ಪ್ರಧಾನಿ ಮೋದಿಯವರೇ ಇದು ವಿಕಾಸವೋ? ವಿನಾಶವೋ? : ಸಿದ್ದರಾಮಯ್ಯ

Bengaluru : ಪ್ರಧಾನಿ ನರೇಂದ್ರ ಮೋದಿಯವರು(Narendra Modi) ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗಾಗಿ ಮಂಗಳೂರಿಗೆ(Mangaluru) ಆಗಮಿಸುತ್ತಿರುವ ಹಿನ್ನಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕೆಲ ಪ್ರಶ್ನೆಗಳನ್ನು ಮೋದಿಯವರಿಗೆ ಕೇಳಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರಿಸುವಂತೆ  ಮನವಿಯನ್ನೂ ಮಾಡಿದ್ದಾರೆ. ಸಿದ್ದರಾಮಯ್ಯ ಕೇಳಿರುವ ಪ್ರಶ್ನೆಗಳು ಇಲ್ಲಿವೆ ನೋಡಿ.

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ಗಳು. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು(BJP MLA) ಮತ್ತು ಬಿಜೆಪಿ ಶಾಸಕರ ಜೇಬು ಭರ್ತಿ. ಇದು ವಿಕಾಸನೋ? ವಿನಾಶನೋ?

ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ. ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ. ಇದು ವಿಕಾಸನೋ? ವಿನಾಶನೋ?

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ(State Government) ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ ?

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು. ಪ್ರಧಾನಿ ಮೋದಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೋ? ವಿನಾಶನೋ?

ಜೂನ್(June) ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕ ದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ ?

ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್(Congress) ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳೀನ್‌ ಕುಮಾರ್‌ ಕಟೀಲ್‌(Nalin Kumar Kateel) ಇದು ವಿಕಾಸವೋ? ವಿನಾಶವೋ ?

ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ  ನಳೀನ್‌ ಕುಮಾರ್‌ ಕಟೀಲ್‌ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮು ದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು?  ಇದು ವಿಕಾಸವೋ? ವಿನಾಶನೋ ?

ನವ ಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾ ಗಾಂಧಿ(Indira Gandhi) ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವ ಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ(Adhani) ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ಮೋದಿಯವರೇ ಇದು ವಿಕಾಸನೋ? ವಿನಾಶನೋ?

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ(Jawahrlal Nehru) ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.  ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ಮೋದಿಯವರೇ ಇದು ವಿಕಾಸವೋ? ವಿನಾಶವೋ?

ಕಾರ್ಪೋರೇಷನ್ ಬ್ಯಾಂಕ್(Corporation Bank) ಸ್ಥಾಪಕರು- ಹಾಜಿ ಅಬ್ದುಲ್ಲಾ (1906) ಸಿಂಡಿಕೇಟ್ ಬ್ಯಾಂಕ್(Syndicate Bank) ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925) ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931) ಪ್ರಧಾನಿ  ಮೋದಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ?

ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ ?

ಸನ್ಮಾನ್ಯ ಪ್ರಧಾನ ಮಂತ್ರಿ  ಮೋದಿಯವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?  ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯ ಪೂರ್ವಕ ಮನವಿ.

Exit mobile version