- ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣ ಎಂದ ರಾಜ್ಯ ಸರ್ಕಾರ
- ಸುಳ್ಳೇ ಬಿಜೆಪಿಯ ಮನೆ ದೇವರು,ಆರ್ಎಸ್ಎಸ್ ಸುಳ್ಳಿನ ಮಹಾ ಕಾರ್ಖಾನೆ. (Siddu lashes out at BJP)
- ಜನಾಕ್ರೋಶ ಏನಿದ್ದರೂ ಕೇಂದ್ರದ ಮೇಲೆ ಮಾಡಬೇಕೇ ಹೊರತು ಕಾಂಗ್ರೆಸ್ ಪಕ್ಷದ ಮೇಲಲ್ಲ.
Bengaluru: ಬೆಲೆ ಏರಿಕೆ ನಮ್ಮಿಂದ ಆಗಿದ್ದಲ್ಲ ಬದಲಿಗೆ ಎಲ್ಪಿಜಿ ಸಿಲಿಂಡರ್ಗಳು (LPG cylinders) , ಅಕ್ಕಿ, ಚಿನ್ನ ಮತ್ತು ಇತರ ಎಲ್ಲಾ ಸರಕುಗಳ ಬೆಲೆ ಏರಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ದೇಶದ ಮಧ್ಯಮ ವರ್ಗ ಮತ್ತು ಬಡ ಜನರ ವಿರೋಧಿಯಾಗಿದೆ. ಗ್ಯಾಸ್ ಸಬ್ಸಿಡಿ ತೆಗೆದು ಪ್ರಧಾನಿ ಮೋದಿ ಸರ್ಕಾರ ಬಡವರ ವಿರೋಧಿಯೆನಿಸಿದೆ. ಔಷಧಿ, ಗೊಬ್ಬರ, ಡೀಸೆಲ್, ಪೆಟ್ರೋಲ್ (Medicine, fertilizer, diesel, petrol) ಸೇರಿ ಎಲ್ಲದರ ಬೆಲೆ ಏರಿಕೆ ಮಾಡುವ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಯಾವ ಮುಖವಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ (Congress Govt) ಬಗ್ಗೆ ಮಾತನಾಡುತ್ತಿದೆ. ಅರ್ಥವಾಗುತ್ತಿಲ್ಲ . ಹಾಲಿನ ದರ 4 ರೂಪಾಯಿ ಹೆಚ್ಚಿಸಿ ಅದನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಇದರಲ್ಲಿ ನಯಾಪೈಸೆಯೂ ಸರ್ಕಾರದ ಖಜಾನೆಗೆ ಬರುವುದಿಲ್ಲ. ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ (Theoretical clarity) ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದು ರಾಜಕೀಯ ಬದ್ಧತೆಯೇ ಆಗಿದೆ. ಸುಳ್ಳೇ ಬಿಜೆಪಿಯ ಮನೆ ದೇವರು. ಆರ್ಎಸ್ಎಸ್ ಸುಳ್ಳಿನ ಮಹಾ ಕಾರ್ಖಾನೆ.

ಅಂಬೇಡ್ಕರ್ ಅವರನ್ನು ಸೋಲಿ ಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇ ಡೈರ್ (Ambe Dyer himself) ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ (BJP bundle) ಬಿಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.ನಾವು ಸುಳ್ಳಿನ ಕಾರ್ಖಾನೆ ಆರ್ಎಸ್ಎಸ್ನ (RSS) ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು.
ನಮ್ಮ ಸರ್ಕಾರ ಆರ್ಥಿಕವಾಗಿ (Government financially) ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ (Modi Govt) ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ.
ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂ (Rs 56 thousand crore) . ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.ಇದೇ ವೇಳೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ (Rahul Gandhi) ಮತ್ತು ಸೋನಿಯಾ ಗಾಂಧಿ (Sonia Gandhi) ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು.ಕೊರೊನಾದಿಂದ ಜನ ಸಾಯುವಾಗ ಬೆಲೆಯೇರಿಕೆ ಮಾಡಿದ ಪಾಪಿಗಳು ಈ ಬಿಜೆಪಿಗರು.
ಇದನ್ನೂ ಓದಿ: http://ಮುಟ್ಟಿದರೆ ಮುನಿ ಗಿಡದ ಮಹಿಮೆ ಹಲವರಿಗೆ ಗೊತ್ತಿಲ್ಲ, ಇದರಲ್ಲಿದೆ ಆರೋಗ್ಯ ಲಾಭ!
ಕಾಂಗ್ರೆಸ್ ಕಾರ್ಯಕರ್ತರು ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಿದ್ಧರಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ (Taluk and District) ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಲು ಮತ್ತು ಬಿಜೆಪಿಯ ದುರಾಡಳಿತದ (Siddu lashes out at BJP) ವಿರುದ್ಧ ಜಾಗೃತಿ ಮೂಡಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಅವರು ಶಾಸಕರಿಗೆ ಮನವಿ ಮಾಡಿದ್ದಾರೆ.