ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ದೇವೇಗೌಡರ ಮೇಲೆ ಆಣೆ ಮಾಡುತ್ತೀರಾ? ಎಚ್‍ಡಿಕೆಗೆ ಸಿದ್ದು ಸವಾಲ್!

siddaramaiah

ವಚನ ಭಂಗದ ನಿಮ್ಮ ಇತಿಹಾಸ(History) ಕಂಡ ಈ ರಾಜ್ಯದ ಜನತೆ ನಿಮ್ಮನ್ನು ನಂಬಲಾರರು. ಹೀಗಾಗಿ ಜನರಲ್ಲಿ ನಂಬಿಕೆ ಹುಟ್ಟಿಸಲು ನೀವು ಬಿಜೆಪಿಯೊಂದಿಗೆ(BJP) ಚುನಾವಣೆ(Election) ಪೂರ್ವ ಅಥವಾ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಎಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಲು ಸಿದ್ದರಿದ್ದೀರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಎಚ್.ಡಿ ಕುಮಾರಸ್ವಾಮಿಯವರಿಗೆ(HD Kumarswamy) ಬಹಿರಂಗ ಸವಾಲು ಹಾಕಿದ್ದಾರೆ.

ನಿಮ್ಮದು ಜಾತ್ಯಾತೀತ ಪಕ್ಷವೆಂದು ಹೇಳಿಕೊಂಡು ಬರುತ್ತಿದ್ದೀರಿ. ಹೀಗಾಗಿ ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ ಟೀಮ್’ ಎಂಬ ಆರೋಪವು ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ದೇಶದಲ್ಲಿ ನಡೆಯುತ್ತಿರುವ ಕೋಮುವಾದಿ ವಿರೋಧಿ ಹೋರಾಟದಲ್ಲಿ ಜಾತ್ಯಾತೀತ ನಿಲುವು ಹೊಂದಿರುವ ಜೆಡಿಎಸ್ ಪಕ್ಷ ನಿಮ್ಮೊಂದಿಗಿದೆ ಎಂದು ಇಡೀ ರಾಜ್ಯದ ಜನತೆಗೆ ತಿಳಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ.

ಇನ್ನು ನಿತ್ಯ ನನ್ನ ಮೇಲೆ ನಂಜುಕಾರುವ ನೀವು ಎಲ್ಲಿ ನಿಂತಿದ್ದೀರಿ ಎಂದು ಮೊದಲು ಸ್ಪಷ್ಟಪಡಿಸಿ..? ಎಂದು ಪ್ರಶ್ನಿಸಿದ್ದಾರೆ. ಇನ್ನು ನೀವು ಯಾವುದೇ ಸನ್ನಿವೇಷ ಎದುರಾದರೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಒಮ್ಮೆ ಘೋಷಿಸಿದರೆ ಉತ್ತಮ. ಆಗ ನಿಮ್ಮ ಪಕ್ಷದ ಹೆಸರಿಗೂ ಒಂದು ಅರ್ಥ ಬರುತ್ತದೆ. ನಿಮ್ಮ ಜಾತ್ಯಾತೀತ ನಿಲುವನ್ನು ಸ್ಪಷ್ಟಪಡಿಸಿದಂತಾಗುತ್ತದೆ.

ಹೀಗಾಗಿ ನಿಮ್ಮ ತಂದೆ ಎಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಿ ಒಮ್ಮೆ ಹೇಳಿಬಿಡಿ ಎಂದು ಸಿದ್ದರಾಮಯ್ಯ ಎಚ್.ಡಿ ಕುಮಾರಸ್ವಾಮಿ ಅವರನ್ನು ಕೆಣಕಿದ್ದಾರೆ. ಇನ್ನು ಇತ್ತೀಚೆಗೆ ಎಚ್.ಡಿ ಕುಮಾರಸ್ವಾಮಿ ಅವರು ‘ಮಿಸ್ಟರ್ ಸುಳ್ಳುರಾಮಯ್ಯ’ ಎಂದು ಸಿದ್ದರಾಮಯ್ಯ ವಿರುದ್ದ ಸರಣಿ ಟ್ವೀಟ್‍ಗಳನ್ನು ಮಾಡಿದ್ದರು.

Exit mobile version