ನಾವು ಮತ್ತೆ ಅಧಿಕಾರಕ್ಕೆ ಬಂದು ಹತ್ತು ಕೆಜಿ ಅಕ್ಕಿ ಕೊಡ್ತಾ ಇದೀವಿ: ಸಿಎಂ ಸಿದ್ದರಾಮಯ್ಯ

ದೇಶಕ್ಕಾಗಿ ಏನೇನೂ ಮಾಡದವರಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾ? ಬಿಜೆಪಿಯವರು (BJP) ಕತ್ರಿ ಹಾಕೋದ್ರಲ್ಲಿ ನಿಸ್ಸೀಮರು. ಬಿಜೆಪಿ ಪಕ್ಷಕ್ಕೆ ಓಟು ಹಾಕುವ ಬಡವರೂ ಸೇರಿ ಇಡೀ ರಾಜ್ಯದ ಬಡವರು ಹೊಟ್ಟೆ ತುಂಬ ಊಟ ಮಾಡಲಿ ಅಂತ ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ 5 ಕೆ.ಜಿ ಅಕ್ಕಿ ಕೊಟ್ರೆ, ಈ ಬಿಜೆಪಿಯವರು ಬಂದು ಕತ್ತರಿ ಹಾಕಿಬಿಟ್ಟರು. ಈಗ ನಾವು ಮತ್ತೆ ಅಧಿಕಾರಕ್ಕೆ ಬಂದು ಹತ್ತು ಕೆಜಿ ಅಕ್ಕಿ ಕೊಡ್ತಾ ಇದೀವಿ. ಈ ಕಾರ್ಯಕ್ರಮ ದೇಶದ ಬೇರೆ ರಾಜ್ಯದಲ್ಲಿ ಇದ್ದರೆ ತೋರಿಸಲಿ ಎಂದು ಸಿಎಂ ಸಿದ್ದರಾಮಯ್ಯನವರು (C.M Siddaramaiah) ಸವಾಲು ಹಾಕಿದ್ದಾರೆ.

ಪ್ರಧಾನಿ ಮೋದಿ (Modi) ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮೋದಿಯವರು ನೆನ್ನೆ ಭಾಷಣ ಮಾಡಿದ್ದಾರೆ. ಆದರೆ ದೇಶದಲ್ಲಿದ್ದ ಭ್ರಷ್ಟರೆಲ್ಲಾ ಈಗ ಯಾವ ಪಕ್ಷದಲ್ಲಿದ್ದಾರೆ ಮೋದಿಯವರೇ? ಐಟಿ, ಸಿಬಿಐ (IT, CBI) ದುರುಪಯೋಗ ಪಡೆಸಿಕೊಂಡು ಇಬ್ಬರು ಮುಖ್ಯಮಂತ್ರಿಗಳಾದ ಕೇಜ್ರಿವಾಲ್ ಮತ್ತು ಹೇಮಂತ್ ಸುರೇನ್ (Hemanth Suren) ಅವರನ್ನು ಜೈಲಿಗೆ ಕಳುಹಿಸಿದ ಮೋದಿಯವರೇ BJP ಸಂಗ್ರಹಿಸಿದ ₹7,600 ಕೋಟಿ ಹಣಕ್ಕೆ ಒಂದು ಪೈಸೆ ತೆರಿಗೆ ಕಟ್ಟಿಲ್ಲವಲ್ಲಾ ಈ ಹಗರಣಕ್ಕಾಗಿ ಯಾರನ್ನು ಜೈಲಿಗೆ (Jail) ಕಳುಹಿಸಬೇಕು ಮೋದಿ ಅವರೇ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಅವರಾಗಲೀ, ಬಿಜೆಪಿ ಪಕ್ಷದವರಾಗಲೀ ಇವತ್ತಿನವರೆಗೆ ಯುವಕರು, ಮಹಿಳೆಯರು, ಶೂದ್ರರು, ದಲಿತರು, ಶ್ರಮಿಕರು, ದುಡಿಯುವವರ ಪರವಾಗಿ ಒಂದೇ ಒಂದು ಸರಿಯಾದ ಕಾರ್ಯಕ್ರಮ ಜಾರಿ ಮಾಡಲಿಲ್ಲ. ಇದೇನಾ ಅಚ್ಛೆ ದಿನ್? ಡೀಸೆಲ್, ಪೆಟ್ರೋಲ್, ಗ್ಯಾಸ್ (Deiseal, Petrol, Gas) ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಆಕಾಶಕ್ಕೆ ಏರಿಸಿದ್ದೀರಲ್ಲಾ ಮೋದಿಯವರೇ? ಇದಾ ನಿಮ್ಮ ಅಭಿವೃದ್ಧಿ?ಮಹಾತ್ಮಗಾಂಧಿಯವರ ನೇತೃತ್ವದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ನಮ್ಮ ಕಾಂಗ್ರೆಸ್ ಪಕ್ಷ.

ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಂಘ ಪರಿವಾರದ, ಬಿಜೆಪಿ ಪಕ್ಷದ ಒಬ್ಬ ವ್ಯಕ್ತಿಯನ್ನು ತೋರಿಸಿ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೇನೆ. ಬಿಜೆಪಿ-ಜೆಡಿಎಸ್ (BJP-JDS) ಇಬ್ಬರಿಗೂ ಜನಪರವಾದ ಸಿದ್ಧಾಂತ ಮತ್ತು ಬದ್ಧತೆ ಇಲ್ಲದಿರುವುದರಿಂದ ನಾಡಿನ ಜನತೆ ಎರಡೂ ಪಕ್ಷಗಳನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

Exit mobile version