• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮತಾಂತರ ಕಾಯ್ದೆ ಅಲ್ಪಸಂಖ್ಯಾತರನ್ನು ಬೆದರಿಸುವ ಉದ್ದೇಶ ಹೊಂದಿದೆ : ಸಿದ್ದರಾಮಯ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
Congress
0
SHARES
1
VIEWS
Share on FacebookShare on Twitter

ರಾಜ್ಯ(State) ಬಿಜೆಪಿ ಸರ್ಕಾರ(BJP Government) ಸುಗ್ರಿವಾಜ್ಞೆಯ ಮೂಲಕ ಜಾರಿಗೆ ತರಲು ಹೊರಟಿರುವ “ಕರ್ನಾಟಕ ಧಾರ್ಮಿಕ ಸಂರಕ್ಷಣಾ ಕಾಯ್ದೆಯೂ” ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವನ್ನು ಹೊಂದಿದೆ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಆರೋಪಿಸಿದ್ದಾರೆ.

Caste Conversion

ಬೆಂಗಳೂರಿನಲ್ಲಿ(Bengaluru) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ತನ್ನ ದುರಾಡಳಿತದಿಂದ ನಿತ್ಯ ಬೆತ್ತಲೆಯಾಗುತ್ತಿದೆ. ಹೀಗಾಗಿ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು, ಜನರ ಗಮನವನ್ನು ಬೇರೆಡೆ ಸೆಳೆಯಲು ಧಾರ್ಮಿಕ ಭಾವನೆಗಳನ್ನು ಕೆರೆಳಿಸುವಂತ ವಿಷಯಗಳನ್ನು ಮುನ್ನಲೆಗೆ ತರುತ್ತಿದೆ. ಹೀಗಾಗಿಯೇ ಈಗ ಅಪ್ರಸ್ತುತವಾಗಿರುವ “ಕರ್ನಾಟಕ ಧಾರ್ಮಿಕ ಸಂರಕ್ಷಣಾ ಕಾಯ್ದೆ”ಯನ್ನು ಜಾರಿಗೆ ತರಲು ಮುಂದಾಗಿದೆ. ಈ ಕಾನೂನನ್ನು ನಮ್ಮ ಪಕ್ಷ ವಿರೋಧಿಸುತ್ತದೆ ಎಂದು ತಿಳಿಸಿದರು.

https://fb.watch/cZT2O9NJeE/

ಇನ್ನು ಆಮಿಷ, ಬೆದರಿಕೆ ಮತ್ತು ಒತ್ತಡ ಹೇರಿ ಮತಾಂತರ ಮಾಡುವುದನ್ನು ತಡೆಯಲು ಈಗಾಗಲೇ ಇರುವ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಮತ್ತೊಂದು ಕಾನೂನಿನ ಅವಶ್ಯಕತೆ ಏನಿದೆ. ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶವಲ್ಲದೇ ಈ ಕಾಯ್ದೆಯಿಂದ ಏನೂ ಪ್ರಯೋಜನವಿಲ್ಲ. ಸೌಹಾರ್ದಯುತವಾಗಿ ಬದುಕುವ ಹಿಂದೂ ಧರ್ಮದ ನೈಜ ಅನುಮಾಯಿ ಯಾರೂ ಈ ಕಾಯ್ದೆಯನ್ನು ಬೆಂಬಲಿಸುವುದಿಲ್ಲ.

congress

ಇದು ಸಂಘ ಪರಿವಾರದ ರಾಜಕೀಯ ಅಜೆಂಡಾದ ಒಂದು ಭಾಗವಾಗಿದೆ. ಹೀಗಾಗಿಯೇ ರಾಜ್ಯ ಸರ್ಕಾರ ಸಂಘ ಪರಿವಾರವನ್ನು ಮೆಚ್ಚಿಸಲು ಈ ಕಾಯ್ದೆ ಜಾರಿಗೆ ಹೊರಟಿದೆ. ಇನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಅಲ್ಪಸಂಖ್ಯಾತರ ಧಾರ್ಮಿಕ ಕಟ್ಟಡಗಳ ಮೇಲೆ ದಾಳಿಯಾಗುತ್ತದೆ. ಈ ಹಿಂದೆ ಕರಾವಳಿಯಲ್ಲಿ ಚರ್ಚ್‍ಗಳ ಮೇಲೆ ನಡೆದ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಯಿತು ಎಂದು ಬಿಜೆಪಿ ವಿರುದ್ದ ಕಿಡಿಕಾರಿದರು.

ಇದನ್ನೂ ಓದಿ : https://vijayatimes.com/sslc-exam-result-date/

ಸ್ವಇಚ್ಚೆಯಿಂದ ಮತಾಂತರಗೊಳ್ಳುವ ಹಕ್ಕನ್ನು ನಮ್ಮ ಸಂವಿಧಾನವೇ ನೀಡಿದೆ. ಇದರ ಹೊರತಾಗಿ ಬಲವಂತವಾಗಿ ನಡೆಯುವ ಮತಾಂತರವನ್ನು ತಡೆಯಲು ಈಗಾಗಲೇ ಕಾನೂನು ರೂಪಿಸಲಾಗಿದೆ. ಹೀಗಿರುವಾಗ ಹೊಸ ಕಾನೂನಿನ ಮೂಲಕ ಏನು ಮಾಡಲು ಸಾಧ್ಯವಾಗುವುದಿಲ್ಲ. ಬಿಜೆಪಿ ಸರ್ಕಾರ ಮುಂಬರುವ ಚುನಾವಣೆಗಾಗಿ ಧಾರ್ಮಿಕ ಮತ್ತು ಭಾವನಾತ್ಮಕ ವಿಷಯಗಳ ಮೇಲೆ ಮತದಾರರನ್ನು ಸೆಳೆಯಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

Tags: bjpCongressKarnatakapoliticalpolitics

Related News

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 25, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023
ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.