ಬೆಂಗಳೂರು, ಜು. 05: ಕೆಆರ್ಎಸ್ ಸೋರುತ್ತಿದ್ದರೆ ನೀರು ಸೋರದಂತೆ ಅದಕ್ಕೆ ಅಡ್ಡಲಾಗಿ ಸುಮಲತಾ ಅವರನ್ನೇ ಮಲಗಿಸಬೇಕು ಎಂದು ಸಂಸದೆ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣೆಕಟ್ಟು ಬಿರುಕುಬಿಟ್ಟಿದೆ ಎಂದು ಸುಮಲತಾ ಅವರು ಹೇಳಿದ್ದಾರೆ. ಕೆಆರ್ಎಸ್ ಅನ್ನು ಇವರೇ ರಕ್ಷಿಸುತ್ತಿದ್ದಾರೆ ಎನ್ನುವ ರೀತಿ ಹೇಳಿದ್ದಾರೆ. ಕೆಆರ್ಎಸ್ ಸೋರುತ್ತಿದ್ದರೆ ನೀರು ಸೋರದಂತೆ ಸುಮಲತಾರನ್ನು ಮಲಗಿಸಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಮಂಡ್ಯದಲ್ಲಿ ಇಂತಹ ಸಂಸದರು ಬಂದಿಲ್ಲ, ಬರೋದಿಲ್ಲ. ಯಾವುದೋ ಅನುಕಂಪದಲ್ಲಿ ಆಯ್ಕೆಯಾಗಿದ್ದಾರೆ. ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲಿ. ಸಂಸದರಾಗಿ ಮಂಡ್ಯ ಕ್ಷೇತ್ರದ ಜನರ ಸೇವೆ ಮಾಡಲಿ ಎಂದಿದ್ದಾರೆ.
ಈಚೆಗೆ ಯಾವುದೋ ಸಭೆಯಲ್ಲಿ ಕೆಆರ್ಎಸ್ ಅನ್ನು ಇವರೇ ರಕ್ಷಣೆ ಮಾಡುತ್ತಿರುವ ಹಾಗೆ ಹೇಳಿಕೆ ಕೊಟ್ಟಿದ್ದಾರೆ. ಕೆಆರ್ಎಸ್ ಬಾಗಿಲಿಗೆ ನೀರು ಹೋಗದಂತೆ ಅವರನ್ನೇ ಮಲಗಿಸಿಬಿಟ್ಟರೆ ಬಿಗಿಯಾಗುತ್ತದೆ. ಸಂಸದರು ಕೆಲಸ ಯಾವ ರೀತಿ ಮಾಡಬೇಕು ಅಂತ ಮಾಹಿತಿ ಪಡೆಯಲ್ಲ. ಕಾಟಾಚಾರಕ್ಕೆ ಯಾರ ಮೇಲಿನ ದ್ವೇಷಕ್ಕೋ ಹೇಳಿಕೆ ಕೊಡೋದು ಸರಿಯಲ್ಲ. ಇದು ಬಹಳ ದಿನ ನಡೆಯಲ್ಲ ಗರಂ ಆಗಿದ್ದಾರೆ.