• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿಯವರು ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ, ಇದು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ : ಸಿದ್ದರಾಮಯ್ಯ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಬಿಜೆಪಿಯವರು ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ, ಇದು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ : ಸಿದ್ದರಾಮಯ್ಯ
0
SHARES
50
VIEWS
Share on FacebookShare on Twitter

Karnataka: ಕಳೆದ ಎಂಟು ವರ್ಷಗಳಿಂದ ಬಿಜೆಪಿ(BJP) ನಾಯಕರು ನನ್ನ ವಿರುದ್ಧ ಸುಳ್ಳಿನ ಕಂತೆಗಳ ಅಪಪ್ರಚಾರ ಮಾಡಿದ್ದಾರೆ, ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ(Siddaramaiah tweets to BJP) ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ,

ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ. ಇದು ಕರ್ನಾಟಕ ಮತ್ತು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ಪ್ರಶ್ನಿಸಿದ್ದಾರೆ.

Siddaramaiah tweets to BJP

ಬಿಜೆಪಿ ನಾಯಕರ ವಿರುದ್ದ ಟ್ವೀಟ್‌(Tweet) ಮೂಲಕ ವಾಗ್ದಾಳಿ ನಡೆಸಿರುವ ಅವರು, ನನ್ನ ವಿರುದ್ಧ ಯಾರೋ ಅನಾಮಧೇಯರು ಸುಳ್ಳಿನ ಕಂತೆಗಳ ಪುಸ್ತಕ ಬರೆಯುತ್ತಾರೆ,

ಆ ಪುಸ್ತಕವನ್ನು ಸಚಿವರೊಬ್ಬರ ಅಧ್ಯಕ್ಷತೆಯಲ್ಲಿ ಬಿಡುಗಡೆ ಗೊಳಿಸಲು ಸಮಾರಂಭ ಆಯೋಜಿಸುತ್ತಾರೆ.

ಇಂತಹ ಕುಚೇಷ್ಠೆ-ಕುಚೋದ್ಯಗಳನ್ನು ಬೆಂಬಲಿಸುವವರಿಗೆ ವಿಶ್ವಾಸಾರ್ಹ ಹಿನ್ನೆಲೆಯ ಬಿಬಿಸಿ ಮಾಧ್ಯಮ(BBC Media) ಸಂಸ್ಥೆಯನ್ನು ವಿರೋಧಿಸುವ ಯಾವ ನೈತಿಕತೆ ಇದೆ ಬಿಜೆಪಿ ಪಕ್ಷಕ್ಕಿದೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಸುವಿನ ಸಗಣಿ ತಿಂದರೆ ನಾರ್ಮಲ್‌ ಡೆಲಿವರಿ ಆಗುತ್ತೆ : ಆರ್‌ಎಸ್‌ಎಸ್‌ ಮುಖಂಡ ಪ್ರಮುಖ್‌ ಶಂಕರ್‌ಲಾಲ್‌

ಇನ್ನೊಂದು ಟ್ವೀಟ್‌ನಲ್ಲಿ(Tweet), ಪ್ರಧಾನಿ ನರೇಂದ್ರ ಮೋದಿಯವರ(Narendra Modi) ಕುರಿತು ಬಿಬಿಸಿ ತಯಾರಿಸಿದ್ದ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ.

ಇದೇ ರೀತಿ ಪ್ರತಿಪಕ್ಷದ ನಾಯಕರ ಚಾರಿತ್ರ್ಯಹನನ ಮಾಡದಂತೆಯೂ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಬೇಕಲ್ಲವೇ?

ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಇದೇ ಬಿಜೆಪಿ ನಾಯಕರು ದೇಶಾದ್ಯಂತ ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ? ಎಂದು ಟೀಕಿಸಿದ್ದಾರೆ.

Siddaramaiah tweets to BJP

ಇನ್ನು ಬ್ರಿಟನ್‌ನ(Britain) ಬಿಬಿಸಿ ಸಂಸ್ಥೆ ನಿರ್ಮಿಸಿರುವ ಗುಜರಾತ್‌ (Gujarat)ಗಲಭೆಗೆ ಸಂಬಂಧಿಸಿದ ಸಾಕ್ಷ್ಯಚಿತ್ರವನ್ನು ಭಾರತ ಸರ್ಕಾರ ನಿಷೇಧಿಸಿದೆ.

ಈ ಸಾಕ್ಷ್ಯಚಿತ್ರದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ.

ಈ ಸಾಕ್ಷ್ಯಚಿತ್ರದಲ್ಲಿ, 2002ರ ಗುಜರಾತ್ ಗಲಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಅಂದಿನ ಮುಖ್ಯಮಂತ್ರಿಯಾಗಿ “ನೇರವಾಗಿ ಹೊಣೆಗಾರರಾಗಿದ್ದಾರೆ” ಎಂದು ಬಿಬಿಸಿ ಬಿಂಬಿಸಿದೆ. ಬ್ರಿಟನ್‌ನಲ್ಲಿ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ಪ್ರಸಾರ ಮಾಡಲಾಗಿತ್ತು.

ಆದರೆ 59 ನಿಮಿಷಗಳ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡಲಾಗಿಲ್ಲ. ಆದರೂ ಇದನ್ನು ಟ್ವಿಟರ್(Twitter) ಮತ್ತು ಯೂಟ್ಯೂಬ್‌ನಲ್ಲಿ (Youtube)ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಹೀಗಾಗಿ ಭಾರತ ಸರ್ಕಾರ ಮಾಹಿತಿ ಮತ್ತು ತಂತ್ರಜ್ಞಾನ ಕಾನೂನಿನಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಬಿಬಿಸಿಯ ಸಾಕ್ಷ್ಯಚಿತ್ರದ ತುಣುಕುಗಳನ್ನು ನಿರ್ಬಂಧಿಸಲು ಯೂಟ್ಯೂಬ್ ಮತ್ತು ಟ್ವಿಟರ್ ಎರಡಕ್ಕೂ ಆದೇಶಗಳನ್ನು ನೀಡಿದೆ. ಸರ್ಕಾರದ ಈ ನಡೆಯನ್ನು ವಿಪಕ್ಷಗಳು ಟೀಕಿಸಿವೆ.

Tags: politicalSiddaramaiahtweets

Related News

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.