• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿದ್ದರಾಮಯ್ಯನವರ ಓಲೈಕೆ ರಾಜಕಾರಣಕ್ಕೆ ಕಾಂಗ್ರೆಸ್‍ನಲ್ಲೇ ಅಪಸ್ವರ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
siddaramaiah
0
SHARES
0
VIEWS
Share on FacebookShare on Twitter

ಸಿದ್ದರಾಮಯ್ಯನವರು(Siddaramaiah) ಈ ಹಿಂದೆ ಪ್ರಯೋಗಿಸುತ್ತಿದ್ದ ರಾಜಕೀಯ(Political) ತಂತ್ರಗಾರಿಕೆಗಳ ಲೆಕ್ಕಾಚಾರ ಇದೀಗ ಫಲ ನೀಡುತ್ತಿಲ್ಲ. ಬಿಜೆಪಿ ಪ್ರಯೋಗಿಸುತ್ತಿರುವ ‘ಹಿಂದುತ್ವ’ ಅಸ್ತ್ರಕ್ಕೆ ಪ್ರತ್ಯಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ವಿಫಲವಾಗುತ್ತಿದೆ.

siddaramaiah

ಹಿಜಾಬ್(Hijab) ವಿವಾದದಲ್ಲಿ ಕಾಂಗ್ರೆಸ್(Congress) ಯಾವುದೇ ಸ್ಪಷ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷದ ‘ಜಾತ್ಯಾತೀತ’ ನಿಲುವಿನಿಂದ ಹಿಂದೆ ಸರಿಯಬೇಡಿ ಎಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದರೂ, ಜಾತ್ಯಾತೀತ ನಿಲುವಿನಿಂದ ಮತಗಳಿಸಲು ಸಾಧ್ಯವಿಲ್ಲ ಎಂಬುದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಅರ್ಥವಾಗಿದೆ. ಇನ್ನು ‘ಜಾತ್ಯಾತೀತ ನಿಲುವು’ ಎಂಬುದು ಅಲ್ಪಸಂಖ್ಯಾತರ ಓಲೈಕೆಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ ಅಲ್ಪಸಂಖ್ಯಾತರ ಓಲೈಕೆಯಿಂದ ಹಿಂದೂಗಳು ಒಗ್ಗೂಡುತ್ತಾರೆ.

ಜಾತಿಗಳಿಂದ ಹೊರಬಂದು ಹಿಂದೂ ಮತಬ್ಯಾಂಕ್ ಒಗ್ಗೂಡಿದರೆ ಅದರ ನೇರ ಲಾಭ ಬಿಜೆಪಿ ಪಡೆಯಲಿದೆ. ಈ ಎಲ್ಲ ಕಾರಣದಿಂದ ಜಾತ್ಯಾತೀತ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳಲು ಕೆಲ ನಾಯಕರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಸಲಹೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಓಲೈಕೆ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತ್ರ ಅಲ್ಪಸಂಖ್ಯಾತರ ಪರ ಗಟ್ಟಿಯಾಗಿ ನಿಂತಿದ್ದು, ಕಾಂಗ್ರೆಸ್ ನಾಯಕರನ್ನು ನಿದ್ದೆಗೆಡಿಸಿದೆ.

ಅಲ್‍ಖೈದಾ ನಾಯಕ ಮಾತನಾಡಿರುವ ವಿಡಿಯೋ ಹಿಂದೆ ಆರ್‍ಎಸ್‍ಎಸ್ ಇದೆ ಎನ್ನುವ ಮೂಲಕ ಸಿದ್ದರಾಮಯ್ಯನವರ ಜಾತ್ಯಾತೀತ ನಿಲುವು ಅತಿಯಾದ ಓಲೈಕೆಯಾಗಿ ಮಾರ್ಪಟ್ಟಿರುವುದಕ್ಕೆ ಸಣ್ಣ ಉದಾರಣೆಯಾಗಿದೆ. ಜಮೀರ್ ಅಹಮದ್‍ನನ್ನು ಜೊತೆಗಿಟ್ಟುಕೊಂಡು ಸಿದ್ದರಾಮಯ್ಯ ನೀಡುತ್ತಿರುವ ಅನೇಕ ಹೇಳಿಕೆಗಳಿಂದ ಕಾಂಗ್ರೆಸ್‍ಗೆ ನಷ್ಟವಾಗುತ್ತಿದೆ. ಈಗಾಗಲೇ ಅಲ್ಪಸಂಖ್ಯಾತರ ಅತಿಯಾದ ಓಲೈಕೆಯ ಪರಿಣಾಮದಿಂದಲೇ ದೇಶಾದ್ಯಂತ ಕಾಂಗ್ರೆಸ್ ನೆಲಕಚ್ಚಿದೆ ಎಂದು ಈ ಹಿಂದೆಯೇ ಕಾಂಗ್ರೆಸ್‍ನ ಆಂತರಿಕ ಸಮೀಕ್ಷೆಯ ವರದಿಯಲ್ಲಿ ಹೇಳಲಾಗಿತ್ತು.

hijab

ಈಗ ಸಿದ್ದರಾಮಯ್ಯ ಮಾಡುತ್ತಿರುವ ಓಲೈಕೆ ರಾಜಕಾರಣದಿಂದ ಮುಂಬರುವ ಚುನಾವಣೆಯಲ್ಲಿ ಪಕ್ಷದ ಸ್ಥಿತಿ ಹೀನಾಯವಾಗಲಿದೆ ಎಂದು ಕೆಲ ನಾಯಕರು ಸಿದ್ದರಾಮಯ್ಯ ವಿರುದ್ದ ಕಿಡಿಕಾರುತ್ತಿದ್ದಾರೆ. ಸಿದ್ದರಾಮಯ್ಯನವರ ಓಲೈಕೆ ರಾಜಕಾರಣಕ್ಕೆ ಕಾಂಗ್ರೆಸ್‍ನಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಓಲೈಕೆ ರಾಜಕಾರಣದಿಂದ ಯಾವುದೇ ಪ್ರಯೋಜನವಿಲ್ಲ. ಎಲ್ಲರನ್ನೂ ಒಗ್ಗೂಡುವ ಜಾತ್ಯಾತೀತ ಸಿದ್ದಾಂತ ಬೇಕಿದೆ. ಇನ್ನು ಹಿಂದೂಗಳ ಬೆಂಬಲವಿಲ್ಲದೇ ರಾಜಕೀಯ ಅಸಾಧ್ಯ. ಹೀಗಾಗಿ ಹಿಂದೂ ಧಾರ್ಮಿಕ ಭಾವನೆಗಳನ್ನು ಬೆಂಬಲಿಸುತ್ತಲೇ ಜಾತ್ಯಾತೀಯ ನಿಲುವು ತಳೆಯಬೇಕಿರುವುದು ತುರ್ತು ಅಗತ್ಯವಾಗಿದೆ ಎಂದು ಕಾಂಗ್ರೆಸ್ ನಾಯಕರ ಅಭಿಪ್ರಾಯವಾಗಿದೆ.

Tags: bjpCongressKarnatakapoliticalpolitics

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.