• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸ್ವಾಭಿಮಾನಿ ಸಮಾವೇಶ ಅಲ್ಲ, ಜನಕಲ್ಯಾಣ ಸಮಾವೇಶ: ಸಿದ್ದರಾಮಯ್ಯ ಬಣಕ್ಕೆ ಟಕ್ಕರ್ ನೀಡಿದ ಕನಕಪುರ ಬಂಡೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಸ್ವಾಭಿಮಾನಿ ಸಮಾವೇಶ ಅಲ್ಲ, ಜನಕಲ್ಯಾಣ ಸಮಾವೇಶ: ಸಿದ್ದರಾಮಯ್ಯ ಬಣಕ್ಕೆ ಟಕ್ಕರ್ ನೀಡಿದ ಕನಕಪುರ ಬಂಡೆ
0
SHARES
14
VIEWS
Share on FacebookShare on Twitter

Bengaluru: ಉಪ ಚುನಾವಣೆಯ (By-election) ಗೆಲುವಿನ ಬೆನ್ನಲ್ಲೇ ಡಿಸೆಂಬರ್ 5ರಂದು ಹಾಸನದಲ್ಲಿ (Hassan) ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರ (Chief Minister Siddaramaiah) ಸ್ವಾಭಿಮಾನಿ ಸಮಾವೇಶದ ದಿಕ್ಕು ದೆಸೆಯೇ ಬದಲಾಗಿದೆ. ‘ಸಿದ್ದರಾಮೋತ್ಸವ 2.0’ (‘Siddharamotsava 2.0’) ಎಂದೇ ಆರಂಭವಾಗಿದ್ದ ಈ ಸಮಾವೇಶ ಮುಖ್ಯಮಂತ್ರಿಗಳ ಪವರ್‌ ಶೋ ಎಂದೇ ಬಿಂಬಿತವಾಗುತ್ತಿತ್ತು. ಸಿದ್ದರಾಮಯ್ಯ ಬಣದ ಸಚಿವರೇ ಮುಂದೆ ನಿಂತು ಈ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಮಾಡುತ್ತಿದ್ದರು. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (AICC President Mallikarjuna Kharge) ಬರೆದ ಅನಾಮಧೇಯ ಪತ್ರದ ನಂತರ ಎಲ್ಲ ಬದಲಾಯಿತು. ನಂತರ ಪಕ್ಷದ ವತಿಯಿಂದಲೇ ಕಾರ್ಯಕ್ರಮ ಮಾಡುವಂತೆ ರಾಹುಲ್ ಗಾಂಧಿ (Rahul Gandhi) ಸೂಚನೆ ನೀಡಿದರು. ಈ ಎಲ್ಲಾ ಬೆಳವಣಿಗೆ ಬಳಿಕ ಇಡೀ ಕಾರ್ಯಕ್ರಮವನ್ನು ಡಿಸಿಎಂ, (DCM) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಓವರ್ ಟೇಕ್ ಮಾಡಿದ್ದಾರೆ.

ಈ ಮೊದಲು ಹಾಸನದ ಸಿದ್ದರಾಮಯ್ಯರ ಸಮಾವೇಶ 6 ಜಿಲ್ಲೆಗಳನ್ನು ಗುರಿಯಾಗಿಸಿ ಮಾಡಲಾಗುತ್ತಿದೆ ಎನ್ನಲಾಗಿತ್ತು. ಆದರೆ ಈಗ ಡಿಕೆ ಶಿವಕುಮಾರ್ (DK Sivakumar) ಆರು ಜಿಲ್ಲೆಗಳು ಅಲ್ಲ, ಹಾಸನ ಜಿಲ್ಲೆ ಮಾತ್ರ ಕೇಂದ್ರೀಕರಿಸಿ ಸಮಾವೇಶ ಮಾಡುತ್ತಿದ್ದೇವೆ ಎಂದಿದ್ದಾರೆ.ಅಷ್ಟೆ ಅಲ್ಲದೆ ಸಿದ್ದರಾಮಯ್ಯ ಬಣಕ್ಕೆ ಬಿಗ್ ಶಾಕ್ ಕೊಟ್ಟಿರುವ ಕನಕಪುರ ಬಂಡೆ, ಇದು ಪಕ್ಷದ ಸಮಾವೇಶ ಎಂದು ಹೇಳಿದ್ದಾರೆ. ನಿನ್ನೆ ಹಾಸನದಲ್ಲಿ ಖದ್ದು ಸಮಾವೇಶದ ಸ್ಥಳ ಪರಿಶೀಲಿಸಿದ್ದಾರೆ (Checked the location) . ಸ್ವಾಭಿಮಾನಿ ಸಮಾವೇಶ ಎಂದಿದ್ದ ಹೆಸರನ್ನು ಜನಕಲ್ಯಾಣ ಸಮಾವೇಶ ಎಂದು ಬದಲಿಸಲಾಯಿಸಿದ್ದಾರೆ.ಸ್ವಾಭಿಮಾನಿ ಹೆಸರಲ್ಲಿ ಬೃಹತ್ ಶಕ್ತಿಪ್ರದರ್ಶನ ಮೂಲಕ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಸಜ್ಜಾಗಿದ್ದ ಸಿದ್ದರಾಮಯ್ಯರಿಗೆ ಡಿಕೆ ಶಿವಕುಮಾರ್ ಕೌಂಟರ್​ ಕೊಟ್ಟಿದ್ದಾರೆ.

ಹಾಸನಕ್ಕೆ ಬೇಟಿ ನೀಡಿ ತಯಾರಿ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದು ಕೇವಲ ಹಾಸನಕ್ಕೆ ಸೀಮಿತವಾದ ಕಾರ್ಯಕ್ರಮ (Program limited to Hassan) . ಇಂತಹ ಕಾರ್ಯಕ್ರಮ ಎಲ್ಲಾ ಕಡೆ ನಡೆಯಲಿದೆ. ವಿಪಕ್ಷಗಳ ನಾಯಕರು (Leaders of Opposition) ನಮ್ಮನ್ನು ಟೀಕೆ ಮಾಡುತ್ತಿದ್ದರು. ಆದರೆ ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ಜನರು ಉಪ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಬಿಜೆಪಿ (BJP) ಜನರ ಭಾವನೆ ಜೊತೆ ರಾಜಕೀಯ ಮಾಡುತ್ತಿದೆ. ನಾವು ಜನರ ಬದುಕಿನ ಜೊತೆ ರಾಜಕೀಯ ಮಾಡುತ್ತೇವೆ. ಜನರಿಗಾಗಿ ನಮ್ಮ ಸರ್ಕಾರ ಬಂದ ನಂತರ ಹಲವು ಯೋಜನೆ ಜಾರಿ ಮಾಡಲಾಗಿದೆ. ಇದನ್ನು ಜನರಿಗೆ ಹೇಳಬೇಕಾಗಿದೆ ಹಾಗಾಗಿಯೇ ಈ ಸಮಾವೇಶ ನಡೆಸಲಾಗುತ್ತಿದೆ ನುಡಿದಂತೆ ನಡೆದು ಬಂದ ನಮ್ಮ ಕಾರ್ಯಸಾಧನೆಯ ಬಗ್ಗೆ ಜನರಿಗೆ ತಿಳಿಸಬೇಕಿದೆ ಎಂದಿದ್ದಾರೆ.

Tags: bjpCongressD K ShivakumarKanakapura bandeKarnatakapoliticalpoliticsSiddaramaiah

Related News

ಪಾಕಿಸ್ತಾನ-ISI ಬೇಹುಗಾರಿಕೆ ಜಾಲ ಬಯಲು ಮಾಡಿದ ದಿಲ್ಲಿಯ ವಿಶೇಷ ಘಟಕ
ದೇಶ-ವಿದೇಶ

ಪಾಕಿಸ್ತಾನ-ISI ಬೇಹುಗಾರಿಕೆ ಜಾಲ ಬಯಲು ಮಾಡಿದ ದಿಲ್ಲಿಯ ವಿಶೇಷ ಘಟಕ

April 11, 2026
ಡ್ರಂಕ್ & ಡ್ರೈವ್ ಪ್ರಕರಣಗಳಲ್ಲಿ ವಾಹನ ಸೀಜ್‌ಗೆ ಬ್ರೇಕ್: ಹೈಕೋರ್ಟ್ ಮಹತ್ವದ ತೀರ್ಪು
ಮಾಹಿತಿ

ಡ್ರಂಕ್ & ಡ್ರೈವ್ ಪ್ರಕರಣಗಳಲ್ಲಿ ವಾಹನ ಸೀಜ್‌ಗೆ ಬ್ರೇಕ್: ಹೈಕೋರ್ಟ್ ಮಹತ್ವದ ತೀರ್ಪು

April 11, 2026
ಆನ್‌ಲೈನ್ ಪೇಮೆಂಟ್ ಮೇಲೆ RBI ಕಟ್ಟುನಿಟ್ಟಿನ ಕ್ರಮ: ₹10,000 ಮೇಲ್ಪಟ್ಟ ವ್ಯವಹಾರಕ್ಕೆ ‘ಕೂಲಿಂಗ್ ಅವಧಿ’
ಡಿಜಿಟಲ್ ಜ್ಞಾನ

ಆನ್‌ಲೈನ್ ಪೇಮೆಂಟ್ ಮೇಲೆ RBI ಕಟ್ಟುನಿಟ್ಟಿನ ಕ್ರಮ: ₹10,000 ಮೇಲ್ಪಟ್ಟ ವ್ಯವಹಾರಕ್ಕೆ ‘ಕೂಲಿಂಗ್ ಅವಧಿ’

April 11, 2026
ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೊಸ ತಿರುವು: ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕಾ ಮಹತ್ವದ ಮಾತುಕತೆ
ದೇಶ-ವಿದೇಶ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೊಸ ತಿರುವು: ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕಾ ಮಹತ್ವದ ಮಾತುಕತೆ

April 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.