• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಕ್ಷದಿಂದ ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ: ಕುಮಾರಸ್ವಾಮಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಪಕ್ಷದಿಂದ ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ: ಕುಮಾರಸ್ವಾಮಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 12: ಸ್ವತಂತ್ರವಾಗಿ ಪಕ್ಷಕಟ್ಟಿ 5 ಸ್ಥಾನ ಗೆದ್ದು ತೋರಿಸಲಿ ಎಂಬ ಸವಾಲು ಸ್ವೀಕರಿಸದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ.

ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ? ಎಂದು ಪ್ರಶ್ನಿಸಿರುವ ಅವರು, ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್ನವರಾಗಿದ್ದರು ಎಂದು ಟೀಕಿಸಿದ್ದಾರೆ.

ಅಲ್ಲದೇ, ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ‌. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ‌. ಅಲ್ಲಿಯವರೆಗೆ ಅವರು ತಾಳಲಿ.

ಜೆಡಿಎಸ್ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಜೆಡಿಎಸ್ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ.
1/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 12, 2021

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.