• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿದ್ದರಾಮಯ್ಯ ಫ್ರೀ ಆಗಿರುವ ಕಾರಣ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ: ಎಸ್.ಟಿ.ಎಸ್. ಟೀಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಸಿದ್ದರಾಮಯ್ಯ ಫ್ರೀ ಆಗಿರುವ ಕಾರಣ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ: ಎಸ್.ಟಿ.ಎಸ್. ಟೀಕೆ
0
SHARES
0
VIEWS
Share on FacebookShare on Twitter

ಮೈಸೂರು, ಜ. 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದಾರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು ನೋಡಿಕೊಳ್ಳಲಿ. ನಮ್ಮ ಪಕ್ಷದ ಉಸಾಬರಿ ಏಕೆ? ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು; ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ. ಅವರು ಪದೇ ಪದೇ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ತಮ್ಮ ಪಕ್ಷದಲ್ಲಿನ ಗೊಂದಲಗಳನ್ನು ಬಗೆಹರಿಸಿಕೊಳ್ಳಲಿ. ಪ್ರಚಾರಕ್ಕಾಗಿ ಅವರು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳು ಕೋವಿಡ್ ಹಾಗೂ ಉಳಿದ ಪರಿಸ್ಥಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೇ ಹೇಳಿದ್ದಾರೆ. ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಇನ್ನು 2.5 ವರೇ ವರ್ಷ ಆಡಳಿತ ನಡೆಸುತ್ತಾರೆ. ಉತ್ತಮ ಮತ್ತು ದಕ್ಷ ಆಡಳಿತ ನೀಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಮಗೆ ಶಾ ಅವರ ಸರ್ಟಿಫಿಕೇಟ್ ಸಾಕು. ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ. ಅದನ್ನು ಅವರೇ ಇಟ್ಟುಕೊಳ್ಳಲಿ ಎಂದು ಸಚಿವರು ಹೇಳಿದರು.

ನನಗೆ ಯಾವುದೇ ಸಿಡಿ ಬಗ್ಗೆ ಮಾಹಿತಿ ಇಲ್ಲ. ನನಗೆ ಗೊತ್ತಿರುವುದು ಬೆಂಗಳೂರು ಅಭಿವೃದ್ಧಿಯ ಸಿಡಿ. ಮುಖ್ಯಮಂತ್ರಿಗಳು ಈಗಾಗಲೇ 2 ಸಭೆ ನಡೆಸಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ. ಅದಕ್ಕೊಂದು ರೂಪುರೇಷೆ ನೀಡಿ ಸಂಬಂಧಿಸಿದ ಸಿಡಿಯನ್ನು ನಮಗೆ ಕಳುಹಿಸುವುದಾಗಿ ಹೇಳಿದ್ದಾರೆ. ಅದು ಬಿಟ್ಟು ಬೇರೆ ಮಾಹಿತಿ ನನಗೆ ಇಲ್ಲ. ಅದನ್ನು ಹೇಳಿದವರಿಗೇ ಕೇಳಬೇಕು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ “ಡಬಲ್ ಇಂಜಿನ್” ಅಭಿವೃದ್ಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವರಾದ ಸೋಮಶೇಖರ್ ಅವರು, ರಾಜ್ಯದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದ್ದಲ್ಲದೆ, ವೇಗ ಪಡೆದುಕೊಂಡಿದೆ. ಕೋವಿಡ್ ಹಿನ್ನೆಲೆಯಲ್ಲಿ 8-9 ತಿಂಗಳು ಎಲ್ಲ ಕಡೆಯೂ ಅಭಿವೃದ್ಧಿ ಕುಂಠಿತಗೊಂಡಿತ್ತು. ಆದರೆ, ಈಗ ಎಲ್ಲವೂ ಪ್ರಾರಂಭವಾಗಿದೆ. ಒಂದೊಂದು ಕ್ಷೇತ್ರಕ್ಕೆ ಲೋಕೋಪಯೋಗಿಯಿಂದ ಸುಮಾರು 25 ಕೋಟಿ ರೂಪಾಯಿಯಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ಹೀಗೆ ಒಂದೊಂದಾಗಿ ಚಾಲನೆ ನೀಡಲಾಗುತ್ತಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.