ಡ್ರಗ್ಸ್‌ ವಿಚಾರದಲ್ಲಿ ಶಾರುಖ್ ಮೇಲೆ ದಾಳಿ – ಶಶಿ ತರೂರ್ ಟ್ವೀಟ್

ಮುಂಬೈ ಅ 5 : ಡ್ರಗ್ಸ್ ಪ್ರಕರಣದಲ್ಲಿ ಇಗಾಗಲೇ ಶಾರುಖ್‌ ಪುತ್ರ ಆರ್ಯನ್ ಖಾನ್ ಅವರು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗುತ್ತಲೇ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮೇಲೆ ಕೆಲವರು ದಾಳಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಾನು ಡ್ರಗ್ಸ್‌ ಪ್ರಿಯನಲ್ಲ. ಎಂದಿಗೂ ಅದನ್ನು ಬಳಸಿಲ್ಲ. ಆದರೆ, ಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್‌ ಖಾನ್‌ ಬಂಧನವಾದ ವಿಚಾರವನ್ನು ಇಟ್ಟುಕೊಂಡು ಶಾರುಖ್‌ ಖಾನ್‌ ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗಿದೆ. ಅವರ ವಿಚಾರದಲ್ಲಿ ಸ್ವಲ್ಪ ಸಹಾನುಭೂತಿ ಇರಬೇಕು. ಸಾರ್ವಜನಿಕ ತುಚ್ಚೀಕರಣ ಸರಿಯಲ್ಲ. 23 ವರ್ಷದ ಹುಡುಗನ ಮೇಲೆ ಇಷ್ಟು ಸಂತೋಷದಿಂದ ದಾಳಿ ಮಾಡುವುದು ಬೇಕಿಲ್ಲ,’ ಎಂದು ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ

ಘಟನೆ ಹಿನ್ನಲೆ :

ಮುಂಬೈ ಸಮೀಪದ ಕಡಲಿನಲ್ಲಿ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ಮಾದಕ ಪದಾರ್ಥ ನಿಯಂತ್ರಣ ಬ್ಯೂರೂ  ದಾಳಿ ನಡೆಸಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.  ಬಾಲಿವುಡ್ ನಟ ಶಾರುಕ್ ಖಾನ್ ಅವರ ಪುತ್ರ ಆರ್ಯನ್ ಖಾನ್ (23) ಅವರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾಕಷ್ಟು ಜನ ಶಾರುಖ್‌ ಪರ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯೆಕ್ತಪಡಿಸುತ್ತಿದ್ದಾರೆ.

Exit mobile version