HAL ನಲ್ಲಿ ಮೋದಿ ಸ್ವಾಗತಿಸಿ (siddaramaiah welcome Modi at HAL) ಬೇಡಿಕೆಯ ಪಟ್ಟಿ ನೀಡಿದ ಸಿಎಂ
ರೈಲು, ನೀರು, ಆರೋಗ್ಯ ಸೇರಿದಂತೆ 18 ಬೇಡಿಕೆಗಳ ಪಟ್ಟಿ ಸಲ್ಲಿಕೆ
ರಾಜ್ಯದ ಅಭಿವೃದ್ಧಿಗೆ ಕೇಂದ್ರದ ತ್ವರಿತ ಸ್ಪಂದನೆ ಅಗತ್ಯವೆಂದು ಮನವಿ
Bengaluru: ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ (siddaramaiah welcome Modi at HAL) ಅವರನ್ನು HAL ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಿಎಂ ಅವರು ರಾಜ್ಯದ ಅಭಿವೃದ್ಧಿ ಹಾಗೂ ಬಾಕಿ ಉಳಿದಿರುವ ಹಲವು ಪ್ರಮುಖ ವಿಚಾರಗಳ ಕುರಿತು ಪ್ರಧಾನಿಗೆ ಮನವಿ ಸಲ್ಲಿಸಿದ್ದು, ಒಟ್ಟು 18 ಬೇಡಿಕೆಗಳ ಪಟ್ಟಿಯನ್ನು ನೀಡಿದರು.
ಈ ಮನವಿಯಲ್ಲಿ ರಾಜ್ಯದ ಮೂಲಸೌಕರ್ಯ, ನೀರು, ರೈಲು, ಆರೋಗ್ಯ ಹಾಗೂ ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಒತ್ತಾಯಿಸಲಾಗಿದೆ.

ಸಿದ್ದರಾಮಯ್ಯ ಅವರು ಸಲ್ಲಿಸಿದ ಪತ್ರದಲ್ಲಿ ಕರ್ನಾಟಕದ ಮಹತ್ವವನ್ನು (siddaramaiah welcome Modi at HAL) ವಿಶೇಷವಾಗಿ ಉಲ್ಲೇಖಿಸಿದ್ದಾರೆ. ಐಟಿ, ಕೃಷಿ, ಉತ್ಪಾದನೆ ಹಾಗೂ
ಸೇವಾ ವಲಯಗಳಲ್ಲಿ ದೇಶದ ಅಭಿವೃದ್ಧಿಗೆ ಕರ್ನಾಟಕ ನೀಡುತ್ತಿರುವ ಕೊಡುಗೆಗಳನ್ನು ವಿವರಿಸಿ, ರಾಜ್ಯವು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ ಎಂದು ತಿಳಿಸಿದ್ದಾರೆ.
ಜೊತೆಗೆ, ಸಹಕಾರಿ ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮನ್ವಯ ಅತ್ಯಗತ್ಯ ಎಂದು ಅವರು ಹೇಳಿದ್ದಾರೆ. ಆದರೆ
ಅನೇಕ ಯೋಜನೆಗಳಿಗೆ ಅನುಮೋದನೆ ಹಾಗೂ ಹಣಕಾಸು ಬಿಡುಗಡೆ ವಿಳಂಬವಾಗುತ್ತಿರುವುದು ರಾಜ್ಯದ ಪ್ರಗತಿಗೆ ಅಡ್ಡಿಯಾಗುತ್ತಿದೆ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿರಿಸಲಾಗಿದೆ.
ಕೋಲಾರದಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ (Railway Coach Factory) ಸ್ಥಾಪನೆ, ಬೆಂಗಳೂರು-ಮೈಸೂರು ಹೈ-ಸ್ಪೀಡ್ (High-speed) ರೈಲು ಮಾರ್ಗ ವಿಸ್ತರಣೆ, ಬೆಂಗಳೂರು
ಉಪನಗರ ರೈಲು ಯೋಜನೆಗೆ ಹಣ ಬಿಡುಗಡೆ ಸೇರಿದಂತೆ ಹಲವು ಸಾರಿಗೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗಿದೆ.
ಇದರ ಜೊತೆಗೆ ಜಲ ಜೀವನ್ ಮಿಷನ್ ಯೋಜನೆಯ ಬಾಕಿ ಹಣ ಬಿಡುಗಡೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಅನುದಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.
ಇದಲ್ಲದೆ, ರಾಜ್ಯದ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಮೇಕೆದಾಟು ಯೋಜನೆಗೆ ಶೀಘ್ರ ಅನುಮತಿ, ಮಹದಾಯಿ ಯೋಜನೆಗೆ ಪರಿಸರ ಅನುಮತಿ ಹಾಗೂ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕಕ್ಕೆ ನ್ಯಾಯಸಮ್ಮತ ಹಂಚಿಕೆ ನೀಡುವಂತೆ ಮನವಿ ಮಾಡಲಾಗಿದೆ.
ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ, ಕೃಷ್ಣಾ ಜಲ ವಿವಾದ ನ್ಯಾಯಾಧೀಕರಣದ ತೀರ್ಪು ಪ್ರಕಟಣೆ ಸೇರಿದಂತೆ ಹಲವು ನೀರಿನ ಸಂಬಂಧಿತ
ಬೇಡಿಕೆಗಳು ಪ್ರಮುಖವಾಗಿವೆ. ಇವು ರಾಜ್ಯದ ದೀರ್ಘಕಾಲೀನ ಅಭಿವೃದ್ಧಿಗೆ ಬಹಳ ಅಗತ್ಯವೆಂದು ಸಿಎಂ ತಮ್ಮ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಆರೋಗ್ಯ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಬೇಡಿಕೆಗಳನ್ನೂ ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ.
ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆ, ಪರಿಶಿಷ್ಟ ಪಂಗಡಗಳ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದು ಹಾಗೂ ರಾಜ್ಯದ ಮೀಸಲಾತಿ ನೀತಿಯನ್ನು ಸಂವಿಧಾನದ ಒಂಬತ್ತನೇ ವೇಳಾಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ವಿಶೇಷ ಆರ್ಥಿಕ ನೆರವು ಹಾಗೂ ಪ್ರತಿ ಜಿಲ್ಲೆಯಲ್ಲಿ ಸಾರ್ವಜನಿಕ ವಲಯದ ಉದ್ಯಮ ಸ್ಥಾಪನೆಗೂ ಒತ್ತಾಯಿಸಲಾಗಿದೆ.
ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಿದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಉತ್ತೇಜನ ಸಿಗುತ್ತದೆ ಮತ್ತು ಕೇಂದ್ರ-ರಾಜ್ಯ ಸಹಕಾರ ಇನ್ನಷ್ಟು ಬಲವಾಗುತ್ತದೆ ಎಂಬ ವಿಶ್ವಾಸವನ್ನು ಸಿಎಂ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : https://vijayatimes.com/free-textbook-for-puc-students/