• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರತ್ಯೇಕ ಪ್ರಕರಣ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ ಮಾಡುತ್ತಿದ್ದ ಐವರ ಸೆರೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಪ್ರತ್ಯೇಕ ಪ್ರಕರಣ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ ಮಾಡುತ್ತಿದ್ದ ಐವರ ಸೆರೆ
0
SHARES
0
VIEWS
Share on FacebookShare on Twitter

ಮೈಸೂರು, ಮೇ. 13: ರಾಜ್ಯದಲ್ಲಿ ರೆಮ್‌ಡಿಸಿವಿರ್ ಮದ್ದು ಕೊರತೆ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ ಮಾಡುತ್ತಿದ್ದ ಎರಡು ಜಾಲಗಳನ್ನು ಪತ್ತೆ ಮಾಡಿರುವ ಮೈಸೂರು ಸಿಸಿಬಿ ಪೊಲೀಸರು, ಐವರನ್ನು ಬಂಧಿಸಿದ್ದಾರೆ.

ಜೆಪಿನಗರದ ಕಾಮಾಕ್ಷಿ ಆಸ್ಪತ್ರೆಯ ಸ್ಟಾಫ್ ನರ್ಸ್ ಜಿ.ಸುರೇಶ್ (27), ಕೆ.ಆರ್. ಆಸ್ಪತ್ರೆ ಇನ್‌ಸ್ಟಿಟ್ಯೂಟ್ ಆಫ್ ನೆಪ್ರೋ ನ್ಯೂರೋ ಸ್ಟಾಫ್ ನರ್ಸ್ ಡಿ.ಎಂ. ರಾಘವೇಂದ್ರ(27), ಕೆ.ಆರ್. ಆಸ್ಪತ್ರೆ ಸ್ಟಾಫ್ ನರ್ಸ್ ಅಶೋಕ (31), ವಿಶ್ವೇಶ್ವರ ನಗರದ ಗಿರೀಶ್ ಚಂದ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (ಜಿಸಿಎಸ್) ಸ್ಟಾಪ್ ನರ್ಸ್‌ಗಳಾದ ಕೆ.ರಾಜೇಶ್(20), ಡಿ.ವಿ.ಮಲ್ಲೇಶ್ (20) ಬಂಧಿತ ಆರೋಪಿಗಳು.

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಭಣಗೊಳ್ಳುತ್ತಿದ್ದು, ಸರ್ಕಾರದ ವತಿಯಿಂದ ನೇರವಾಗಿ ಆಸ್ಪತ್ರೆಗಳ ಮೂಲಕ ರೋಗಿಗಳಿಗೆ ನೀಡುತ್ತಿದ್ದ ರೆಮಿಡಿಸಿವರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ಪತ್ತೆ ಮಾಡಲು ಮೈಸೂರು ನಗರದ ಪೊಲೀಸ್ ಆಯುಕ್ತರು ಸಿ.ಸಿ.ಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ತಂಡವನ್ನು ರಚಿಸಿದ್ದರು. ಈ ವಿಶೇಷ ತಂಡವು ಮಾಹಿತಿ ಮೇರೆಗೆ ಮೇ 12ರಂದು ಕಾರ್ಯಾಚರಣೆ ನಡೆಸಿ ಈ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಆರೋಪಿಗಳ ಬಳಿಯಿದ್ದ 4 ಕೋವಿ ಫಾರ್(ರೆಮಿಡಿಸಿವರ್ 100 ಎಂಜಿ/20 ಎಂಎಲ್) ಇಂಜೆಕ್ಷನ್‌ಗಳು ಹಾಗೂ ಇಂಜೆಕ್ಷನ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಸಂಪಾದಿಸಿದ್ದ 7,000 ರೂ. ವಶಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಂತೆಯೇ, ಮತ್ತೊಂದು ಪ್ರಕರಣದಲ್ಲಿ ಸಿಸಿಬಿ ಪೊಲೀಸರು ನಗರದ ಗಾಂಧಿನಗರದಲ್ಲಿರುವ ವೃದ್ಧಾಶ್ರಮದ ಮುಂಭಾಗ ಕೆ.ರಾಜೇಶ್ ಮತ್ತು ಮಲ್ಲೇಶ್ ಅವರನ್ನು ವಶಕ್ಕೆ ಪಡೆದಿದ್ದು, ಇವರು ಮೈಸೂರಿನ ವಿಶ್ವೇಶ್ವರನಗರದಲ್ಲಿರುವ ಗಿರೀಶ್‌ಚಂದ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (ಜಿಸಿಎಸ್)ನಲ್ಲಿ ಸ್ಟಾಫ್ ನರ್ಸ್‌ಗಳಾಗಿದ್ದು, ಆಸ್ಪತ್ರೆಯ ಕೋವಿಡ್-19 ಸೋಂಕಿತ ರೋಗಿಗಳಿಗೆ ನೀಡಲು ಕೊಟ್ಟಿದ್ದ 6 ರೆಮಿಡಿಸಿವರ್ ಇಂಜೆಕ್ಷನ್‌ಗಳನ್ನು ರೋಗಿಗಳಿಗೆ ನೀಡದೇ ತೆಗೆದುಕೊಂಡು ಬಂದು ಅವುಗಳನ್ನು ಹೆಚ್ಚಿನ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.