ಮೋದಿ ಸೋತರೆ ಮಾತ್ರ ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯ: ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy Slams Modi) ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಮಂತ್ರಿ

ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು (Subramanian Swamy Slams Modi) ಸಾಧ್ಯ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತಪ್ಪುಗಳನ್ನು ಕಟುವಾಗಿಯೇ ಟೀಕಿಸುವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿಗರಿಗೆ (BJP) ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.

ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮೋಡಿಯಿಂದ ಅಲ್ಲ ಎಂದು ಟೀಕಿಸಿದ್ದ

ಬಿಜೆಪಿಯ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರಜ್ಞಾ ಸಿಂಗ್ ಠಾಕೂರ್‌ (Prajna Singh Thakur) ಅವರಿಗೆ ಬಿಜೆಪಿ ಟಿಕೆಟ್‌ ನೀಡದೆ ಆರೆಸ್ಸೆಸ್ ಅನ್ನು ‘ಹಿಂದೂ ಭಯೋತ್ಪಾದನೆ’ ಎಂದು ಆರೋಪಿಸಿದ ಕೃಪಾ ಶಂಕರ್ ಅವರನ್ನು

ಬಿಜೆಪಿ ಕಣಕ್ಕಿಳಿಸಿದೆ ಎಂದು ಎಕ್ಸ್ ಬಳಕೆದಾರರೊಬ್ಬರು ಮಾಡಿರುವ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಸ್ವಾಮಿ, ಮೋದಿಯನ್ನು ಸೋಲಿಸಿದರೆ ಮಾತ್ರ ಹಿಂದೂ ರಾಷ್ಟ್ರ ಮಾಡಲು ಸಾಧ್ಯ

ಎಂದು ಪ್ರತಿಪಾದಿಸಿದ್ದಾರೆ.

ಹೆಚ್ಚಿತ್ತಿರುವ ʼಹಿಂದೂ ಹೆಮ್ಮೆʼ ಭಾವನೆಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಭವಿಷ್ಯವು ಮತ್ತಷ್ಟು ಉಜ್ವಲವಾಗುವ ಸಾಧ್ಯತೆ ಇದ್ದು, ಇದರ ಹಿಂದೆ ಮೋದಿಯ

(Modi) ಯಾವುದೇ ಮ್ಯಾಜಿಕ್ ಇಲ್ಲ” ಎಂದೂ ಅವರು ಇತ್ತೀಚೆಗೆ ಹೇಳಿದ್ದರು.

2024ರಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಮತ್ತು ಅದೇ ಸಮಯದಲ್ಲಿ ಮೋದಿಯನ್ನು ವಾರಣಾಸಿಯಲ್ಲಿ (Varanasi) ಸೋಲಿಸಿದರೆ ಮಾತ್ರ ನಾವು ಹಿಂದೂ ರಾಷ್ಟ್ರವನ್ನು ಮಾಡಲು

ಸಾಧ್ಯವಾಗುತ್ತದೆ” ಎಂದು ಸುಬ್ರಮಣಿಯನ್‌ ಸ್ವಾಮಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿ: ಮೋದಿ ಸೋತರೆ ಮಾತ್ರ ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯ: ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

Exit mobile version