• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೃಷಿಗೆ 33,700 ಕೋಟಿ ಮೀಸಲು ; ಈ ಬಾರಿಯ ಬಜೆಟ್ ಕೃಷಿಕರಿಗೆ ಲಾಭದಾಯಕವಾ?

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
budget
0
SHARES
0
VIEWS
Share on FacebookShare on Twitter

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಇಂದು ತಮ್ಮ ಚೊಚ್ಚಲ ಬಜೆಟ್(First Budget) ಮಂಡಿಸಿದರು. ಇದರಲ್ಲಿ ಪ್ರಮುಖವಾಗಿ, ಬಹುಮುಖ್ಯವಾಗಿ ಕೃಷಿ(Agriculture) ಮತ್ತು ಪೂರ ಚಟುವಟಿಕೆಗಳಿಗೆ ಎಂದು ಬಜೆಟ್ ನಲ್ಲಿ ಒಟ್ಟಾರೆ 33,700 ಕೋಟಿ ರೂಪಾಯಿಗಳನ್ನು ಮೀಸಲಿಟ್ಟರು. ಬಜೆಟ್ ಮಂಡಿಸುವ ಮುನ್ನ ಕೃಷಿಗೆ ಈ ಬಾರಿ ಹೆಚ್ಚು ಆದ್ಯತೆ ನೀಡುವ ಕುರಿತು ಸಿಎಂ ತಿಳಿಸಿದ್ದರು. ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಅನುಗುಣವಾಗಿ ರೈತರ ಆದಾಯವು ಹೆಚ್ಚಳವಾಗಬೇಕು ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ನಮ್ಮ ಸರ್ಕಾರ ನಿರ್ದಿಷ್ಟ ಕ್ರಮಗಳನ್ನು ಕೈಗೊಂಡಿದೆ ಕೃಷಿ ಕ್ಷೇತ್ರದ ಸುಧಾರಣೆಗಾಗಿ ಹಾಗೂ ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀರಾವರಿ ಸೌಲಭ್ಯ ರಿಯಾಯಿತಿ ದರದಲ್ಲಿ ಬೀಜ ಗೊಬ್ಬರ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಪಿಎಂ ಕಿಸಾನ್ ಸಹಾಯಧನ ಹೀಗೆ ಹಲವಾರು ಸೌಲಭ್ಯಗಳನ್ನು ವಿವಿಧ ಯೋಜನೆಗಳಡಿ ಒದಗಿಸಲಾಗುತ್ತಿದೆ.

karnataka

ಈ ಎಲ್ಲಾ ಕ್ರಮಗಳು ಆತ್ಮ ನಿರ್ಧಾರ ಭಾರತ ಕಟ್ಟುವ ಆಶಯಕ್ಕೆ ಪೂರಕವಾಗಿದೆ. ರಾಜ್ಯದಲ್ಲಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಕೃಷಿ ಯಾಂತ್ರಿಕರಣ ನ ಪಾತ್ರ ಬಹುಮುಖ್ಯವಾಗಿದೆ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಪ್ರತಿ ಎಕರೆಗೆ ಇನ್ನೂರೈವತ್ತು₹ಗಳಂತೆ ಗರಿಷ್ಠ 5ಎಕರೆಗೆ ಡಿಬಿಟಿ ಮೂಲಕ ಡೀಸೆಲ್ ಗೆ ಸಹಾಯ ಧನವನ್ನು ನೀಡಲು ರೈತಶಕ್ತಿ ಎಂಬ ಹೊಸ ಯೋಜನೆಗೆ ಐನೂರು ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿನ ಐವತ್ತು ಲಕ್ಷಕ್ಕೂ ಹೆಚ್ಚಿನ ರೈತರಿಗೆ 2021-22ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 1,978 ಕೋಟಿ ರುಪಾಯಿಗಳ ಅನುದಾನವನ್ನು ನೇರ ನಗದು ವರ್ಗಾಯಿಸಲಾಗಿದೆ.

farmers

ಈ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರೆಸಲಾಗುವುದು. ರೈತರ ಆದಾಯವನ್ನು ಹೆಚ್ಚಿಸುವ ಧ್ಯೇಯದೊಂದಿಗೆ ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ಸೆಕೆಂಡರಿ ಕೃಷಿ ನಿರ್ದೇಶನಾಲಯ ವನ್ನು ಸ್ಥಾಪಿಸಲಾಗಿದೆ ರೈತ ಉತ್ಪಾದಕರ ಸಂಸ್ಥೆಗಳನ್ನು ಬಳಸಿ ಕೃಷಿ ಪ್ರಾಥಮಿಕ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಈ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶ ಸೃಷ್ಟಿಸಲು ಇದು ಸಹಕಾರಿಯಾಗಲಿದೆ. ಕೆಪೆಕ್ ಮುಖಾಂತರ ರೈತ ಉತ್ಪಾದಕರ ಸಂಸ್ಥೆಗಳಿಗೆ ಸಾಮಾನ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಿ ಕೊಯ್ಲಿನೋತ್ತರ ನಿರ್ವಹಣೆಯನ್ನು ಕೈಗೊಂಡು ಅವುಗಳ ಉತ್ಪನ್ನಗಳನ್ನು ಮಾರಾಟ ಮತ್ತು ರಫ್ತು ಮಾಡಲು ಐವತ್ತು ಕೋಟಿ ರುಪಾಯಿಗಳ ಯೋಜನೆ ರೂಪಿಸಲಾಗುವುದು.

farmers

ರಾಜ್ಯದಲ್ಲಿ ತೋಟಗಾರಿಕೆ ಬೆಳೆಗಳ ವಿಸ್ತೀರ್ಣವು 26.32 ಲಕ್ಷ ಹೆಕ್ಟೇರುಗಳಾಗಿದ್ದು, ದೇಶದಲ್ಲಿಯೇ ಮೊದಲನೇ ಸ್ಥಾನವನ್ನು ಹೊಂದಿದೆ. 2021-22ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ 1.38 ಲಕ್ಷ ಫಲಾನುಭವಿಗಳಿಗೆ 240 ಕೋಟಿ ರೂಪಾಯಿ ಸಹಾಯಧನವನ್ನು ನೀಡಿದ್ದು, ತೋಟಗಾರಿಕೆ ಸಾಗುವಳಿ ಕ್ಷೇತ್ರವನ್ನು ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸಲಾಗಿದೆ. ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸಲು 1,255 ಹೆಕ್ಟೇರ್ ಪ್ರದೇಶದಲ್ಲಿ ಸಂರಕ್ಷಿತ ಬೇಸಾಯ ಪದ್ದತಿಯನ್ನು ಪ್ರೋತ್ಸಾಹಿಸಲಾಗಿದೆ ಹಾಗೂ ರೈತರಿಗೆ ಯೋಗ್ಯದರದಲ್ಲಿ 48 ಲಕ್ಷ ಸಸಿ-ಕಸಿಗಳನ್ನು ವಿತರಿಸಲಾಗಿದೆ ಎಂಬುದನ್ನು ತಿಳಿಸಿದರು.

Tags: Basavaraj BommaibudgetchiefministerKarnatakastate

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.