- ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ ಎಡವಟ್ಟಾಗಿ ಮಾತಾಡಿದ ಗಾಯಕ
- ಪಹಲ್ಗಾಮ್ ದಾಳಿಯನ್ನು ಕನ್ನಡ ಹಾಡಿನೊಂದಿಗೆ ಜೋಡಿಸಿ ಹೇಳಿಕೆ
- ಕನ್ನಡ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾದ ಗಾಯಕ (Sonu Nigam controversy)
Bengaluru: ಗಾಯಕ ಸೋನು ನಿಗಮ್ (Sonu Nigam) ತಮ್ಮ ಇಂಪಾದ ಕಂಠದಿಂದ ಕನ್ನಡಿಗರ ಮನ ಗೆದ್ದಿದ್ದರು.ಆದರೆ ಇದೀಗ ಅವರು ಕನ್ನಡಕ್ಕೆ ಅವಮಾನ (Shame on Kannada) ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ ಎಂಬರ್ಥ ಬರೋ ರೀತಿಯಲ್ಲಿ ಸೋನು ನಿಗಮ್ (Sonu Nigam) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೋನು ನಿಗಮ್ ಬಗ್ಗೆ ಈಗ ಅನೇಕರು ಅಪಸ್ವರ ತೆಗೆದಿದ್ದಾರೆ. ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಅಭಿಮಾನಿಗಳು (Kannada fans) ಗರಂ ಆಗಿದ್ದಾರೆ. ಸೋನು ನಿಗಮ್ನ ಕನ್ನಡದಿಂದ ಬ್ಯಾನ್ (Banned from Kannada) ಮಾಡಲು ಒತ್ತಾಯ ಕೇಳಿ ಬಂದಿದೆ.
ಬೆಂಗಳೂರಿನ ಕಾಲೇಜು (Bangalore College) ಒಂದರ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು (Kannada song) ಹೇಳುವಂತೆ ಕೇಳಿದರು. ಅದು ಸಾಮಾನ್ಯ ಕೂಡ. ಸೋನು ಎಲ್ಲೇ ಹೋದರೂ ಕನ್ನಡ ಹಾಡು ಹೇಳುವ ಬಗ್ಗೆ ಒತ್ತಾಯ ಬರುತ್ತದೆ.
ಆದರೆ, ಸೋನು ಇಲ್ಲಿ ತಾಳ್ಮೆ ಕಳೆದುಕೊಂಡಿದ್ದಾರೆ. ತಮ್ಮ ಹಾಡನ್ನು ಅರ್ಧಕ್ಕೆ(Song in half) ನಿಲ್ಲಿಸಿದ ಅವರು,ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕೊನೆಯಲ್ಲಿ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ (different languages) ಹಾಡಿದ್ದೇನೆ.
ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ (With love, respect) ಬರುತ್ತೇನೆ. ಪ್ರತಿ ಬಾರಿ ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಕನ್ನಡ ಹಾಡನ್ನು (Kannada song) ಹಾಡಿರುತ್ತೇನೆ ಎಂದ ಸೋನು ನಿಗಮ್ ಹೇಳಿದ್ದಾರೆ.

ಹಾಗಾಗಿ ಇದೀಗ ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ (Kannada pride into terrorism) ಹೋಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕರವೇ ಸೇರಿದಂತೆ ಹಲವರು ಸೋನು ನಿಗಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಕನ್ನಡ ಚಿತ್ರರಂಗದಿಂದ (Kannada cinema) ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.ಇದಕ್ಕೆ ಧ್ವನಿಗೂಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ (K State President T.A. Narayana Gowda) ಅವರು, ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಗಾಯಕ ಸೋನು ನಿಗಮ್ ಇದಕ್ಕೇನೇ, ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು ಎಂದು ಹೇಳಿದ್ದಾರೆ.
ಕರ್ನಾಟಕ ಪೊಲೀಸರು ಈ ಕೂಡಲೇ ಸೋನು ನಿಗಮ್ ಮೇಲೆ ಸ್ವಯಂ (Self on Sonu Nigam) ಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.ನಿರ್ಮಾಪಕ ಕೆಆರ್ಜಿ ಕಾರ್ತಿಕ್ ಗೌಡ (KRG Karthik Gowda) ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಭಯೋತ್ಪಾದಕ ಕೃತ್ಯವನ್ನು ಕನ್ನಡ ಹಾಡನ್ನು ಹಾಡಬೇಕೆಂಬ ವಿನಂತಿಗೆ ತಳುಕು ಹಾಕುವುದು ಮೂರ್ಖತನವಲ್ಲದೆ ಬೇರೇನೂ ಅಲ್ಲ.
ಇದನ್ನು ಓದಿ : http://ಪಹಲ್ಗಾಮ್ ಉಗ್ರರ ದಾಳಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಸಂಪುಟ ಸಮಿತಿಗಳ ಸಭೆ
ಅವರ ಹಿಂದಿನ ಎಲ್ಲಾ ಕಾರ್ಯಕ್ರಮಗಳಲ್ಲಿ, ಕನ್ನಡ ಹಾಡುಗಳನ್ನು ಹಾಡಿದ್ದಕ್ಕಾಗಿ ಕನ್ನಡಿಗರು ಇತರರಿಗಿಂತ ಹೆಚ್ಚಿನ ಪ್ರೀತಿ ತೋರಿಸಿತ್ತಾರೆ (Sonu Nigam controversy) . ಈಗ ಈ ಮೂರ್ಖ ಹೇಳಿಕೆಯನ್ನು ಅವರು ತಮಾಷೆಯಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರು ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು (Apologize to the Kannadigas) ಎಂದು ಟ್ವೀಟ್ ಮಾಡಿದ್ದಾರೆ