• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಗೆಲುವಿನ ಕಾಂತಾರ ; 60 ವರ್ಷ ಮೇಲ್ಪಟ್ಟ ದೈವನರ್ತಕರಿಗೆ 2000 ರೂ. ಮಾಸಾಶನ ಘೋಷಿಸಿದ ಸರ್ಕಾರ

Mohan Shetty by Mohan Shetty
in ರಾಜ್ಯ
ಗೆಲುವಿನ ಕಾಂತಾರ ; 60 ವರ್ಷ ಮೇಲ್ಪಟ್ಟ ದೈವನರ್ತಕರಿಗೆ 2000 ರೂ. ಮಾಸಾಶನ ಘೋಷಿಸಿದ ಸರ್ಕಾರ
0
SHARES
0
VIEWS
Share on FacebookShare on Twitter

Bengaluru : ನಮ್ಮ ಹೆಮ್ಮೆಯ ಕಾಂತಾರ (State Govt Responds to Kantara) ಸಿನಿಮಾ ಕರ್ನಾಟಕ ಗಡಿಯನ್ನು ದಾಟಿ ಹೊರ ರಾಜ್ಯ, ಹೊರದೇಶಗಳಲ್ಲಿಯೂ ಸದ್ದು ಮಾಡುತ್ತಿದೆ.

State Govt

ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿಯಾದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ನಡುವೆ ಕರಾವಳಿ ಭಾಗದಲ್ಲಿ ದೈವ ನರ್ತಕರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಈ ಶುಭ ಸಮಯದಲ್ಲಿ ಒಂದು ಶುಭ ಸುದ್ದಿ ನೀಡಿದೆ.

ಕಾಂತಾರ ಸಿನಿಮಾವನ್ನು ನೋಡಿದ ಅನೇಕರು, ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಒಳ್ಳೆಯ ಯೋಜನೆಗಳನ್ನು ತರಬೇಕು, ಅವರಿಗಾಗಿ ಮಾಸಾಶನ ನೀಡಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇದೀಗ, ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ಸರ್ಕಾರ ತೀರ್ಮಾನಿಸಿದೆ.

https://fb.watch/ghX4znH5C1/ ಹೊಸ ಪಿಂಚಣಿ ಯೋಜನೆ ಬದಲು ಹಳೆ ಪಿಂಚಣಿ ಪದ್ಧತಿಗೆ ಒತ್ತಾಯ!

ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟಿರುವ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಈ ಕುರಿತು ಟ್ವೀಟ್ (State Govt Responds to Kantara) ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, “ಕರ್ನಾಟಕವು ಸಂಸ್ಕೃತಿ, ಆಚರಣೆಗಳ ನೆಲೆಬೀಡು.

ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಭೂತಾರಾಧನೆಯು ಸಹ ಒಂದು. ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,

Kantara

60 ವರ್ಷಕ್ಕೂ ಮೇಲ್ಪಟ್ಟ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ” ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

ಈ ಯೋಜನೆಯ ಲಾಭವನ್ನು ಪಡೆಯಲು, ದೈವಾರಾಧನೆ ಮತ್ತು ಭೂತಾರಾಧನೆಯ ನರ್ತನದಲ್ಲಿ ತೊಡಗಿರುವ ಬಂಧುಗಳು ಅಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು ಸೌಲಭ್ಯ ಪಡೆದುಕೊಳ್ಳಬಹುದು ಎಂದರು.

ಇದನ್ನೂ ಓದಿ : https://vijayatimes.com/ashgabat-worlds-richest-city/


ಇದೇ ಸಂದರ್ಭದಲ್ಲಿ, ನಟ ಚೇತನ್ ಅಹಿಂಸ ಹೇಳಿಕೆಗೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್ “ಸಂಸ್ಕೃತಿ‌ ಇಲ್ಲದವರು ಸಂಸ್ಕೃತಿಯ ಬಗ್ಗೆ ಮಾತಾಡಬಾರದು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ.

ಯಾರೋ ಒಬ್ಬ ವ್ಯಕ್ತಿ ಏನೇನೋ ಹೇಳಿದ ಮಾತ್ರಕ್ಕೆ, ನಮ್ಮ ನೆಲದ ಸಂಸ್ಕೃತಿಯಿಂದ ಯಾರೂ ದೂರವಾಗಲು ಸಾಧ್ಯವಿಲ್ಲ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಗಟ್ಟಿಯಾದ ಭಾಗವಾಗಿದೆ” ಎಂದು ಸಚಿವರು ಹೇಳಿದರು.
  • ಪವಿತ್ರ
Tags: KantaraKarnatakaState Govt

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.