SSLC ಪರೀಕ್ಷೆಗೆ ಸಜ್ಜು: ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ (SSLC exam begins tomorrow) ನಿಯಮಗಳು ಜಾರಿ
ಸಿಸಿಟಿವಿ, ವೆಬ್ಕಾಸ್ಟಿಂಗ್ ಮೂಲಕ ಪರೀಕ್ಷೆಯ ಕಟ್ಟುನಿಟ್ಟಿನ ಮೇಲ್ವಿಚಾರಣೆ
ವದಂತಿಗಳಿಗೆ ಕಿವಿಗೊಡಬೇಡಿ, ಶಾಂತಚಿತ್ತದಿಂದ ಪರೀಕ್ಷೆ ಬರೆಯಿರಿ ಎಂದು ಶಿಕ್ಷಣ ಇಲಾಖೆ ಮನವಿ
Bengaluru: ರಾಜ್ಯದಾದ್ಯಂತ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ನಾಳೆಯಿಂದ, ಅಂದರೆ ಮಾರ್ಚ್ 18ರಿಂದ (SSLC exam begins tomorrow) ಆರಂಭವಾಗಲಿದ್ದು, ಈ ಬಾರಿ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.
ಒಟ್ಟು 2871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆ ಎಲ್ಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಈ ವರ್ಷ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 8,12,855 ಮಂದಿ ಪ್ರಥಮ ಬಾರಿಗೆ ಪರೀಕ್ಷೆ ಬರೆಯುತ್ತಿದ್ದಾರೆ.

ಉಳಿದಂತೆ 62,845 ಪುನಃಪರೀಕ್ಷಾರ್ಥಿಗಳು ಹಾಗೂ 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಸರ್ಕಾರ ವಿಶೇಷ ಗಮನ ಹರಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅವ್ಯವಹಾರಗಳನ್ನು ತಡೆಯುವ ಉದ್ದೇಶದಿಂದ (SSLC exam begins tomorrow) ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದೆ.
ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯವಾಗಿದ್ದು, ವೆಬ್ಕಾಸ್ಟಿಂಗ್ (Webcasting) ಮೂಲಕ ಪರೀಕ್ಷೆಗಳ
ಮೇಲ್ವಿಚಾರಣೆ ನಡೆಯಲಿದೆ. ಯಾವುದೇ ರೀತಿಯ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣ ಗುರುತಿಸಲು ಅಧಿಕಾರಿಗಳು ವಿಶೇಷ ತಂಡಗಳನ್ನು ನಿಯೋಜಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಭದ್ರತಾ ವಲಯವನ್ನು ನಿರ್ಮಿಸಲಾಗಿದ್ದು, ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಇದರ ಜೊತೆಗೆ, ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಹಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ (Electronic) ಸಾಧನಗಳನ್ನು ತರಲು ಅವಕಾಶವಿಲ್ಲ. ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ರೀತಿಯ ಚಿತ್ರೀಕರಣಕ್ಕೂ ನಿಷೇಧ ವಿಧಿಸಲಾಗಿದೆ.
ಅಲ್ಲದೆ, ನಿಷೇಧಿತ ವಲಯದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಅಥವಾ ಅಪಾಯಕಾರಿ ಸಾಧನಗಳನ್ನು ಹೊಂದಿರುವುದು ಕಾನೂನುಬಾಹಿರವಾಗಿದೆ. ಮಾಹಿತಿ ಸೋರಿಕೆ ಅಥವಾ ರವಾನೆಗೆ ಅವಕಾಶ ನೀಡದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಕೆಲವು ಪ್ರಮುಖ ಸಲಹೆಗಳನ್ನು ನೀಡಿದೆ.
ಈಗಾಗಲೇ ಬರೆದಿರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಬ್ಲೂಪ್ರಿಂಟ್ (Blueprint) ಹಾಗೂ ಮಾದರಿ ಪ್ರಶ್ನೆಪತ್ರಿಕೆಗಳ ಮೇಲೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳು ಅಥವಾ ತಪ್ಪು ಮಾಹಿತಿಗಳನ್ನು ನಂಬಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಪರೀಕ್ಷೆ ಬರೆಯುವಾಗ ಶಾಂತಚಿತ್ತದಿಂದ ಇರಿ, ಪ್ರತಿ ಪ್ರಶ್ನೆಯನ್ನು ಗಮನದಿಂದ ಓದಿ, ಅರ್ಥ ಮಾಡಿಕೊಂಡು ಉತ್ತರಿಸಲು ಇಲಾಖೆ ಸಲಹೆ ನೀಡಿದೆ.
ಸರಿಯಾದ ಸಿದ್ಧತೆಯೊಂದಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಗಳಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ.
ಇನ್ನು ಪರೀಕ್ಷೆಯ ಹಿನ್ನೆಲೆ ರಾಜ್ಯ ರಾಜಕೀಯ ನಾಯಕರಿಂದ ವಿದ್ಯಾರ್ಥಿಗಳಿಗೆ ಶುಭಾಶಯಗಳ ಸುರಿಮಳೆ ಹರಿದು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕರು ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ (All the best) ತಿಳಿಸಿದ್ದಾರೆ.
ಈ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮಹತ್ವದ ಹಂತವಾಗಿದ್ದು, ಯಾವುದೇ ಒತ್ತಡಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಎಲ್ಲರೂ ಪ್ರೋತ್ಸಾಹ ನೀಡಿದ್ದಾರೆ.
ಇದನ್ನು ಓದಿ : https://vijayatimes.com/upi-credit-cards-trend-in-youngsters/