ಮೀಸಲಾತಿ ಹೆಚ್ಚಳದ ನಿರ್ಧಾರದಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇ.56 ಆಗಲಿದೆ : ಸಿದ್ದರಾಮಯ್ಯ

Congress

Bengaluru : ಸುಪ್ರೀಂಕೋರ್ಟ್ (Supreme Court) (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನಂತೆ ಒಟ್ಟು ಮೀಸಲಾತಿ 50% ಮೀರುವಂತಿಲ್ಲ. ಮೀಸಲು ಹೆಚ್ಚಳದ ನಿರ್ಧಾರದಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇ.56 ಆಗಲಿದೆ.

ಕಾನೂನಿನ ಈ ಬಿಕ್ಕಟ್ಟಿನ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ (BJP Govt) ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಆಗ್ರಹಿಸಿದ್ದಾರೆ.

https://youtu.be/bzH_omMiA24

ಈ ಕುರಿತು ಸರಣಿ ಟ್ವೀಟ್‌ (Tweet) ಮಾಡಿರುವ ಅವರು, ಎಸ್ಸಿ/ಎಸ್ಟಿ ಮೀಸಲಾತಿಯ (Siddaramaiah Over SC/ST Reservation) ಹೆಚ್ಚಳಕ್ಕಾಗಿ ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕಾಗುತ್ತದೆ.

ಇದನ್ನೂ ಓದಿ : https://vijayatimes.com/slogans-voilence-protest/

ಕೇಂದ್ರ ಸರ್ಕಾರ ಸಂಸತ್ ನಲ್ಲಿ ಸಂವಿಧಾನ (Constitution) ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು. ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ.

ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗಾಗಲಿ, ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರಿಗಾಗಲಿ ಕೇಂದ್ರ ಸರ್ಕಾರದಿಂದ ಈ ಕೆಲಸ ಮಾಡಿಸುವ ಶಕ್ತಿ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ನೇಮಿಸಿದ್ದ ನ್ಯಾ. ನಾಗಮೋಹನ್ ದಾಸ್ (Siddaramaiah Over SC/ST Reservation) ಸಮಿತಿಯ ಶಿಫಾರಸಿನಂತೆ ಎಸ್ ಸಿ/ಎಸ್ ಟಿ ಮೀಸಲಾತಿ ಹೆಚ್ಚಿಸುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ.

ಇದನ್ನೂ ಓದಿ : https://vijayatimes.com/voilence-erupted-says-suvendhu-adikari/

ಆದರೆ ಈ ನಿರ್ಧಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದಿದ್ದರೆ ಇದು ಬಿಜೆಪಿಯ ಸುಳ್ಳಿನ ಕಂತೆಗೆ ಇನ್ನೊಂದು ಸೇರ್ಪಡೆಯಾಗುತ್ತದೆ ಅಷ್ಟೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ರಿರುವ ರಾಜ್ಯದ ಬಿಜೆಪಿ ಸರ್ಕಾರ,

ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್ಸಿ/ಎಸ್ಟಿ ಸಮುದಾಯವನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ಟೀಕಿಸಿದ್ದಾರೆ.
Exit mobile version