• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿದೇಶಿ ಸಾಲ ಮರುಪಾವತಿ ಸಾಧ್ಯವಿಲ್ಲ : ಶ್ರೀಲಂಕಾ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
srilanka crisis
0
SHARES
0
VIEWS
Share on FacebookShare on Twitter

ಶ್ರೀಲಂಕಾ(Srilanka) ಆರ್ಥಿಕ ಸ್ಥಿತಿ(Finanacial Crisis) ಮತ್ತಷ್ಟು ಬಿಗಡಾಯಿಸಿದೆ. ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ರಾಜಕೀಯ ಅರಾಜಕತೆಯ ಪರಿಣಾಮ ಆರ್ಥಿಕ ಸ್ಥಿತಿ ಮತ್ತಷ್ಟು ದುರ್ಬಲಗೊಂಡಿದ್ದು, ವಿದೇಶಿ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದು ಶ್ರೀಲಂಕಾ ಘೋಷಿಸಿದೆ. ಶ್ರೀಲಂಕಾದ ವಿದೇಶಿ ವಿನಿಮಯವು ಇಂಧನ, ಆಹಾರ, ಔಷಧಿಗಳನ್ನು ಖರೀದಿಸಲು ಸಾಧ್ಯವಿಲ್ಲದಷ್ಟು ಕನಿಷ್ಠ ಮಟ್ಟಕ್ಕೆ ಕುಸಿದಿದೆ.

srilanka crisis

ಇನ್ನು ಶ್ರೀಲಂಕಾ ಸದ್ಯ 3.87ಲಕ್ಷ ಕೋಟಿ ರೂಪಾಯಿಗಳ ವಿದೇಶಿ ಸಾಲವನ್ನು ಪಡೆದಿದೆ. ಒಟ್ಟು ಸಾಲದಲ್ಲಿ ಶೇಕಡಾ10% ರಷ್ಟು ಸಾಲವನ್ನು ಚೀನಾದಿಂದ ಪಡೆದಿದೆ. ಇನ್ನುಳಿದಂತೆ ಜಪಾನ್ ಮತ್ತು ಭಾರತ ಶ್ರೀಲಂಕಾಕ್ಕೆ ಹೆಚ್ಚಿನ ಸಾಲ ನೀಡಿವೆ. 5100 ಕೋಟಿ ಡಾಲರ್ ಮೊತ್ತದ ವಿದೇಶಿ ಸಾಲವನ್ನು ಮರುಪಾವತಿ ಮಾಡುವ ಸಾಮರ್ಥ್ಯವನ್ನು ನಾವು ಕಳೆದುಕೊಂಡಿದ್ದೇವೆ ಎಂದು ಶ್ರೀಲಂಕಾದ ಕೇಂದ್ರೀಯ ಬ್ಯಾಂಕಿನ ಗವರ್ನರ್ ಸ್ಪಷ್ಟಪಡಿಸಿದ್ದಾರೆ.

https://vijayatimes.com/sanjay-dutt-speaks

ನಾವು ವಿದೇಶಿ ಸಾಲವನ್ನು ತೀರಿಸಲು ನಮ್ಮ ವಿದೇಶಿ ವಿನಿಮಯ ನಿಧಿಯನ್ನು ಕೂಡಾ ಬಳಸಿದ್ದೇವೆ. ಆದರು ಸಾಲವನ್ನು ತೀರಿಸಲು ನಮಗೆ ಸಾಧ್ಯವಾಗಿಲ್ಲ. ನಮ್ಮ ಕೆಟ್ಟ ಆರ್ಥಿಕ ಸ್ಥಿತಿಯಲ್ಲಿ ಯಾವುದೇ ವಿದೇಶಿ ಸಾಲವನ್ನು ತೀರಿಸಲು ನಮಗೆ ಸಾಧ್ಯವಿಲ್ಲ ಎಂದು ಶ್ರೀಲಂಕಾ ಸ್ಪಷ್ಟವಾಗಿ ಹೇಳಿದೆ. ಇನ್ನು ಸಾಲ ತೀರಿಸಲು ಸಾಧ್ಯವಾಗದಿದ್ದರೂ ನಿಮಗೆ ಬೇಕಾದ ನೆರವನ್ನು ನೀಡಲು ನಾವು ಈಗಲೂ ಸಿದ್ದರಿದ್ದೇವೆ ಎಂದು ಚೀನಾ ಹೇಳಿದೆ. ಇನ್ನು ಶ್ರೀಲಂಕಾಗೆ ಕಡಿಮೆ ಬಡ್ಡಿ ದರದಲ್ಲಿ ಮತ್ತಷ್ಟು ಸಾಲ ನೀಡಲು ಭಾರತ ಮತ್ತು ಚೀನಾ ಮುಂದಾಗಿವೆ. ಆದರೆ ಸಾಲ ಮರುಪಾವತಿ ಮಾಡಲು ಬೇರೆ ವಿಧಾನಗಳನ್ನು ನೀಡಲು ಶ್ರೀಲಂಕಾ ಮನವಿ ಮಾಡಿತ್ತು,

https://vijayatimes.com/eshwarappa-contractor-sucide

ಶ್ರೀಲಂಕಾ ಪ್ರಸ್ತಾಪವನ್ನು ಒಪ್ಪದ ಭಾರತ, ಕಡಿಮೆ ದರದಲ್ಲಿ ಇನ್ನಷ್ಟು ಸಾಲ ನೀಡಲು ಮುಂದಾಗಿದೆ. ಒಟ್ಟಾರೆಯಾಗಿ ಶ್ರೀಲಂಕಾ ಆರ್ಥಿಕವಾಗಿ ದಿವಾಳಿಯಾಗಿದೆ. ವಿದೇಶದಿಂದ ಏನನ್ನೂ ಖರೀದಿ ಮಾಡುವ ಸಾಮರ್ಥ್ಯ ಶ್ರೀಲಂಕಾಗೆ ಉಳಿದಿಲ್ಲ. ಹೀಗಾಗಿ ದ್ವೀಪರಾಷ್ಟ್ರದಲ್ಲಿ ಆಹಾರ, ಔಷಧ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆಯೂ ತೀವ್ರ ಮಟ್ಟದಲ್ಲಿ ಹೆಚ್ಚಳವಾಗಿದೆ. ಈ ನಡುವೆ ಭಾರತ ಇಂಧನ, ಔಷಧಿ ಸೇರಿದಂತೆ ಅಗತ್ಯ ವಸ್ತುಗಳನ್ನು ಶ್ರೀಲಂಕಾಕ್ಕೆ ನೆರವಿನ ರೂಪದಲ್ಲಿ ನೀಡಿದೆ.

Tags: crisisfinancialIndiasrilanka

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.