• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೆಲಸಕ್ಕೆ ಹೋಗುವ ವೇಳೆ ಸಾವನ್ನಪ್ಪಿದರೆ ಮಾಲೀಕನೇ ಪರಿಹಾರ ನೀಡಬೇಕು.

Preetham Kumar P by Preetham Kumar P
in ದೇಶ-ವಿದೇಶ, ಪ್ರಮುಖ ಸುದ್ದಿ
ಕೆಲಸಕ್ಕೆ ಹೋಗುವ ವೇಳೆ ಸಾವನ್ನಪ್ಪಿದರೆ ಮಾಲೀಕನೇ ಪರಿಹಾರ ನೀಡಬೇಕು.
1
SHARES
0
VIEWS
Share on FacebookShare on Twitter

ಬೆಂಗಳೂರು ನ 23 : ಕಾರ್ಮಿಕ ಕೆಲಸಕ್ಕೆ ತೆರಳುವ ವೇಳೆ ಸಾವನ್ನಪ್ಪಿದರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದೇ ಪರಿಗಣಿಸಿ, ಆತನ ವಾರಸುದಾರರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾರ್ಮಿಕ ಮೃತಪಟ್ಟಿದ್ದ ಪ್ರಕರಣದಲ್ಲಿ ಆತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಚಿಕ್ಕಮಗಳೂರಿನ ಕಾರ್ಮಿಕ ಆಯುಕ್ತರು ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ಕಾಫಿ ಎಸ್ಟೇಟ್ ಮಾಲೀಕ ಎನ್.ಎಲ್ ಪುಣ್ಯಮೂರ್ತಿ ಹಾಗೂ ನ್ಯಾಷನಲ್ ಇನ್ಸೂರೆನ್ಸ್ ಕಂಪನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಅವರಿದ, ಪೀಠ, ಕಲಸಕ, ತರಳುವ ವೇಳೆ ಕಾರ್ಮಿಕ ಮೃತಪಟ್ಟರೂ ಆತನ ವಾರಸುದಾರರು ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಆದೇಶಿಸಿದೆ. ಆದ್ದರಿಂದ, ಮೃತನಿಗೆ ಪರಿಹಾರ ಪಾವತಿಸುವ ಹೊಣೆ ತನ್ನದಲ್ಲ ಎಂದು ತೋಟದ ಮಾಲೀಕ ವಾದಿಸಿದರು.

ಕೋರ್ಟ್ ತೀರ್ಪು: ಸ್ವಾಮಿಗೌಡ ಕೆಲಸದ ವೇಳೆ ಸಾವನ್ನಪ್ಪಿಲ್ಲ ಎಂದು ವಿಮಾ ಸಂಸ್ಥೆ ಮತ್ತು ತೋಟದ ಮಾಲೀಕ ಹೇಳುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಕಾರ್ಮಿಕ ಸ್ವಾಮಿಗೌಡ ಕೆಲಸಕ್ಕೆಂದೇ ಮನೆಯಿಂದ ಹೊರಟಿದ್ದಾನೆ. ಹೀಗಾಗಿ ಆತನ ಸಾವು ಕೆಲಸದ ಅವಧಿಯಲ್ಲಿ ಸಂಭವಿಸಿರುವುದಲ್ಲ ಎಂಬ ವಾದ ಒಪ್ಪಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ಮಂಜು ಸರ್ಕಾರ್ ಮತ್ತು ಮೊಬೀಷ್ ಮಿಯಾ ನಡುವಿನ ಪುಕರಣದಲ್ಲಿ ಕೆಲಸಕ್ಕೆ ಆಗಮಿಸುವ ಮತ್ತು ಕೆಲಸ ಮುಗಿಸಿ ಹಿಂದಿರುಗುವ ಸಮಯವೂ ಕೆಲಸದ ಅವಧಿಯಾಗಿರುತ್ತದೆ ಎಂದು ಹೇಳಿದೆ.

ಈ ಪ್ರಕರಣದಲ್ಲಿ ಬೆಳಗ್ಗೆ 8 ಗಂಟೆಯಿಂದ ಕೆಲಸದ ಸಮಯ ಆರಂಭವಾದರೂ, ಕೆಲಸಕ್ಕೆಂದೇ ಮನೆಯಿಂದ ಹೊರಟು ಬರುವ ವೇಳೆ 7.30ಕ್ಕೆ ಸಾವು ಸಂಭವಿಸಿದೆ. ಒಂದು ವೇಳೆ ಮನೆಯಲ್ಲೇ ಆತ ಮೃತಪಟ್ಟಿದರೆ ಮಾಲೀಕ ಹಾಗೂ ವಿಮಾ ಸಂಸ್ಥೆಯ ವಾದ ಒಪ್ಪಬಹುದಿತ್ತು. ಆದರೆ, ಕೆಲಸಕ್ಕೆಂದೇ ತರಳುತ್ತಿದ್ದಾಗ ಮಾಲೀಕನಿಗೆ ಸೇರಿದ ಜಾಗದಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟಿರುವುದರಿಂದ ಮಾಲೀಕರು ಹಾಗೂ ವಿಮಾ ಕಂಪನಿ ಪರಿಹಾರ ಪಾವತಿಸಬೇಕು. ಆ ಪ್ರಕಾರ ಕಾರ್ಮಿಕ ಆಯುಕ್ತರು ಹೊರಡಿಸಿರುವ ಆದೇಶ ನ್ಯಾಯಸಮ್ಮತವಾಗಿದ್ದು, ಮೃತನ ಕುಟುಂಬಕ್ಕೆ ವಿಮಾ ಸಂಸ್ಥೆ ಮತ್ತು ಎಸ್ಟೇಟ್ ಮಾಲೀಕ ಪರಿಹಾರ ಪಾವತಿಸಬೇಕು ಎಂದು ಆದೇಶಿಸಿದೆ.

ಪ್ರಕರಣದ ಹಿನ್ನಲೆ : 2006ರ ಜುಲೈ 12ರಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಸುಭಾಷನಗರ ನಿವಾಸಿ ಸ್ವಾಮಿಗೌಡ, ಕೊಳ್ಳಿಬೈಲು ಗ್ರಾಮದ ಪುಣ್ಯಮೂರ್ತಿ ಅವರ ಕಾಫಿ ತೋಟದ ಕೆಲಸಕ್ಕೆ ತರಳುತ್ತಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದರು. ಮೃತನ ಕುಟುಂಬ ಪರಿಹಾರ ಕೋರಿ ಕಾರ್ಮಿಕ ಆಯುಕ್ತರಿಗೆ ಅರ್ಜಿ ಸಲ್ಲಿಸಿತ್ತು. 2010ರ ಅಕ್ಟೋಬರ್ 28ರಂದು ಸ್ವಾಮಿಗೌಡ ಕುಟುಂಬಕ್ಕೆ ಕಾಫಿ ತೋಟದ ಮಾಲೀಕ 75,032 ರೂಪಾಯಿ ಹಾಗೂ ವಿಮಾ ಸಂಸ್ಥೆ 1,01,196 ರೂಪಾಯಿ ಸೇರಿ ಒಟ್ಟು 1,76,228 ರೂಪಾಯಿ ಪರಿಹಾರವನ್ನು ಶೇ.75 ಬಡ್ಡಿದರದೊಂದಿಗೆ ನೀಡುವಂತೆ ಆಯುಕ್ತರು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತೋಟದ ಮಾಲಿಕ ಹಾಗೂ ವಿಮಾ ಸಂಸ್ಥೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.