ್ನುವ ಮೂಲಕ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ. ಅಷ್ಟೇ ಅಲ್ಲದೆ ಹಿಂದೂಗಳ ಮನಸ್ಸಿಗೆ ಘಾಸಿ ಮಾಡಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

Tags: CongressKarnatakapoliticalpolitics

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.