Uttara Pradesh: ಈಗಾಗಲೇ ಲೋಕಸಭಾ ಚುನಾವಣೆ (Lok Sabha Election)ಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡನೇ ಹಂತಕ್ಕೆ ಎಲ್ಲೆಡೆ ತಯಾರಿ ನಡೆದಿದೆ. ಆದರೆ ಈವರೆಗೂ ಉತ್ತರ ಪ್ರದೇಶದ ಅಮೇಥಿ (Amethi) ಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ಈ ಕುರಿತು ರಾಹುಲ್ ಗಾಂಧಿ ಹಾಗೂ ರಾಬರ್ಟ್ ವಾದ್ರಾ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ವಾಗ್ದಾಳಿ ನಡೆಸಿ ‘ಜೀಜಾಜೀ ಕಾ ನಜರ್ ಹೈ, ಸಾಲೆ ಸಾಹಬ್ ಕ್ಯಾ ಕರೇಂಗೆ’ ಅಂದರೆ ಸ್ಥಾನದ ಮೇಲೆ ಬಾವ ಕಣ್ಣಿಟ್ಟಿದ್ದಾರೆ ರಾಹುಲ್ ಗಾಂಧಿ ಏನು ಮಾಡ್ತಾರೆ ಎನ್ನುವ ಅರ್ಥವನ್ನು ನೀಡುವಂತೆ ಸ್ಮೃತಿ ಇರಾನಿ ಟಾಂಗ್ ನೀಡಿದ್ದಾರೆ .
ಇನ್ನೇನು ಲೋಕಸಭೆ ಚುನಾವಣೆಗೆ ಕೇವಲ 27 ದಿನಗಳು ಉಳಿದಿವೆ, ಆದರೆ ಈವರೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಐದು ವರ್ಷಗಳಲ್ಲಿ ಏನು ಮಾಡಬಲ್ಲೆ ಎಂದು ಜನರಿಗೆ ಮನವರಿಕೆ ಮಾಡಿಕೊಡಲು ಕೂಡ ಅವರಿಗೆ ಕಷ್ಟವಾಗುತ್ತಿರುವಂತಿದೆ. 2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು (Rahul Gandhi) ಸೋಲಿಸುವ ಮೊದಲು ಮೂರು ಬಾರಿ ಸತತವಾಗಿ ಅವರು ಅಮೇಥಿಯನ್ನು ಪ್ರತಿನಿಧಿಸಿದ್ದರು.
ಸೋನಿಯಾಗಾಂದಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ (Sanjay Gandhi) ಕೂಡ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇದನ್ನು ಕಾಂಗ್ರೆಸ್ನ ಭದ್ರಕೋಟೆ ಎಂದು ಕರೆಯಲಾಗುತ್ತಿತ್ತು. ಆದರೆ ಆ ಕ್ಷೇತ್ರದಲ್ಲಿಯೆ ಇನ್ನು ಯಾರನ್ನು ಆಯ್ಕೆ ಮಾಡಲಿ ಎಂದು ಯೋಚಿಸುವಂತಾಗಿದೆ.
ಹಿಂದೆ ಬಸ್ಗಳಲ್ಲಿ ಪ್ರಯಾಣಿಸುವ ಮುನ್ನ ಕರವಸ್ತ್ರವನ್ನು ಹಾಕಿ ಸೀಟು ಹಿಡಿಯುವ ಕಾಲವೊಂದಿತ್ತು. ಈಗ ರಾಬರ್ಟ್ ವಾದ್ರಾ (Robert Vadra) ಆ ಸೀಟಿನ ಮೇಲೆ ಕಣ್ಣೀಟ್ಟಿರುವ ಕಾರಣ ಆ ಆಸನದ ಮೇಲೆ ಯಾರಿಗೂ ಕೂರಲು ಸಾಧ್ಯವಾಗುತ್ತಿಲ್ಲ ಎಂದು ಟಾಂಗ್ ನೀಡಿದ್ದಾರೆ.
ರಾಬರ್ಟ್ ವಾದ್ರಾ 2019ರಲ್ಲಿ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸಬಹುದು ಎನ್ನುವ ಊಹಾಪೋಹಗಳು ಹರಿದಾಡುತ್ತಿರುವ ಈ ಸಂದರ್ಭದಲ್ಲಿ ಸ್ಮೃತಿ ಇರಾನಿ ಈ ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ.ಮೇ 20ರಂದು ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಅಮೇಥಿಯಲ್ಲಿ ಮತದಾನ ನಡೆಯಲಿದೆ ಅದರ ಒಳಗೆ ನಿರ್ಣಯ ಕೈಗೊಂಡರೆ ಒಳ್ಳೆಯದು ಎಂದು ರಾಹುಲ್ ಗಾಂಧಿಯನ್ನು ತಿವಿದಿದ್ದಾರೆ.