ಬೀದರ್, ಮಾ. 30: ಜೆಡಿಎಸ್ ಹಿರಿಯ ನಾಯಕ ಪಿ.ಜಿ.ಆರ್ ಸಿಂಧ್ಯಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷ ಸೇರಿದರು.
ಬಸವ ಕಲ್ಯಾಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಂಧ್ಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಸವ ಕಲ್ಯಾಣ ಕ್ಷೇತ್ರಕ್ಕೆ ಏಪ್ರಿಲ್ ತಿಂಗಳು ಉಪ ಚುನಾವಣೆ ನಡೆಯಲಿದ್ದು, ರಾಜಕೀಯದಲ್ಲಿ ಸಾಕಷ್ಟು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಮರಾಠ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸಿಂಧ್ಯಾ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ.
ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.