• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆಕಾಶ್–ಎನ್‌ಜಿ ಕ್ಷಿಪಣಿ ಯಶಸ್ವಿ ಪರೀಕ್ಷೆ: ಭಾರತೀಯ ಸೇನೆಗೆ ಮತ್ತಷ್ಟು ಬಲ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಆಕಾಶ್–ಎನ್‌ಜಿ ಕ್ಷಿಪಣಿ ಯಶಸ್ವಿ ಪರೀಕ್ಷೆ: ಭಾರತೀಯ ಸೇನೆಗೆ ಮತ್ತಷ್ಟು ಬಲ
0
SHARES
10
VIEWS
Share on FacebookShare on Twitter
  • ರಕ್ಷಣಾ ಕ್ಷೇತ್ರದಲ್ಲಿ (Successful test of Akash NG missile) ಐತಿಹಾಸಿಕ ಸಾಧನೆ
  • ಸ್ವದೇಶಿ ರಾಡಾರ್, RF ಸೀಕರ್ ಮತ್ತು ಡ್ಯುಯಲ್ ಪಲ್ಸ್ ಮೋಟಾರ್ ಹೊಂದಿದ ಕ್ಷಿಪಣಿ ಎಲ್ಲಾ ಕಾರ್ಯಕ್ಷಮತಾ ಮಾನದಂಡಗಳನ್ನು ಪೂರೈಸಿದೆ
  • ಯಶಸ್ವಿ ಪರೀಕ್ಷೆಗೆ DRDO ಮತ್ತು IAF ತಂಡವನ್ನು ಅಭಿನಂದಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

New delhi: ಭಾರತ ತನ್ನ ರಕ್ಷಣಾ ತಂತ್ರಜ್ಞಾನದಲ್ಲಿ ಮತ್ತೊಂದು ಮಹತ್ವದ (Successful test of Akash NG missile) ಮೈಲುಗಲ್ಲು ಸಾಧಿಸಿದೆ.

ಮುಂದಿನ ತಲೆಮಾರಿನ ಅತ್ಯಾಧುನಿಕ ‘ಆಕಾಶ್–ಎನ್‌ಜಿ’ (Akash-NG) ಕ್ಷಿಪಣಿ ವ್ಯವಸ್ಥೆಯ ಪರೀಕ್ಷಾರ್ಥ ಹಾರಾಟವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಈ ಪರೀಕ್ಷೆಯೊಂದಿಗೆ ಭಾರತೀಯ ಸಶಸ್ತ್ರ ಪಡೆಗಳ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಭಾರೀ ಬಲ ಸೇರ್ಪಡೆಗೊಂಡಿದೆ. ವಿಶೇಷವಾಗಿ ಕಡಿಮೆ ಎತ್ತರದಲ್ಲಿ, ಗಡಿ ಪ್ರದೇಶದ ಸಮೀಪ ಹಾಗೂ ದೀರ್ಘ ಶ್ರೇಣಿಯಲ್ಲಿ ಬರುವ ಶತ್ರು ವೈಮಾನಿಕ ಬೆದರಿಕೆಗಳನ್ನು ನಿಖರವಾಗಿ ನಾಶಪಡಿಸುವ ಸಾಮರ್ಥ್ಯವನ್ನು ಈ ಕ್ಷಿಪಣಿ ಸಾಬೀತುಪಡಿಸಿದೆ.

Successful test of Akash NG missile

ಪರೀಕ್ಷಾರ್ಥ ಹಾರಾಟದ ವೇಳೆ ಆಕಾಶ್–ಎನ್‌ಜಿ ಕ್ಷಿಪಣಿಗಳು (Successful test of Akash NG missile) ವಿವಿಧ ಎತ್ತರ ಮತ್ತು ದೂರದಲ್ಲಿದ್ದ ವೈಮಾನಿಕ ಗುರಿಗಳನ್ನು ಯಶಸ್ವಿಯಾಗಿ ತಡೆದು ಹೊಡೆದುರುಳಿಸಿವೆ.

ಹೆಚ್ಚಿನ ವೇಗದಲ್ಲಿ ಸಂಚರಿಸುವ ಗುರಿಗಳನ್ನು ಅತ್ಯಂತ ನಿಖರತೆಯಿಂದ ಹೊಡೆದಿರುವುದಾಗಿ DRDO ತಿಳಿಸಿದೆ.

ಈ ಪರೀಕ್ಷೆಗಳಲ್ಲಿ ಕ್ಷಿಪಣಿ ವ್ಯವಸ್ಥೆ ತನ್ನ ಎಲ್ಲಾ ಕಾರ್ಯಕ್ಷಮತಾ ಮಾನದಂಡಗಳನ್ನು (PSQR) ಪೂರೈಸಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ಈ ಮಹತ್ವದ ಪ್ರಯೋಗಗಳಿಗೆ DRDO ಹಿರಿಯ ವಿಜ್ಞಾನಿಗಳು, ಭಾರತೀಯ ವಾಯುಪಡೆ (IAF) ಅಧಿಕಾರಿಗಳು ಮತ್ತು ರಕ್ಷಣಾ ಉದ್ಯಮದ ಪ್ರತಿನಿಧಿಗಳು ಸಾಕ್ಷಿಯಾಗಿದ್ದರು.

ಇನ್ನು ಆಕಾಶ್–ಎನ್‌ಜಿ ಕ್ಷಿಪಣಿಯ ಪ್ರಮುಖ ವಿಶೇಷತೆ ಎಂದರೆ ಇದು ಸಂಪೂರ್ಣವಾಗಿ ದೇಶೀಯ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಲ್ಪಟ್ಟಿರುವುದು.

ಇದರಲ್ಲಿ ಸ್ವದೇಶಿ ರೇಡಿಯೊ ಫ್ರೀಕ್ವೆನ್ಸಿ (RF) ಸೀಕರ್, ಡ್ಯುಯಲ್ ಪಲ್ಸ್ ಸಾಲಿಡ್ ರಾಕೆಟ್ ಮೋಟಾರ್, ಅತ್ಯಾಧುನಿಕ ಸ್ವದೇಶಿ ರಾಡಾರ್ ಮತ್ತು ಕಮಾಂಡ್ ಹಾಗೂ ಕಂಟ್ರೋಲ್ (C2) ವ್ಯವಸ್ಥೆಗಳನ್ನು ಅಳವಡಿಸಲಾಗಿದೆ.

ಈ ತಂತ್ರಜ್ಞಾನಗಳ ಸಮನ್ವಯದಿಂದ ಕ್ಷಿಪಣಿಯ ನಿಖರತೆ, ವೇಗ ಮತ್ತು ಗುರಿ ಹಿಡಿಯುವ ಸಾಮರ್ಥ್ಯವು ಗಮನಾರ್ಹವಾಗಿ ಹೆಚ್ಚಾಗಿದೆ.

ವಿವಿಧ ಶ್ರೇಣಿಯ ಡ್ರೋನ್‌ಗಳು, ಯುದ್ಧವಿಮಾನಗಳು ಹಾಗೂ ಕ್ರೂಸ್ ಕ್ಷಿಪಣಿಗಳಂತಹ ವೈಮಾನಿಕ ಬೆದರಿಕೆಗಳನ್ನು ಎದುರಿಸಲು ಈ ವ್ಯವಸ್ಥೆ ಅತ್ಯಂತ ಪರಿಣಾಮಕಾರಿಯಾಗಿದೆ.

DRDO ಹಂಚಿಕೊಂಡಿರುವ ಅಧಿಕೃತ ಮಾಹಿತಿಯಂತೆ, ಆಕಾಶ್–ಎನ್‌ಜಿ ಕ್ಷಿಪಣಿ ವ್ಯವಸ್ಥೆ ಭವಿಷ್ಯದ ಯುದ್ಧ ಪರಿಸ್ಥಿತಿಗಳಿಗೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ.

ಕಡಿಮೆ ಪ್ರತಿಕ್ರಿಯಾ ಸಮಯ, ಹೆಚ್ಚಿನ ಚುರುಕು ಮತ್ತು ಸುಧಾರಿತ ಟ್ರ್ಯಾಕಿಂಗ್ (Tracking) ಸಾಮರ್ಥ್ಯವು ಈ ಕ್ಷಿಪಣಿಯನ್ನು ಇತರ ವಾಯು ರಕ್ಷಣಾ ವ್ಯವಸ್ಥೆಗಳಿಗಿಂತ ವಿಭಿನ್ನವಾಗಿಸುತ್ತದೆ.

ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ವಾಯು ರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ಈ ವ್ಯವಸ್ಥೆ ಅತ್ಯಂತ ಉಪಯುಕ್ತವಾಗಲಿದೆ.

ಭಾರತೀಯ ವಾಯುಪಡೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವಲ್ಲಿ ಆಕಾಶ್–ಎನ್‌ಜಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಈ ಯಶಸ್ವಿ ಪರೀಕ್ಷೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು DRDO, ಭಾರತೀಯ ವಾಯುಪಡೆ ಮತ್ತು ರಕ್ಷಣಾ ಉದ್ಯಮದ ತಂಡವನ್ನು ಅಭಿನಂದಿಸಿದ್ದಾರೆ.

‘ಆಕಾಶ್–ಎನ್‌ಜಿ’ ವ್ಯವಸ್ಥೆಯು ಭಾರತವನ್ನು ಆತ್ಮನಿರ್ಭರ ರಕ್ಷಣಾ ತಂತ್ರಜ್ಞಾನದಲ್ಲಿ ಮತ್ತಷ್ಟು ಮುನ್ನಡೆಸುತ್ತದೆ ಎಂದು ಅವರು ಹೇಳಿದ್ದಾರೆ. “ಈ ಸಾಧನೆ ಭಾರತೀಯ ವಾಯುಪಡೆಯ ವಾಯು ರಕ್ಷಣಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ” ಎಂದು ಸಚಿವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಈ ಕ್ಷಿಪಣಿ ವ್ಯವಸ್ಥೆಯನ್ನು ಸಶಸ್ತ್ರ ಪಡೆಗಳಲ್ಲಿ ಅಳವಡಿಸುವ ಮೂಲಕ ದೇಶದ ಭದ್ರತೆ ಇನ್ನಷ್ಟು ಬಲಿಷ್ಠವಾಗಲಿದೆ ಎಂಬ ವಿಶ್ವಾಸವನ್ನು ರಕ್ಷಣಾ ತಜ್ಞರು ವ್ಯಕ್ತಪಡಿಸಿದ್ದಾರೆ.

Tags: indianarmylaunchingsuccessfulTesting

Related News

ಪ್ರಪಂಚದಲ್ಲಿ ಸೆಕೆಂಡ್‌, ದೇಶದಲ್ಲಿ ಮೊದಲು: ಅತೀ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಎಂದು ಕುಖ್ಯಾತಿಗೆ ಪಾತ್ರವಾದ ಬೆಂಗಳೂರು
ಪ್ರಮುಖ ಸುದ್ದಿ

ಪ್ರಪಂಚದಲ್ಲಿ ಸೆಕೆಂಡ್‌, ದೇಶದಲ್ಲಿ ಮೊದಲು: ಅತೀ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಎಂದು ಕುಖ್ಯಾತಿಗೆ ಪಾತ್ರವಾದ ಬೆಂಗಳೂರು

January 22, 2026
ಗಣರಾಜೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈಅಲರ್ಟ್‌ : ಅಪರಾಧಿಗಳ ಸುಳಿವು ಪತ್ತೆಗಾಗಿ ಪೊಲೀಸರಿಗೆ ಫೇಶಿಯಲ್ ರೆಕಗ್ನಿಷನ್, AI ಸ್ಮಾರ್ಟ್ ಕನ್ನಡಕ, ಆಂಟಿ-ಡ್ರೋನ್ ಯೂನಿಟ್‌
ದೇಶ-ವಿದೇಶ

ಗಣರಾಜೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈಅಲರ್ಟ್‌ : ಅಪರಾಧಿಗಳ ಸುಳಿವು ಪತ್ತೆಗಾಗಿ ಪೊಲೀಸರಿಗೆ ಫೇಶಿಯಲ್ ರೆಕಗ್ನಿಷನ್, AI ಸ್ಮಾರ್ಟ್ ಕನ್ನಡಕ, ಆಂಟಿ-ಡ್ರೋನ್ ಯೂನಿಟ್‌

January 22, 2026
SBIನಲ್ಲಿ ಉಚಿತ ಸೇವೆ ಬಂದ್: ಫೆಬ್ರವರಿ 15 ರಿಂದ ಹಣ ವರ್ಗಾವಣೆಗೆ ಶುಲ್ಕ ಮತ್ತು ಜಿಎಸ್‌ಟಿ ಅನ್ವಯ
ಪ್ರಮುಖ ಸುದ್ದಿ

SBIನಲ್ಲಿ ಉಚಿತ ಸೇವೆ ಬಂದ್: ಫೆಬ್ರವರಿ 15 ರಿಂದ ಹಣ ವರ್ಗಾವಣೆಗೆ ಶುಲ್ಕ ಮತ್ತು ಜಿಎಸ್‌ಟಿ ಅನ್ವಯ

January 22, 2026
ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಯು – ಟರ್ನ್ ಹೊಡೆದ ಟ್ರಂಪ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ಹೇರಿಕೆ ಹಿಂಪಡೆಯಲು ನಿರ್ಧಾರ
ದೇಶ-ವಿದೇಶ

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಯು – ಟರ್ನ್ ಹೊಡೆದ ಟ್ರಂಪ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ಹೇರಿಕೆ ಹಿಂಪಡೆಯಲು ನಿರ್ಧಾರ

January 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.