ಕೆಲಸಕ್ಕೆ ಹೋಗುವ ವೇಳೆ ಸಾವನ್ನಪ್ಪಿದರೆ ಮಾಲೀಕನೇ ಪರಿಹಾರ ನೀಡಬೇಕು.

ಬೆಂಗಳೂರು ನ 23 : ಕಾರ್ಮಿಕ ಕೆಲಸಕ್ಕೆ ತೆರಳುವ ವೇಳೆ ಸಾವನ್ನಪ್ಪಿದರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದೇ ಪರಿಗಣಿಸಿ, ಆತನ ವಾರಸುದಾರರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾರ್ಮಿಕ ಮೃತಪಟ್ಟಿದ್ದ ಪ್ರಕರಣದಲ್ಲಿ ಆತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಚಿಕ್ಕಮಗಳೂರಿನ ಕಾರ್ಮಿಕ ಆಯುಕ್ತರು ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ಕಾಫಿ ಎಸ್ಟೇಟ್ ಮಾಲೀಕ ಎನ್.ಎಲ್ ಪುಣ್ಯಮೂರ್ತಿ ಹಾಗೂ ನ್ಯಾಷನಲ್ ಇನ್ಸೂರೆನ್ಸ್ ಕಂಪನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಅವರಿದ, ಪೀಠ, ಕಲಸಕ, ತರಳುವ ವೇಳೆ ಕಾರ್ಮಿಕ ಮೃತಪಟ್ಟರೂ ಆತನ ವಾರಸುದಾರರು ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಆದೇಶಿಸಿದೆ. ಆದ್ದರಿಂದ, ಮೃತನಿಗೆ ಪರಿಹಾರ ಪಾವತಿಸುವ ಹೊಣೆ ತನ್ನದಲ್ಲ ಎಂದು ತೋಟದ ಮಾಲೀಕ ವಾದಿಸಿದರು.

ಕೋರ್ಟ್ ತೀರ್ಪು: ಸ್ವಾಮಿಗೌಡ ಕೆಲಸದ ವೇಳೆ ಸಾವನ್ನಪ್ಪಿಲ್ಲ ಎಂದು ವಿಮಾ ಸಂಸ್ಥೆ ಮತ್ತು ತೋಟದ ಮಾಲೀಕ ಹೇಳುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಕಾರ್ಮಿಕ ಸ್ವಾಮಿಗೌಡ ಕೆಲಸಕ್ಕೆಂದೇ ಮನೆಯಿಂದ ಹೊರಟಿದ್ದಾನೆ. ಹೀಗಾಗಿ ಆತನ ಸಾವು ಕೆಲಸದ ಅವಧಿಯಲ್ಲಿ ಸಂಭವಿಸಿರುವುದಲ್ಲ ಎಂಬ ವಾದ ಒಪ್ಪಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ಮಂಜು ಸರ್ಕಾರ್ ಮತ್ತು ಮೊಬೀಷ್ ಮಿಯಾ ನಡುವಿನ ಪುಕರಣದಲ್ಲಿ ಕೆಲಸಕ್ಕೆ ಆಗಮಿಸುವ ಮತ್ತು ಕೆಲಸ ಮುಗಿಸಿ ಹಿಂದಿರುಗುವ ಸಮಯವೂ ಕೆಲಸದ ಅವಧಿಯಾಗಿರುತ್ತದೆ ಎಂದು ಹೇಳಿದೆ.

ಈ ಪ್ರಕರಣದಲ್ಲಿ ಬೆಳಗ್ಗೆ 8 ಗಂಟೆಯಿಂದ ಕೆಲಸದ ಸಮಯ ಆರಂಭವಾದರೂ, ಕೆಲಸಕ್ಕೆಂದೇ ಮನೆಯಿಂದ ಹೊರಟು ಬರುವ ವೇಳೆ 7.30ಕ್ಕೆ ಸಾವು ಸಂಭವಿಸಿದೆ. ಒಂದು ವೇಳೆ ಮನೆಯಲ್ಲೇ ಆತ ಮೃತಪಟ್ಟಿದರೆ ಮಾಲೀಕ ಹಾಗೂ ವಿಮಾ ಸಂಸ್ಥೆಯ ವಾದ ಒಪ್ಪಬಹುದಿತ್ತು. ಆದರೆ, ಕೆಲಸಕ್ಕೆಂದೇ ತರಳುತ್ತಿದ್ದಾಗ ಮಾಲೀಕನಿಗೆ ಸೇರಿದ ಜಾಗದಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟಿರುವುದರಿಂದ ಮಾಲೀಕರು ಹಾಗೂ ವಿಮಾ ಕಂಪನಿ ಪರಿಹಾರ ಪಾವತಿಸಬೇಕು. ಆ ಪ್ರಕಾರ ಕಾರ್ಮಿಕ ಆಯುಕ್ತರು ಹೊರಡಿಸಿರುವ ಆದೇಶ ನ್ಯಾಯಸಮ್ಮತವಾಗಿದ್ದು, ಮೃತನ ಕುಟುಂಬಕ್ಕೆ ವಿಮಾ ಸಂಸ್ಥೆ ಮತ್ತು ಎಸ್ಟೇಟ್ ಮಾಲೀಕ ಪರಿಹಾರ ಪಾವತಿಸಬೇಕು ಎಂದು ಆದೇಶಿಸಿದೆ.

ಪ್ರಕರಣದ ಹಿನ್ನಲೆ : 2006ರ ಜುಲೈ 12ರಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಸುಭಾಷನಗರ ನಿವಾಸಿ ಸ್ವಾಮಿಗೌಡ, ಕೊಳ್ಳಿಬೈಲು ಗ್ರಾಮದ ಪುಣ್ಯಮೂರ್ತಿ ಅವರ ಕಾಫಿ ತೋಟದ ಕೆಲಸಕ್ಕೆ ತರಳುತ್ತಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದರು. ಮೃತನ ಕುಟುಂಬ ಪರಿಹಾರ ಕೋರಿ ಕಾರ್ಮಿಕ ಆಯುಕ್ತರಿಗೆ ಅರ್ಜಿ ಸಲ್ಲಿಸಿತ್ತು. 2010ರ ಅಕ್ಟೋಬರ್ 28ರಂದು ಸ್ವಾಮಿಗೌಡ ಕುಟುಂಬಕ್ಕೆ ಕಾಫಿ ತೋಟದ ಮಾಲೀಕ 75,032 ರೂಪಾಯಿ ಹಾಗೂ ವಿಮಾ ಸಂಸ್ಥೆ 1,01,196 ರೂಪಾಯಿ ಸೇರಿ ಒಟ್ಟು 1,76,228 ರೂಪಾಯಿ ಪರಿಹಾರವನ್ನು ಶೇ.75 ಬಡ್ಡಿದರದೊಂದಿಗೆ ನೀಡುವಂತೆ ಆಯುಕ್ತರು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತೋಟದ ಮಾಲಿಕ ಹಾಗೂ ವಿಮಾ ಸಂಸ್ಥೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Exit mobile version