ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಬಿ.ಎಸ್.ವೈಗೆ ಸುಪ್ರೀಂ ಪ್ರಶ್ನೆ

ನವದೆಹಲಿ, ಜ. 27:  ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಆದಾಗ್ಯೂ, ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿತು.

2011 ರಲ್ಲಿ ಖಾಸಗಿ ಹೂಡಿಕೆದಾರರಿಗೆ 26 ಎಕರೆ ಮಂಜೂರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ದೂರನ್ನು ಕುರಿತ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಿರಾಣಿ ಸಲ್ಲಿಸಿದ್ದ ಮನವಿ ಪರಿಶೀಲನೆಗೆ ಸುಪ್ರೀಂ ಒಪ್ಪಿಗೆ ನೀಡಿದೆ.

ಯಡಿಯೂರಪ್ಪ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಮುಕುಲ್ ರೋಹಟಗಿ ಹೈಕೋರ್ಟ್ ಆದೇಶದ ಅನುಸಾರವಾಗಿ ಕ್ರಮ ಕೈಗೊಂಡರೆ, ಅವರು ಮುಖ್ಯಮಂತ್ರಿ ವಿರುದ್ಧ ವಾರಂಟ್ ಹೊರಡಿಸಬೇಕಾಗುತ್ತದೆ, ಅದಕ್ಕಾಗಿ ಬಂಧನದಿಂದ ರಕ್ಷಣೆ ಕೋರುವುದಾಗಿ ಹೇಳಿದ್ದಾರೆ.

ಈ ವೇಳೆ “ನೀವು ರಾಜ್ಯದ ಮುಖ್ಯಮಂತ್ರಿ ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸಬಹುದು. ಇದಲ್ಲದೆ, ಮುಖ್ಯಮಂತ್ರಿ ವಿರುದ್ಧ ಮನವಿ ಪತ್ರವನ್ನು ನೀಡುತ್ತಾರೆ ಮತ್ತು ವಾರಂಟ್ ಅಲ್ಲ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಹೇಳಿದ್ದಾರೆ.

ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿ ಹಿಂದಿನ ದೂರನ್ನು ರದ್ದುಪಡಿಸುವುದು “ತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸುವ ಮಾರ್ಗವಾಗಿ ಕಾರ್ಯನಿರ್ವಹಿಸುವುದಿಲ್ಲ” ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಇಂದು ಸಿಎಂ ಹಾಗೂ ನಿರಾಣಿ ಅರ್ಜಿಗಳ ಪರಿಶೀಲನೆಗೆ ಒಪ್ಪಿರುವ ಕೋರ್ಟ್ ಯಾವ ಕಾರಣದಿಂದಲೂ ಆರೋಪಿಗಳನ್ನು ಬಂಧಿಸಬಾರದೆಂದು ತನಿಖಾಧಿಕಾರಿಗಳಿಗೆ ಸೂಚಿಸಿದೆ.

Exit mobile version