• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22 ರಂದು ರಾಜ್ಯವ್ಯಾಪಿ ಮುಷ್ಕರಕ್ಕೆ KCC&I ಕರೆ..!

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ, ರಾಜ್ಯ
ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22 ರಂದು ರಾಜ್ಯವ್ಯಾಪಿ ಮುಷ್ಕರಕ್ಕೆ KCC&I ಕರೆ..!
0
SHARES
122
VIEWS
Share on FacebookShare on Twitter

Bengaluru : ಗಣನೀಯ ಪ್ರಮಾಣದಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿರುವ ರಾಜ್ಯ ಕಾಂಗ್ರೆಸ್ (strike on Electricity rate) ಸರ್ಕಾರದ ಕ್ರಮವನ್ನು ಖಂಡಿಸಿ, ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ

strike on Electricity rate

ಜೂನ್ 22ರಂದು ರಾಜ್ಯವ್ಯಾಪಿ ಮುಷ್ಕಕ್ಕೆ ಕರೆ ನೀಡಿದೆ. ಜೂನ್ 22ರಂದು ನಡೆಯಲಿರುವ ರಾಜ್ಯವ್ಯಾಪಿ ಮುಷ್ಕರದಲ್ಲಿ ಭಾಗವಹಿಸುವಂತೆ ಸಂಘದ ಎಲ್ಲಾ ಸದಸ್ಯರಿಗೆ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್

(Chamber of Commerce) & ಇಂಡಸ್ಟ್ರ ಪತ್ರ ಬರೆದಿದ್ದು, ಜೂನ್ 22 ರಂದು ತಮ್ಮ ವ್ಯಾಪಾರವನ್ನು ಮುಚ್ಚುವಂತೆ ನಾವು ಎಲ್ಲಾ ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ವಿನಂತಿಸುತ್ತೇವೆ.

ಎಸ್ಕಾಂನ ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ನಾವು ಈ ಕ್ರಮಕ್ಕೆ ಮುಂದಾಗಿದ್ದೇವೆ. ಕಳೆದ 8 ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮದ ಗಂಭೀರತೆಯನ್ನು

ರಾಜ್ಯ ಸರ್ಕಾರಕ್ಕೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆದರೆ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಪರಿಹಾರ ದೊರೆಯುತ್ತಿಲ್ಲ.

ಇದನ್ನು ಓದಿ: ಪೋಕ್ಸೊ ಕಾಯ್ದೆಯಡಿ ಪ್ರಧಾನಿ ಮೋದಿ ಕೂಡಾ ಶಿಕ್ಷಾರ್ಹ : ನಟ ಕಿಶೋರ್ ಗಂಭೀರ ಆರೋಪ

ಹೀಗಾಗಿ ಸರ್ಕಾರದ ಗಮನ ಸೆಳೆಯಲು ನಾವು ಈ ಬಂದ್ಗೆ ಕರೆ ನೀಡಿದ್ದೇವೆ. ನಾವು ಪರಿಹಾರವನ್ನು ಕಂಡುಕೊಳ್ಳಲು ಮತ್ತು ವಿದ್ಯುತ್ ಶುಲ್ಕದಲ್ಲಿ ಕಡಿತವನ್ನು ಪಡೆಯಲು ಬಯಸುತ್ತೇವೆ.

ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಪತ್ರದಲ್ಲಿ (strike on Electricity rate) ಬರೆಯಲಾಗಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್ಸಿ) ಮೇ 12 ರಂದು ರಾಜ್ಯದಲ್ಲಿ ಪ್ರತಿ ಯೂನಿಟ್ (Unit) ವಿದ್ಯುತ್ ದರವನ್ನು 70 ಪೈಸೆ ಹೆಚ್ಚಿಸಿತ್ತು. ಇನ್ನೊಂದೆಡೆ ಇಂಧನ ಮತ್ತು ವಿದ್ಯುತ್ ಖರೀದಿ

ವೆಚ್ಚ ಹೊಂದಾಣಿಕೆ ಶುಲ್ಕ’ (ಎಫ್ಪಿಪಿಸಿಎ) ನೆಪದಲ್ಲಿ ಪ್ರತಿ ಯೂನಿಟ್ಗೆ 51 ಪೈಸೆಯ ಮತ್ತೊಂದು ಹೆಚ್ಚಳವನ್ನು ಘೋಷಿಸಿತು. ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ರಚನೆಯಾದ

ನಂತರ ವಿದ್ಯುತ್ ದರವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಮಾಡಿದೆ.

strike on Electricity rate

ನಾವು ವಿದ್ಯುತ್ ದರವನ್ನು ಹೆಚ್ಚಿಸಲು ನಿರ್ಧರಿಸಿಲ್ಲ. ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಾಧಿಕಾರವಿದೆ, ಅದು ನಿರ್ಧರಿಸಿದೆ. ನಾವು ಅದನ್ನು ಜಾರಿಗೆ ತಂದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದರು.

ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಾಧಿಕಾರ ರಾಜ್ಯ ಸರ್ಕಾರದ ಅಡಿಯಲ್ಲೇ ಬರುವ ಸಂಸ್ಥೆಯಾಗಿದ್ದು, ಮುಖುಮಂತ್ರಿ ಸಿದ್ದರಾಮಯ್ಯ (Siddaramaiah) ವಿದ್ಯುತ್ ದರ ಏರಿಕೆಯನ್ನು ತಡೆ ಹಿಡಿಯುವ ಅಧಿಕಾರ

ಹೊಂದಿರುತ್ತಾರೆ. ನೂತನ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಅನೇಕ ಯೋಜನೆ ಮತ್ತು ಕಾಯ್ದೆಗಳನ್ನು ಹಿಂಪಡೆಯುತ್ತಿದೆ.

ಆದರೆ ವಿದ್ಯುತ್ ದರ ಏರಿಕೆ ಹಿಂಪಡೆಯಲು ಸಾಧ್ಯವಿಲ್ಲವೇ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ.

Tags: bengaluruCongressgovernrmentguarantee

Related News

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು
ದೇಶ-ವಿದೇಶ

Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು

October 2, 2023
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ
ಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.