ಸುಶಾಂತ್‌ ಕೊಲೆ: ಜಾಮೀನು ಅರ್ಜಿ ತಿರಸ್ಕೃತ

ಮುಂಬೈ: ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ)ಯಿಂದ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಆರು ಮಂದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಮುಂಬೈನ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.


ಶೋಯಿಕ್‌ ಚಕ್ರವರ್ತಿ, ಅಬ್ದುಲ್‌ ಬಸಿತ್‌, ಜಾಯಿದ್‌ ವಿಲತ್ರಾ, ದೀಪೇಶ್‌ ಶಾವಂತ್‌, ಸ್ಯಾಮುಯೆಲ್‌ ಮಿರಾಂಡಾ ಅವರು ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.


ಸುಶಾಂತ್ ಸಿಂಗ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಸುಶಾಂತ್ ಸಿಂಗ್ ತಂದೆ ಕೆ.ಕೆ.ಸಿಂಗ್ ಅವರು, ನಟಿ ರಿಯಾ ಮತ್ತು ಅವರ ಕುಟುಂಬದವರ ವಿರುದ್ಧ ಜುಲೈ 25ರಂದು ಪಟ್ನಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಪೊಲೀಸರು ರಿಯಾ, ಆಕೆಯ ಪೋಷಕರಾದ ಇಂದ್ರಜಿತ್, ಸಂಧ್ಯಾಚಕ್ರವರ್ತಿ, ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಸ್ಯಾಮುಯೆಲ್ ಮಿರಾಂಡಾ ಮತ್ತು ಶೃತಿ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

Exit mobile version