ಬೆಂಗಳೂರು, ಮಾ. 03: ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನೈತಿಕ ರಾಜಕೀಯದ ಶಿಶುವಾಗಿರುವ ರಾಜ್ಯದ ಬಿಜೆಪಿ ಸರ್ಕಾರ ರಮೇಶ್ ಜಾರಕಿಹೊಳಿ ಅನೈತಿಕ ಕೃತ್ಯವನ್ನು ಸಮರ್ಥಿಸುತ್ತಾ ತನ್ನ ಮಾನ, ಮರ್ಯಾದೆಯನ್ನು ತಾನೇ ಹರಾಜು ಹಾಕಿಕೊಳ್ಳುತ್ತಿದೆ. ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ.
ಅನೈತಿಕ ಚಟುವಟಿಕೆಯಲ್ಲಿ ತೊಡಗಿ ತನ್ನ ಮತ್ತು ಪಕ್ಷದ ಮಾತ್ರವಲ್ಲ ಕರ್ನಾಟಕ ರಾಜ್ಯದ ಮಾನಹಾನಿ ಮಾಡಿರುವ ಸಚಿವ ರಮೇಶ್ ಜಾರಕಿಹೊಳಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ಪಡೆದು, ಎಫ್.ಐ.ಆರ್ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.