ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು, ನ. 25: ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶಾಲಾ ಶುಲ್ಕ ಕಟ್ಟಲಾಗದಿದ್ದರೆ ಮಕ್ಕಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಅಭಿಪ್ರಾಯಪಟ್ಟಿದೆ.

ಕೊರೊನಾದ ಹಿನ್ನಲೆಯಲ್ಲಿ ಕಳೆದ 8 ತಿಂಗಳಿನಿಂದ ಶಾಲೆಗಳ ಬಾಗಿಲು ತೆದಿಲ್ಲ. ಈ ನಡುವೆ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಹಲವು ಪಾಲಕರು ವಾರ್ಷಿಕ ಶುಲ್ಕ ಪಾವತಿಸಿಲ್ಲ. ಕೆಲವು ಶಾಲೆಗಳು ಶುಲ್ಕ ಕಟ್ಟದಿದ್ದರೆ ಅನುತ್ತೀರ್ಣ ಮಾಡುವುದಾಗಿ ಬೆದರಿಕೆ ಹಾಕುತ್ತಿವೆ ಎಂದು ಕೇಳಿ ಬರುತ್ತಿವೆ. ಹೀಗಾಗಿ ಶುಲ್ಕ ಕಟ್ಟದ ಕಾರಣ ಅನುತ್ತೀರ್ಣಗೊಳಿಸಲು ಸಾಧ್ಯವಿಲ್ಲ ಈ ಬಗ್ಗೆ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

Exit mobile version