Delhi: ವಿವಾದಿತ ಹೇಳಿಕೆಗಳಿಂದ ಸುದ್ದಿಯಾಗುತ್ತಿರುವ ಸಮಾಜವಾದಿ ಪಕ್ಷದ ನಾಯಕ (Swami Prasad Maurya controversy) ಸ್ವಾಮಿ ಪ್ರಸಾದ್ ಮೌರ್ಯ (Swamy Prasad Mourya)
ಇದೀಗ ಹಿಂದೂ ಏಕ್ ಧೋಖಾ ಹೈ (ಹಿಂದೂ ಎಂಬುದು ಮೋಸ) ಎಂಬ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಮೌರ್ಯ ಅವರು ಹಿಂದೂ ಧರ್ಮವನ್ನು(Hinduism)
“ಮೋಸ” ಎಂದು ಕರೆದಿರುವುದಲ್ಲದೆ ಪ್ರಧಾನಿ ನರೇಂದ್ರ ಮೋದಿ, (Modi) ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಕೇಂದ್ರ ಸಚಿವ ನಿತಿನ್
ಗಡ್ಕರಿ ಅವರು ಇದೇ ಮಾತನ್ನು (Swami Prasad Maurya controversy) ಹೇಳಿದ್ದಾರೆ ಎಂದಿದ್ದಾರೆ.
1955 ರಲ್ಲಿ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಹಿಂದೂ ಧರ್ಮವಲ್ಲ ಆದರೆ ಜೀವನ ವಿಧಾನ ಎಂದು ಹೇಳಿದೆ. ಇದು 200 ಕ್ಕೂ ಹೆಚ್ಚು ಧರ್ಮಗಳ ಒಕ್ಕೂಟವಾಗಿದೆ. ಮೋಹನ್ ಭಾಗವತ್(Mohan
Bhagavath) ಕೂಡ ಒಂದಲ್ಲ ಎರಡೆರಡು ಬಾರಿ ಹಿಂದೂ ಎನ್ನುವುದು ಧರ್ಮವಲ್ಲ, ಜೀವನ ವಿಧಾನ ಎಂದು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ಹಿಂದೂ ಧರ್ಮವಲ್ಲ ಎಂದು ಹೇಳಿದ್ದಾರೆ.
ಗಡ್ಕರಿ ಕೂಡ ಇದೇ ಮಾತನ್ನು ಮಾಧ್ಯಮ ಸಂವಾದದಲ್ಲಿ ಹೇಳಿದ್ದರು ಎಂದು ಸೋಮವಾರ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಬೌದ್ಧ ಮತ್ತು ಬಹುಜನ ಹಕ್ಕುಗಳ ಸಮ್ಮೇಳನದಲ್ಲಿ ಮಾತನಾಡಿದ
ಮೌರ್ಯ ಹೇಳಿದ್ದಾರೆ.
ಆದರೆ ಅವರು ಇದನ್ನು ಹೇಳಿದಾಗ ಯಾರ ಭಾವನೆಗಳಿಗೂ ಧಕ್ಕೆಯಾಗುವುದಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಅವರು ಹಿಂದೂ ಧರ್ಮವಲ್ಲ, ಮೋಸ ಮತ್ತು ನಾವು ಹಿಂದೂ ಧರ್ಮ ಎಂದು
ಕರೆಯುವುದು ಕೆಲವು ಜನರಿಗೆ ವ್ಯಾಪಾರವಾಗಿದೆ ಎಂದು ಹೇಳಿದಾಗ ಇಡೀ ದೇಶದಲ್ಲಿ ಆಕ್ರೋಶ ಭುಗಿಲೇಳುತ್ತದೆ ಎಂದಿದ್ದಾರೆ. ಸುಪ್ರೀಂಕೋರ್ಟ್(Supreme court) 1955ರಲ್ಲಿ ಇದೇ ಮಾತನ್ನು
ಹೇಳಿದಾಗ ಯಾರೂ ಅಸಮಾಧಾನ ವ್ಯಕ್ತಪಡಿಸಲಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದಾಗ ದೇಶಾದ್ಯಂತ ಎಫ್ಐಆರ್ಗಳು ದಾಖಲಾಗಿವೆ. ಭಾರತೀಯ ಸಂವಿಧಾನವು (Indian
Constitution) ಹೇಳುತ್ತಿರುವಂತೆಯೇ ನಾನು ಹೇಳುತ್ತಿದ್ದೇನೆ ಎಂದಿದ್ದಾರೆ ಅವರು.
ಬ್ರಾಹ್ಮಣರು, ಕ್ಷತ್ರಿಯರು ಮತ್ತು ವೈಶ್ಯರು ಒಟ್ಟಾಗಿ ಜನಸಂಖ್ಯೆಯ ಶೇಕಡಾ ಎಂಟರಷ್ಟಿದ್ದಾರೆ. ಈ ಎಂಟು ಪ್ರತಿಶತವು ಸ್ವಂತವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲ. ಇವು ಹಿಂದುಳಿದ ವರ್ಗಗಳ ಶೋಷಣೆ
ಮಾಡಿ ಹಿಂದೂ ಹೆಸರಿನಲ್ಲಿ ಸರ್ಕಾರ ರಚಿಸಿವೆ. ಮತದ ಉದ್ದೇಶಕ್ಕಾಗಿ ನಾವು ಹಿಂದೂಗಳು. ಆದರೆ ಸರ್ಕಾರ (Government) ರಚಿಸಿದ ನಂತರ ನಾವು ಹಿಂದೂಗಳಲ್ಲ. ಹಾಗಿದ್ದಲ್ಲಿ ಅವರು ಎಂದಿಗೂ
ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಅಥವಾ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸುತ್ತಿರಲಿಲ್ಲ ಎಂದು ಮೌರ್ಯ ಹೇಳಿದರು.
ಅಧಿಕಾರದ ಉನ್ನತ ಸ್ತರದಲ್ಲಿ ಕುಳಿತವರು ಮೀಸಲಾತಿಯನ್ನು ದೂರ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು(Democracy) ದುರ್ಬಲಗೊಳಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಎಂಎಲ್ಸಿ
ಹೇಳಿದರು. ಸಂವಿಧಾನದ ಮೇಲೆ ಪ್ರಮಾಣ ಮಾಡುವವರು, ಪ್ರಧಾನಿ ಮತ್ತು ಮುಖ್ಯಮಂತ್ರಿಗಳು, ಅಧಿಕಾರದ ಚುಕ್ಕಾಣಿ ಹಿಡಿದವರು ಮನುವಾದಕ್ಕೆ ಆದ್ಯತೆ ನೀಡುತ್ತಿದ್ದಾರೆ.
ಸಂವಿಧಾನವನ್ನು ನಿಷ್ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ಮೀಸಲಾತಿಗಳನ್ನು ತೆಗೆದುಹಾಕಲಾಗುತ್ತಿದೆ. ಪ್ರಜಾಪ್ರಭುತ್ವವನ್ನೂ ದುರ್ಬಲಗೊಳಿಸಲಾಗುತ್ತಿದೆ. ಸುಮಾರು 150 ಸಂಸದರನ್ನು
ಸಂಸತ್ತಿನಿಂದ ಅನರ್ಹಗೊಳಿಸಲಾಯಿತು. ಇದು ಪ್ರಜಾಪ್ರಭುತ್ವದ ವಿರುದ್ಧದ ಷಡ್ಯಂತ್ರವಲ್ಲವೇ? ಸರ್ಕಾರ ತನ್ನ ಮಾತನ್ನು ತನ್ನ ಜನರ ಮೇಲೆ ಹೇರುತ್ತಿಲ್ಲವೇ? ಎಂದು ಮೌರ್ಯ ಪ್ರಶ್ನಿಸಿದ್ದಾರೆ.
- ಭವ್ಯಶ್ರೀ ಆರ್ ಜೆ