ಬೆಂಗಳೂರು, ನ. 24: ಕೆಎಎಸ್ ಅಧಿಕಾರಿ ಡಾ. ಸುಧಾ ಅಕ್ರಮ ಆಸ್ತಿ ವಿಚಾರಕ್ಕೆ ಸಂಬಂಧ ಆಪ್ತರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಧಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ಒಟ್ಟಾರೆಯಾಗಿ ೬ ಕಡೆ ಎಸಿಬಿ ದಾಳಿ ನಡೆಸಿದೆ. ಸುಧಾ ತಮ್ಮ ಆಪ್ತರ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಕೋಟಿ ಕೋಟಿ ಹಣ, ಆಸ್ತಿ ಪತ್ರ ಏಜೆಂಟ್ಗಳ ಮನೆಯಲ್ಲಿ ಲಭ್ಯವಾಗಿದೆ.
ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಸುಧಾ ಅವರ ಆಸ್ತಿ ಸಂಬಂಧ ೨೦೦ಕ್ಕೂ ಹೆಚ್ಚು ದಾಖಲೆಗಳು, ೩ ಕೆಜಿಗೂ ಅಧಿಕ ಚಿನ್ನಾಭರಣ, ಬೆಳ್ಳಿ ವಸ್ತು ಸಿಕ್ಕಿದ್ದವು.
ಡಾ. ಸುಧಾ ಅವರು ಬಿಡಿಎ ಅಧಿಕಾರಿಯಾಗಿದ್ದ ವೇಳೆ ಭ್ರಷ್ಟಾಚಾರದಲ್ಲಿ ಭಾಗಿಯಾದ ಸಂಬಂಧ ಎಸಿಬಿಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಕಳೆದ ನ.7. ರಂದು ಸುಧಾ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಹಲವು ಮಹತ್ವ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.