ಸಿಎಂ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಾಗಿದ್ದಾರೆ : ಸಿದ್ದರಾಮಯ್ಯ!

siddaramaiah

ರಾಜ್ಯ ರಾಜಕಾರಣದಲ್ಲಿ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಗಳು ಮುನ್ನೆಲೆಗೆ ಬರುತ್ತಲೇ ಇವೆ. ಸದ್ಯ ಇದೇ ಸಾಲಿನಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯನವರು(Siddaramaiah) ರಾಜ್ಯದ ಮುಖ್ಯಮಂತ್ರಿ(Chiefminister) ಬಸವರಾಜ್ ಬೊಮ್ಮಾಯಿ(Basavaraj Bommai) ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಹೌದು, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ಧರ್ಮಗಳ ವಿರೋಧಗಳು ತೀವ್ರ ತೊಂದರೆ, ಮನಸ್ತಾಪಗಳನ್ನು ಹೆಚ್ಚಿಸುತ್ತಿವೆ.

ಮೊನ್ನೆಯಷ್ಟೇ ಇದೇ ರೀತಿಯ ಸಂಘರ್ಷದಲ್ಲಿ ಮುಸ್ಲಿಂ ವ್ಯಾಪರಿಯೊಬ್ಬರು ದೇವಸ್ಥಾನದ ಪಕ್ಕ ಕುಳಿತು ಕಲ್ಲಂಗಡಿ ಹಣ್ಣನ್ನು ಮಾರಾಟ ಮಾಡುತ್ತಿದ್ದರು, ಬಡ ವ್ಯಾಪಾರಿಯ ಮೇಲೆ ಶ್ರೀರಾಮ ಸೇನೆಯವರು ಕಲ್ಲಂಗಡಿ ಹಣ್ಣನ್ನು ರಸ್ತೆಗೆ ಎಸೆದು, ಅಂಗಡಿ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಈ ಕುರಿತು ರಾಜ್ಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಯಿತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಮಾತನಾಡಿದ್ದು,

“ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದ್ರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜಿವ ಆಟದ ಗೊಂಬೆ. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ’ ಎಂದು ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

Exit mobile version