
ಆರ್ಎಸ್ಎಸ್ ಇಲ್ಲದಿದ್ದರೆ ಭಾರತ ಪಾಕಿಸ್ತಾನ ಆಗಿರುತ್ತಿತ್ತು – ಕೆ.ಎಸ್ ಈಶ್ವರಪ್ಪ
ಇಡೀ ಹಿಂದು ಸಮುದಾಯ ನರೇಂದ್ರ ಮೋದಿ ಅವರ ಜೊತೆಗಿದೆ. ದೇಶಭಕ್ತ ಮುಸ್ಲಿಮರು ಬಿಜೆಪಿ ಜೊತೆಗೆ ಬರುತ್ತಿದ್ದಾರೆ ಎಂಬುದನ್ನು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹಿಂದುಗಳ ಓಟಂತೂ ನಮಗೆ ಸಿಗುವುದಿಲ್ಲ ಮುಸ್ಲಿಮರನ್ನು ಸಂತೃಪ್ತಗೊಳಿಸಬೇಕು ಎಂದು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಆಗಾಗ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಪರವಾಗಿ ಮಾತನಾಡುತ್ತಾರೆ ಎಂದು ಕುಮಾರಸ್ವಾಮಿ ಅವರನ್ನು ಟೀಕಿಸಿದರು. ಎಲ್ಲಾ ಕ್ಷೇತ್ರಗಳಲ್ಲೂ ಆರ್ ಎಸ್ ಎಸ್ ತನ್ನ ಛಾಪನ್ನು ಮೂಡಿಸಿದೆ. ದೇಶದ ಆಡಳಿತವನ್ನು ಸಂಘ ನಡೆಸುತ್ತಿಲ್ಲ ಬದಲಾಗಿ ಮಾರ್ಗದರ್ಶನ ನೀಡುತ್ತಿದೆ. ಆರ್ ಎಸ್ ಎಸ್ ಆಡಳಿತ ನಡೆಸುತ್ತಿದೆ ಎಂಬ ವಿಪಕ್ಷಗಳ ಹೇಳಿಕೆ ಭ್ರಮೆಯಾಗಿದೆ ಎಂದರು.