• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರಾಜ್ಯಕ್ಕಾಗುತ್ತಿರುವ ಅನ್ಯಾಯ ತಡೆದರೆ ‘ನಾಯಿಮರಿ’ ಅಲ್ಲ ‘ರಾಜಾಹುಲಿ’ ಬಿರುದು ಕೊಡುತ್ತೇನೆ : ಸಿದ್ದರಾಮಯ್ಯ

Rashmitha Anish by Rashmitha Anish
in ರಾಜಕೀಯ, ರಾಜ್ಯ
ರಾಜ್ಯಕ್ಕಾಗುತ್ತಿರುವ ಅನ್ಯಾಯ ತಡೆದರೆ ‘ನಾಯಿಮರಿ’ ಅಲ್ಲ ‘ರಾಜಾಹುಲಿ’ ಬಿರುದು ಕೊಡುತ್ತೇನೆ : ಸಿದ್ದರಾಮಯ್ಯ
0
SHARES
28
VIEWS
Share on FacebookShare on Twitter

Bengaluru : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Siddaramaiah’s puppy statementai) ಅವರು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಧಾನಿ ನರೇಂದ್ರ ಮೋದಿ(Narendra modi) ಅವರ ಮುಂದೆ ಧೈರ್ಯವಾಗಿ ಹೇಳಿ ರಾಜ್ಯಕ್ಕೆ ನ್ಯಾಯ ಕೊಡಿಸಿದರೆ ನಾನು ‘ನಾಯಿ ಮರಿ’ ಎಂದು ಹೇಳಿರುವುದನ್ನು ವಾಪಸು ಪಡೆದು,

‘ರಾಜಾ ಹುಲಿ’ ಎಂಬ ಬಿರುದು ಕೊಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಸಿಎಂ ಬೊಮ್ಮಾಯಿ ಅವರ ವಿರುದ್ಧ ಸಿದ್ದರಾಮಯ್ಯನವರ(Siddaramaiah) ನಾಯಿ ಮರಿ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ನಾಯಕರು(Siddaramaiah’s puppy statement),

ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ಅವರಿಗೆ ನಾಯಿ ಮರಿ ಎಂದು ಹೇಳಿದ್ದನ್ನು ಹಿಂಪಡೆಯಬೇಕು, ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ನಾಯಕರ ಆಕ್ರೋಶದ ಬೆನ್ನಲ್ಲೇ ಬಿಜೆಪಿ ಸರ್ಕಾರದ ಲೋಪದೋಷಗಳನ್ನು ಎತ್ತಿಹಿಡಿದ ಸಿದ್ದರಾಮಯ್ಯ, ಸರಣಿ ಆರೋಪಗಳ ಮೂಲಕ ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

Siddaramaiah's puppy statement

ಕಾರ್ಪೋರೇಟ್ ತೆರಿಗೆ, ಸುಂಕ, ಪೆಟ್ರೋಲ್-ಡೀಸೆಲ್ ತೆರಿಗೆ, ಜಿಎಸ್‌ಟಿ ಮೂಲಕ ರಾಜ್ಯದಿಂದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಂದಾಯವಾಗುತ್ತಿರುವ ಹಣ ಸುಮಾರು ರೂ.3.50 ಲಕ್ಷ ಕೋಟಿ,

ರಾಜ್ಯಕ್ಕೆ ವಾಪಸು ಬರುವುದು ರೂ.50,000 ಕೋಟಿಗಿಂತಲೂ ಕಡಿಮೆ. ಈ ಅನ್ಯಾಯದ ವಿರುದ್ಧ ದನಿ ಎತ್ತುವ ಧಮ್ ಇದೆಯೇ ಬೊಮ್ಮಾಯಿ ಅವರೇ?(Siddaramaiah’s puppy statement) ಮನಮೋಹನ್ ಸಿಂಗ್(Manmohan singh) ಸರ್ಕಾರ 2019 ರಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನೀಡಿರುವ ಪಾಲು ರೂ. 39,000 ಕೋಟಿ,

ಕಳೆದ ವರ್ಷ ರಾಜ್ಯಕ್ಕೆ ಬಂದಿರುವ ಹಣ ರೂ.29,000 ಕೋಟಿ. ಬಜೆಟ್ ಗಾತ್ರ ಹೆಚ್ಚಿದೆ, ತೆರಿಗೆ ಸಂಗ್ರಹ ಹೆಚ್ಚಿದೆ, ರಾಜ್ಯದ ಪಾಲು ಕಡಿಮೆಯಾಗಿದೆ ಯಾಕೆ ಬೊಮ್ಮಾಯಿ ಅವರೇ?

ಇದನ್ನೂ ಓದಿ: https://vijayatimes.com/156-rape-cases-registered/

ಕಳೆದ ವರ್ಷ ಕೇಂದ್ರ ಪ್ರಾಯೋಜಿತ ಯೋಜನೆಗಳು ಮತ್ತು ಜಿಎಸ್‌ಟಿ(GST) ಪರಿಹಾರದಿಂದ ಬಂದಿರುವ ಹಣ ರೂ.30,000 ಕೋಟಿ, ಈ ವರ್ಷ ಕೇಂದ್ರ ನೀಡಿರುವುದು ರೂ.20,106 ಕೋಟಿ.

ವರ್ಷದಿಂದ ವರ್ಷಕ್ಕೆ ರಾಜ್ಯದ ಪಾಲು ಕಡಿಮೆಯಾಗುತ್ತಿರುವುದು ಯಾಕೆ ಬೊಮ್ಮಾಯಿ ಅವರೇ? 2017 ರಿಂದ ಮೇಕೆದಾಟು(Mekedatu), 2020 ರಿಂದ ಮಹದಾಯಿ(Mahadai) ಮತ್ತು 2021 ರಿಂದ ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡದೆ ಸತಾಯಿಸುತ್ತಿದೆ.

ಮಹದಾಯಿ ಬಗ್ಗೆ ಇತ್ತೀಚೆಗೆ ಅನುಮತಿ ನೀಡಲಾಗಿದೆ ಎಂದು ಹೇಳುತ್ತಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಇದರ ವಿರುದ್ದ ದನಿ ಎತ್ತುವವರು ಯಾರು ಬೊಮ್ಮಾಯಿ ಅವರೇ?

ರಾಜ್ಯದ ವಿಮಾನ ನಿಲ್ದಾಣ, ಬಂದರುಗಳು ಅದಾನಿ ಕಂಪೆನಿಗೆ ಮಾರಾಟ ಮಾಡಲಾಗುತ್ತಿದೆ. ರಾಯಚೂರು ಉಷ್ಣವಿದ್ಯುತ್ ಸ್ಥಾವರವೂ ಅದೇ ಸಾಲಿಗೆ ಸೇರಲಿದೆ, ಈಗ ರಾಜ್ಯದ ನಂದಿನಿ(Nandini) ಡೇರಿ

ಮೇಲೆ ಕಣ್ಣು ಬಿದ್ದಿದೆ. ರಾಜ್ಯದಲ್ಲಿರುವುದು ಜನರ ಸರ್ಕಾರವೇ? ಕೇಂದ್ರದ ಏಜಂಟ್ ಸರ್ಕಾರವೇ ಬಿಜೆಪಿ? ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನದ ಆಶ್ವಾಸನೆಯಷ್ಟೇ ಲಾಭ,

ಈ ವರೆಗೆ ಪೈಸೆ ಹಣ ನೀಡಿಲ್ಲ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳೆಲ್ಲವೂ ಕೇಂದ್ರ ಅನುದಾನ ಬಿಡುಗಡೆ ಮಾಡದೆ ಇರುವ ಕಾರಣಕ್ಕೆ ಕುಂಟುತ್ತಾ ಸಾಗಿದೆ. ಇದನ್ನು ಪ್ರಶ್ನಿಸುವ ಶಕ್ತಿ ಯಾರಿಗಿದೆ ಬೊಮ್ಮಾಯಿ ಅವರೇ?

ಎಂದು ಸರಣಿ ಪ್ರಶ್ನೆಗಳ ಮುಖೇನ ಸಿಎಂ ಹಾಗೂ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Tags: CongresspoliticalSiddaramaiah

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.