Chmarajanagar: ಕಾವೇರಿ ನೀರು ನಿಯಂತ್ರಣ ಸಮಿತಿ (Siddaramaiah challenge CWRC order) ತಮಿಳುನಾಡಿಗೆ ಮುಂದಿನ 18 ದಿನಗಳ ಕಾಲ ಪ್ರತಿ ದಿನ ಮತ್ತೆ 3 ಸಾವಿರ
ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಆದೇಶ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಕರ್ನಾಟಕ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಈ ಬಗ್ಗೆ ಸ್ವತಃ
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಹೇಳಿದ್ದಾರೆ.

ರಾಜ್ಯದೆಲ್ಲೆಡೆ ತಮಿಳುನಾಡಿಗೆ (Tamil Nadu) ಕಾವೇರಿ ನೀರು ಬಿಡುವುದರ ವಿರುದ್ಧ ಬಂದ್, ಪ್ರತಿಭಟನೆಗಳು ನಡೆಯುತ್ತಿದ್ದು, ಇದರ ಮಧ್ಯೆಯೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿ ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಇದರೊಂದಿಗೆ ಕರ್ನಾಟಕದಲ್ಲಿ ಪ್ರತಿಭಟನೆಯ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು, ಇನ್ನು ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಪ್ರಶ್ನಿಸಿ
ಸುಪ್ರೀಂಕೋರ್ಟ್ಗೆ (Supreme Court ) ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು ಸೆ.೨೭ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸಾಧ್ಯತೆ ದಟ್ಟವಾಗಿದ್ದು, ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರು,
(Bengaluru) ಕಾವೇರಿ ಜಲಾನಯನ ಪ್ರದೇಶಗಳಾದ ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಪ್ರತಿಭಟನೆ ಜೋರಾಗಿದೆ. CWRC ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ.
ಸದ್ಯಕ್ಕೆ ನಮ್ಮ ಬಳಿ ನೀರು ಇಲ್ಲ ಹಾಗಾಗಿ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿ ಮಾಡಲು ಸಾಧ್ಯ ಇಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ,
ಜೆಡಿಎಸ್ (JDS) ರಾಜಕೀಯ ಮಾಡುತ್ತಿವೆ ಎಂದು ಈ (Siddaramaiah challenge CWRC order) ಸಂಧರ್ಭದಲ್ಲಿ ಕಿಡಿಕಾರಿದರು.

CWRC ಆದೇಶದಲ್ಲಿ ಏನಿದೆ?
ಮುಂದಿನ 15 ದಿನಗಳಿಗೆ ಪ್ರತಿ ದಿನ ೩ ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದ್ದು, ಕಾವೇರಿ ಕೊಳ್ಳದಲ್ಲಿ ಶೇ 53ರಷ್ಟು ಮಳೆ ಕೊರತೆ ಇದೆ. ಕರ್ನಾಟಕ 161 ತಾಲೂಕುಗಳನ್ನು ಬರ
ಪೀಡಿತ ಎಂದು ಘೋಷಣೆ ಮಾಡಿದೆ. 34 ತಾಲೂಕುಗಳು ಭಾಗಶಃ ಬರಕ್ಕೆ ತುತ್ತಾಗಿವೆ. ಈ ಪರಿಸ್ಥಿತಿಯಲ್ಲಿ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ.
ಕರ್ನಾಟಕದ ಅಧಿಕಾರಿಗಳು ಜಲಾಶಯಗಳಲ್ಲಿ ನೀರಿಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಸಭೆಯಲ್ಲಿ ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನಂತರ, 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ
ನೀಡಲಾಗಿದ್ದು, ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರ ತನಕ ನೀರು ಹರಿಸುವಂತೆ ಆದೇಶಿಸಲಾಗಿದೆ.
ಇದನ್ನು ಒದಿ: ಕಾವೇರಿ ರಾಜಿ ಇಲ್ಲ: CWRC ಆದೇಶವನ್ನ ಚಾಲೆಂಜ್ ಮಾಡುತ್ತೇವೆ, ಸಿದ್ದರಾಮಯ್ಯ ಖಡಕ್ ಮಾತು
ಭವ್ಯಶ್ರೀ ಆರ್.ಜೆ