ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್‌ ಗಾಂಧಿ ಅವರಿಗೆ ಕರ್ನಾಟಕಕ್ಕೆ ಆತ್ಮೀಯ ಸ್ವಾಗತ : ಬಿಜೆಪಿ

bjp

Karnataka : ಜಾಮೀನಿನ ಆಧಾರದಲ್ಲಿ ಜೈಲಿನಿಂದ ಹೊರಗಿದ್ದುಕೊಂಡು ಭಾರತ್ ಜೋಡೋ ಯಾತ್ರೆ(Bharat Jodo Yatra) ಮಾಡುತ್ತಿರುವ ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್‌ ಗಾಂಧಿ(Rahul Gandhi) ಅವರಿಗೆ ಕರ್ನಾಟಕಕ್ಕೆ(Karnataka) ಆತ್ಮೀಯ ಸ್ವಾಗತ ಎಂದು ಬಿಜೆಪಿ(BJP) ಲೇವಡಿ ಮಾಡಿದೆ(State BJP welcomes rahul gandhi).

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ “ಭಾರತ್‌ ಜೋಡೋ” ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ, ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ರಾಜ್ಯ ಬಿಜೆಪಿ(State BJP), 2020 ಅವಧಿಯಲ್ಲಿ ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧ ಮತ್ತು ಅತ್ಯಾಚಾರದ ಅಡಿಯಲ್ಲಿ ನೋಂದಾಯಿಸಲಾದ ಪ್ರಕರಣಗಳ ವರದಿ – ರಾಜಸ್ಥಾನ – 119, ಕರ್ನಾಟಕ – 29.

ಇದನ್ನೂ ಓದಿ : https://vijayatimes.com/rss-mohan-bhagawat-statement/

ಮಾನ್ಯ ರಾಹುಲ್‌ ಗಾಂಧಿ ಅವರೇ, ಪರಿಶಿಷ್ಟ ಪಂಗಡ ಸಮುದಾಯದವರು ಸುರಕ್ಷಿತವಾಗಿರುವ ಕರುನಾಡಿಗೆ ಸ್ವಾಗತ.

ಮಾನ್ಯ ರಾಹುಲ್‌ ಗಾಂಧಿ ಅವರೇ, ತಮಿಳುನಾಡು – 422.1, ಕೇರಳ – 401.4, ರಾಜಸ್ಥಾನ – 269.6, ಕರ್ನಾಟಕ – 172.8. ದಲಿತರಿಗೆ ಸುರಕ್ಷಿತವಾಗಿರುವ ಕರ್ನಾಟಕಕ್ಕೆ ಸ್ವಾಗತ(State BJP welcomes rahul gandhi).

ಕಾಂಗ್ರೆಸ್ ಆಡಳಿತದ ರಾಜಸ್ತಾನದಲ್ಲಿ ದಲಿತರಿಗೆ ರಕ್ಷಣೆ ನೀಡಿ.

ಅಪರಾಧ ಪ್ರಮಾಣ ಕಡಿಮೆ ಇರುವ ಕರ್ನಾಟಕಕ್ಕೆ ಸ್ವಾಗತ. ನಿಮ್ಮ ಶಾಂತಿಯ ಮಂತ್ರ ಕರುನಾಡಿಗೆ ಅಗತ್ಯವಿಲ್ಲ.

ರಾಹುಲ್ ಗಾಂಧಿ ಮಾಡುತ್ತಿರುವುದು ಭಾರತ ಜೋಡೋ ಯಾತ್ರೆಯಲ್ಲ, ಎಐಸಿಸಿ ಮುಂದಿನ ಅಧ್ಯಕ್ಷ ಸ್ಥಾನವನ್ನು ನಕಲಿ ಗಾಂಧಿಗಳ ಕುಟುಂಬದಲ್ಲೇ ಇರಿಸಿಕೊಳ್ಳಲು ಮತ್ತು ನಿಯಂತ್ರಿಸಲು ನಡೆಸುತ್ತಿರುವ ಕಸರತ್ತು.

https://youtu.be/0e5lo4c54OE ಹೇರೂರು ಗ್ರಾಮ ಕೃಷಿಯೋಗ್ಯ ಜಾಗದಲ್ಲಿ ಹಸಿ ಕಸ ತ್ಯಾಜ್ಯ ವಿಲೇವಾರಿ ಘಟಕ !

ಭಯೋತ್ಪಾದಕರ ಬಗ್ಗೆ ಮೃದು ಧೊರಣೆ ಹೊಂದಿ, ದೇಶ ವಿಭಜಕರ ಜೊತೆ ಸಂಬಂಧ ಹೊಂದಿರುವ ರಾಹುಲ್ ಗಾಂಧಿ ಅವರಿಗೆ ಸ್ವಾಗತ.

ಇಂದು ರಾಜ್ಯದಲ್ಲಿ ರಾಹುಕಾಲ ಆರಂಭದ ಸಮಯ ಬೆಳಿಗ್ಗೆ 10.30. ಆದುದರಿಂದ ದಿನನಿತ್ಯದ ನೆಮ್ಮದಿ ಮತ್ತು ಶಾಂತಿಗಾಗಿ ರಾಹು ಸಂಬಂಧಿತವಾದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಜನಹಿತಕ್ಕಾಗಿ ಜಾರಿ ಎಂದು ವ್ಯಂಗ್ಯವಾಡಿದೆ.

Exit mobile version