ರಜನಿಕಾಂತ್ ಆಸ್ಪತ್ರೆಯಿಂದ ಬಿಡುಗಡೆ

ಚೆನ್ನೈ ನ 1 : ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇದೇ ಅಕ್ಟೋಬರ್‌ 28ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಎದೆಯ ಭಾಗದಲ್ಲಿ ನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು, ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಆಸ್ಪತ್ರೆಗೆ  ತರೆಳಿ ಆರೋಗ್ಯ ವಿಚಾರಿಸಿದ್ದ ಸಿಎಂ :

ಸೂಪರ್‌ಸ್ಟಾರ್ ರಜನಿಕಾಂತ್ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಇಂದು ಆಸ್ಪತ್ರೆಗೆ ಭೇಟಿ ನೀಡಿ, ರಜನಿ ಆರೋಗ್ಯ ವಿಚಾರಿಸಿದ್ದಾರೆ.

ಮೆದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ರಜನಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಅಕ್ಟೋಬರ್ 28ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಸ್ತು ಹಾಗೂ ಎದೆಯ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು ಎಂದು ವರದಿಗಳು ತಿಳಿಸಿವೆ.

Exit mobile version