• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

6 ಪತ್ರಕರ್ತರು ಸೇರಿ ಶಶಿ ತರೂರ್ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
6 ಪತ್ರಕರ್ತರು ಸೇರಿ ಶಶಿ ತರೂರ್ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 09: ಗಣರಾಜ್ಯೋತ್ಸವದ ದಿನ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರ ವಿಚಾರವಾಗಿ ಆರು ಪತ್ರಕರ್ತರು ಸೇರಿ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಟ್ವೀಟ್ ಮಾಡಿದ್ದರು. ಈ ವಿಚಾರವಾಗಿ ಅವರ ಮೇಲೆ ದೂರು ದಾಖಲಾಗಿತ್ತು. ಇದೀಗ ಅವರ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ ಮತ್ತು ಈ ಕುರಿತು ಎಲ್ಲಾ ಅರ್ಜಿಗಳ ಬಗ್ಗೆ ನೋಟಿಸ್ ನೀಡಿದೆ.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಅವರು, ಬಾರ್ ಆ್ಯಂಡ್ ಬೆಂಚ್ ಹೇಳಿಕೆ ಉಲ್ಲೇಖಿಸಿ, ನಾವು ಎರಡು ವಾರಗಳ ನಂತರ ಈ ವಿಚಾರವಾಗಿ ವಿಚಾರಣೆ ನಡೆಸುತ್ತೇವೆ. ಏತನ್ಮಧ್ಯೆ ಬಂಧನಕ್ಕೆ ತಡೆ ನೀಡಲಾಗಿದೆ ಎಂದು ಹೇಳಿದರು.

ಶಶಿ ತರೂರ್, ಪತ್ರಕರ್ತರಾದ ರಾಜ್ದೀಪ್ ಸರ್ದೆಸಾಯಿ, ಜಾಫರ್ ಆಘಾ, ಮೃನಾಲ್ ಪಾಂಡೆ, ವಿನೋದ್ ಕೆ. ಜೋಸ್, ಪರೇಶ್ ನಾಥ್, ಮತ್ತು ಅನಂತ್ ನಾಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಎಸ್.ಎ.ಬೋಬ್ಡೆ, ನ್ಯಾ.ಎ.ಎಸ್. ಬೋಪಣ್ಣ ಹಾಗೂ ನ್ಯಾ.ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಟ್ವೀಟ್ ವಿಚಾರವಾಗಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಅರ್ಜಿದಾರರು ಮನವಿ ಮಾಡಿದ್ದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಪ್ರಕರಣವನ್ನು ಬುಧವಾರ ವಿಚಾರಣೆ ನಡೆಸಬೇಕೆಂದು ಕೇಳಿಕೊಂಡರು. ಆದರೆ ಇದನ್ನು ನ್ಯಾಯಾಲಯ ನಿರಾಕರಿಸಿತು. “ಈ ಟ್ವೀಟ್ಗಳು ಲಕ್ಷಾಂತರ ಅನುಯಾಯಿಗಳಲ್ಲಿ ಎಂತಹ ಭಯಾನಕ ಪರಿಣಾಮವನ್ನು ಬೀರುತ್ತವೆ ಎಂಬುದನ್ನು ನಾನು ನಿಮಗೆ ತೋರಿಸಬಲ್ಲೆ” ಎಂದು ಮೆಹ್ತಾ ಉಲ್ಲೇಖಿಸಿದ್ದರು.

ಜೋಸ್ ಪರ ಹಾಜರಾದ ವಕೀಲ ಮುಕುಲ್ ರೋಹಟಗಿ ಅವರು ನ್ಯಾಯಾಲಯಕ್ಕೆ, “ನಾನು ಕಾರವಾನ್ ಮ್ಯಾಗಜೀನ್ನ ಸಂಪಾದಕನ ಪರವಾಗಿ ವಾದಿಸುತ್ತಿದ್ದೇನೆ. ಇವರು ಮಾಡಿರುವ ಟ್ವೀಟ್ನಿಂದ ಯಾವುದೇ ಧಾರ್ಮಿಕ ಭಾವನೆಗಳಿಗೆ ನೋವಾಗಿಲ್ಲ. ಜನವರಿ 26 ರಂದು ಯಾರೋ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿರುವ ವರದಿ ಮಾಡಲಾಗಿದೆ. ಮತ್ತು ಆ ಬಳಿಕ ನಾವು ಅದನ್ನು ಸರಿಪಡಿಸಿದ್ದೇವೆ.” ಎಂದು ಹೇಳಿದರು.

ಇವರು ಮಾಡಿರುವ ಟ್ವೀಟ್ ವಿಚಾರವಾಗಿ ಐದು ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿದೆ. ಜನರನ್ನು ತಪ್ಪು ದಾರಿಗೆ ಎಳೆಯುವಂತಹ ಪ್ರಚೋದನಾಕಾರಿ ಬರೆಹವನ್ನು ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಇವರು ವಿರುದ್ಧ ಅಪರಾಧ ಪಿತೂರಿ, ದೇಶದ್ರೋಹ ಹಾಗೂ ದ್ವೇಷ ಉತ್ತೇಜನ ಪ್ರಕರಣ ದಾಖಲಿಸಲಾಗಿದೆ.

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.