ಬೆಂಗಳೂರು, ಜ. 23: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ವಿದ್ಯಾರ್ಥಿಗಳ ದೃಷ್ಟಿಯಿಂದ ಶೇ. 30 ಪಠ್ಯ ಕಡಿಮೆ ಮಾಡಲಾಗಿದೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದು ಹೇಳಿದರು.
ಯಾವ ರೀತಿ ಪರೀಕ್ಷೆ ನಡೆಸಬೇಕು ಎಂಬುದನ್ನು ಎಸ್ಎಸ್ಎಲ್ಸಿ ಮತ್ತು ಪಿಯು ಬೋರ್ಡ್ಗಳು ತೀರ್ಮಾನಿಸುತ್ತವೆ ಎಂದು ಮಾಹಿತಿ ನೀಡಿದರು.