ಒಳ ಮೀಸಲಾತಿ ಸಮಿತಿ ರಚನೆ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದು ಸಿದ್ದರಾಮಯ್ಯ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪರಿಶಿಷ್ಟ (Siddaramaiah lashed – central govt) ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು

ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಾಗಿದೆ ಇದರ ಹಿಂದೆ ಯಾವುದೇ

ಪ್ರಾಮಾಣಿಕವಾದ ಕಾಳಜಿ ಇಲ್ಲ (Siddaramaiah lashed – central govt) ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ

ಪರಿಹಾರ ಎಂದು ವರದಿ ನೀಡಿತ್ತು. ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು.

ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘ಸಮಯ ವ್ಯರ್ಥ ಮಾಡುವ ತಂತ್ರವಾಗಿದೆ ಎಂದು ಆರೋಪಿಸಿದ್ದು, ಪರಿಶಿಷ್ಟ ಜಾತಿಗಳ ಒಳಮೀಸಲಾತಿ

ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು

ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು’ ಎಂದು ಸಿಎಂ ಆಗ್ರಹಿಸಿದ್ದಾರೆ.

ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ

ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು

ಹೊರಟ ಹಾಗೆ ಕಾಣುತ್ತಿದೆ’ ಎಂದಿದ್ದಾರೆ.

ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯ ಇಲ್ಲ. ಆಂಧ್ರಪ್ರದೇಶದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಬೇಡಿಕೆಯ

ಪರಿಶೀಲನೆಗೆ ನೇಮಿಸಲಾದ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿದೆ ಎಂದು 2023ರ ಜುಲೈ 23ರಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿಯವರು

ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡಬೇಕೆಂದು ರಾಜ್ಯಸಭೆಗೆ ತಿಳಿಸಿದ್ದರು. ಇದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹಮೂರ್ತಿ ಅವರ ಪ್ರಶ್ನೆಗೆ ನೀಡಿದ್ದ ಉತ್ತರವಾಗಿತ್ತು.

ಸಚಿವ ಎ.ನಾರಾಯಣ ಸ್ವಾಮಿಯವರು ಒಳಮೀಸಲಾತಿಗೆ ಸಂವಿಧಾನದ ತಿದ್ದುಪಡಿಯ ಅಗತ್ಯ ಇಲ್ಲ ಎಂದು ಹೇಳುತ್ತಿರುವುದು ವಿಪರ್ಯಾಸ’ ಮತ್ತು ರಾಜ್ಯದ ಬಿಜೆಪಿ ನಾಯಕರು ಎಂದಿನಂತೆ ಎರಡೆರಡು

ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯ ಈಡೇರಿಕೆಯ ಹೊಣೆ ತಮ್ಮ ಹೆಗಲ ಮೇಲೆ ಬಿದ್ದ ನಂತರ ತಳಮಳಕ್ಕೀಡಾಗಿರುವ ಬಿಜೆಪಿ ನಾಯಕರು ತಲೆಗೊಬ್ಬರಂತೆ

ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಿದ್ದಾರೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

Exit mobile version