• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಜಗದೀಶ್‌ ಶೆಟ್ಟರ್‌ ಟಿಪ್ಪುವನ್ನು ಹೊಗಳಿದಾಗ ನೀವು ಎಲ್ಲಿ ಅವಿತು ಕುಳಿತಿದ್ರಿ ? – ಸಿದ್ದರಾಮಯ್ಯ

Preetham Kumar P by Preetham Kumar P
in ರಾಜಕೀಯ
siddaramaiah
0
SHARES
0
VIEWS
Share on FacebookShare on Twitter

ಬೆಂಗಳೂರು ಜ 21 : ರಾಜಕೀಯ ಸಮುದ್ರದಲ್ಲಿ ತಮ್ಮದೇ ವಿಶಿಷ್ಟ ಛಾಪು, ವಿಶೇಷ ಮಾತುಗರಿಕೆ, ಅಪಾರ ಜ್ಞಾನವುಳ್ಳ ನಾಯಕರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಮುಖರು. ಈ ನಿಟ್ಟಿನಲ್ಲಿ ಹೇಳುವುದಾದರೆ ಯಾವುದೇ ವಿಷಯವಿರಲಿ, ಯಾವುದೇ ವಿಚಾರ ಚರ್ಚೆಯಾಗಲಿ ಸಿದ್ದರಾಮಯ್ಯನವರ ಏರು ಧ್ವನಿ ಅಲ್ಲಿ ಕೇಳಿಸುತ್ತದೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಸಿದ್ದರಾಮಯ್ಯನವರು ಸದ್ಯ ಒಂದು ವಿಚಾರ ಕುರಿತು ಸುಧೀರ್ಘವಾಗಿ ಬರೆದು ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಹೌದು, ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯನವರು, ಈ ರೀತಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ 2014ರಲ್ಲಿ ಗಣರಾಜ್ಯೋತ್ಸವದ ಪರೇಡ್ ಗೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರ ಕಳಿಸಿದ್ದು ನಿಜ. ಆ ಟಿಪ್ಪು ಸ್ತಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದು ಕೂಡಾ ನಿಜ. ಸುನೀಲ್ ಕುಮಾರ್ ಅವರಂತಹ ಟಿಪ್ಪು ವಿರೋಧಿಗಳು ಯಾಕೆ ಆಗ ಅದನ್ನು ವಿರೋಧಿಸಲಿಲ್ಲ?

ಟಿಪ್ಪು ಸುಲ್ತಾನ್ ಅವರನ್ನು ಹಾಡಿ ಹೊಗಳಿ ದೊಡ್ಡ ಗ್ರಂಥವನ್ನೇ ರಚಿಸಿದ್ದು ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ. ಅದನ್ನು ಪ್ರಕಟಿಸಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಬೇರೆಯವರ ಮೇಲೆ ಆರೋಪಿಸಲು ದೊಡ್ಡಬಾಯಿ ಬಿಡುವ ಸುನೀಲ್ ಕುಮಾರ್ ಆಗ ಬಾಯಿ ಮುಚ್ಚಿಟ್ಟುಕೊಂಡಿದ್ದು ಯಾಕೆ? ಬಿಜೆಪಿ ಸರ್ಕಾರವೇ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್ ಕುರಿತ ಗ್ರಂಥ ಈಗಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗ್ರಂಥಾಲಯದಲ್ಲಿದೆ. ಈ ಗ್ರಂಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈಗ ಸಚಿವರಾಗಿರುವ ಸುನೀಲ್ ಕುಮಾರ್ ಗಮನಕ್ಕೆ ಇನ್ನೂ ಬಂದಿಲ್ಲವೇ? ಯಾಕೆ ಈ ಆತ್ಮವಂಚನೆ? 2017ರಲ್ಲಿ ಕರ್ನಾಟಕ ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟಿಪ್ಪು ಸುಲ್ತಾನ್ ಅವರನ್ನು ಸ್ವಾತಂತ್ರ್ಯಯೋಧ ಎಂದು ಹಾಡಿ ಹೊಗಳಿದ್ದಾಗ ಸುನೀಲ್ ಕುಮಾರ್ ಮತ್ತು ಬಿಜೆಪಿ ನಾಯಕರು ಎಲ್ಲಿ ಅಡಗಿಕೊಂಡಿದ್ದರು?

ನಾರಾಯಣ ಗುರು ಸ್ತಬ್ಧಚಿತ್ರದ ವಿವಾದ ಹುಟ್ಟಿಕೊಂಡ ದಿನದಿಂದ ನರೇಂದ್ರ ಮೋದಿ ಅವರ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸುಳ್ಳುಗಳ ಮೂಟೆ ಉರುಳಿಸುತ್ತಿರುವ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಪ್ರಹ್ಲಾದ ಜೋಷಿಯಂತಹವರು ನಾರಾಯಣ ಗುರುಗಳನ್ನು ತಾವು ಒಪ್ಪುವುದಿಲ್ಲ ಎಂಬ ಒಂದು ಸತ್ಯವನ್ನು ಯಾಕೆ ಹೇಳಬಾರದು. ನಾರಾಯಣ ಗುರುಗಳು ನನ್ನ ಸೈದ್ಧಾಂತಿಕ ಗುರುಗಳು. ಆ ಗೌರವದ ಕಾರಣಕ್ಕಾಗಿಯೇ ನಾನು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೆ. ಇದರಿಂದಾಗಿ ಗುರುಗಳ ಸಂದೇಶ ಮನೆಮನೆಗಳನ್ನು ಮುಟ್ಟುವಂತಾಗಿದೆ.

ಟಿಪ್ಪು ಸುಲ್ತಾನ್ ಮಾತ್ರವಲ್ಲ ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶಪ್ರಾಯರು. ಮುಖ್ಯಮಂತ್ರಿಯಾಗಿ ನಾನು ಈ ಮಹಾಪುರುಷರ ಚಿಂತನೆಗೆ ಸರ್ಕಾರದ ಯೋಜನೆಗಳ ರೂಪಕೊಟ್ಟು ಅನುಷ್ಠಾನಗೊಳಿಸಿದ್ದೆ. ನಾನು ಬಿಜೆಪಿ ನಾಯಕರಂತೆ ಆತ್ಮವಂಚಕನಲ್ಲ ಎಂದು ಅವರು ಹೇಳಿದರು

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.